ಇಷ್ಟಕ್ಕೂ ಬಾಬಾಗೆ ಹೆಲಿಕಾಪ್ಟರ್ ನೀಡಿದವರು ಯಾರು?

Digvijaysingh, Ramdev
ಭೋಪಾಲ್, ಜೂನ್ 13: ರಾಮದೇವ್ ಅವರ ಉಪವಾಸ ನಾಟಕಕ್ಕೆ ತೆರೆಬಿದ್ದಿದೆ ಎಂದು ಸಂತಸ ವ್ಯಕ್ತಪಡಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್, ಸರ್ಕಾರ ಅವರೊಂದಿಗೆ ಮತ್ತೆ ಮಾತುಕತೆ ನಡೆಸುವ ಅಗತ್ಯವಿಲ್ಲ ಎಂದು ಕಟುವಾಗಿ ಹೇಳಿದ್ದಾರೆ.

ಅವರ ಹಲವಾರು ಬೇಡಿಕೆಗಳನ್ನು ಪರಿಶೀಲಿಸುವುದಾಗಿ ಸರ್ಕಾರ ಈ ಹಿಂದೆಯೇ ಹೇಳಿದೆ. ಹೀಗಾಗಿ ಪುನಃ ಮಾತನಾಡುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ರಾಮದೇವ್ ಅವರು ದೇಣಿಗೆ ಸ್ವೀಕರಿಸುವ ಮೂಲಕ ರಾಷ್ಟ್ರದಲ್ಲಿ ಕಾಳ ಧನಸ ಪರಿವರ್ತನೆಗೆ ನೆರವಾಗುತ್ತಿದ್ದಾರೆ.

ಅಷ್ಟೇ ಅಲ್ಲ, ತಮಗೆ ಹೆಲಿಕಾಪ್ಟರನ್ನು ಗೋಪ್ಯವಾಗಿ ಕೊಡುಗೆ ನೀಡಿದವರು ಯಾರು ಎಂಬುದನ್ನು ಅವರು ಬಹಿರಂಗಗೊಳಿಸಬೇಕು ಎಂದು ಸಿಂಗ್ ಸವಾಲು ಹಾಕಿದ್ದಾರೆ. ರಹಸ್ಯವಾಗಿ ನೀಡಲಾಗುವ ಕಪ್ಪುಹಣವನ್ನು ಪರಿವರ್ತಿಸಲು ನೆರವಾಗುವ ಮೂಲಕ ಬೊಕ್ಕಸಕ್ಕೆ ತೆರಿಗೆ ವಂಚನೆ ಆಗುತ್ತಿರುವುದಕ್ಕೂ ಅವರು ಸಹಕರಿಸುತ್ತಿದ್ದಾರೆ. ಇದರಿಂದ ಸ್ವತಃ ರಾಮದೇವ್ ಕೂಡ ಅಪಾರ ಸಂಪತ್ತನ್ನು ಸಂಗ್ರಹಿಸುತ್ತಿದ್ದಾರೆ ಎಂದು ಗಂಭೀರ ಆಪಾದನೆ ಮಾಡಿದರು.

ಪ್ರಧಾನಮಂತ್ರಿ ಮತ್ತು ನ್ಯಾಯಾಂಗ ವ್ಯವಸ್ಥೆಯನ್ನು ಲೋಕಪಾಲ ವ್ಯಾಪ್ತಿಯಡಿ ತರಬೇಕು ಎಂದಿರುವ ದಿಗ್ವಿಜಯ ಸಿಂಗ್, ನಾನು ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ ಸಿಎಂ ಹುದ್ದೆಯನ್ನು ಲೋಕಾಯುಕ್ತ ವ್ಯಾಪ್ತಿಯಡಿಗೆ ತಂದಿದ್ದೆ' ಎಂದಿದ್ದಾರೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+