ಭ್ರಷ್ಟರ ವಿರುದ್ಧ ಸಮರ: ಚೀನಾಗೆ ಜನಾಗ್ರಹ ಮಾದರಿ

ಜನಾಗ್ರಹ ಆರಂಭಿಸಿದ್ದ 'I Paid a Bribe' ಮಾದರಿಯಲ್ಲೇ "I Made a Bribe" ಎಂಬ ವೆಬ್ ಆಂದೋಲನವನ್ನು ಚೀನಿಯರು ಶುರು ಮಾಡಿದ್ದಾರೆ. www.ibribery.com ಮೂಲ ವೆಬ್ ತಾಣದ ಮೂಲಕ ಭ್ರಷ್ಟಾಚಾರದ ಬಗ್ಗೆ ಜನರಿಗೆ ಅರಿವು ಮೂಡಿಸಿ, ಸ್ವಚ್ಛ, ಸುಂದರ ಚೀನಾ ರೂಪಿಸಲು ಆಲ್ಲಿನ ವೆಬ್ ಸಂಘಟಕರು ಇಚ್ಛಿಸಿದ್ದಾರೆ. ಜನಾಗ್ರಹದ ವೆಬ್ ಪುಟದಲ್ಲಿ ಸರ್ಕಾರಿ ಅಧಿಕಾರಿಗಳ ಜಾಲಕ್ಕೆ ಸಿಲುಕಿ ಲಂಚ ನೀಡಬೇಕಾದ ಪ್ರಸಂಗಗಳು, ಭ್ರಷ್ಟ ಅಧಿಕಾರಿಗಳ ವರ್ತನೆ, ಸಾರ್ವಜನಿಕರ ನೋವು, ಹೋರಾಟದ ಕಥೆಗಳಿವೆ.
ಚೀನಾದ ಕಮ್ಯೂನಿಸ್ಟ್ ಸರ್ಕಾರ ಕೂಡಾ ಭ್ರಷ್ಟಾಚಾರ ದೇಶದ ಪ್ರಮುಖ ಶತ್ರು ಎಂದು ಘೋಷಿಸಿದೆ. 2010ರಲ್ಲಿ ಟ್ರಾನ್ಸ್ಪರೆನ್ಸಿ ಇಂಟರ್ ನ್ಯಾಷನಲ್ ನಡೆಸಿದ ಸಮೀಕ್ಷೆ ಪ್ರಕಾರ ಚೀನಾದಲ್ಲಿ ಭ್ರಷ್ಟಾಚಾರ ಭಾರತಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿದ್ದು, 178 ಭ್ರಷ್ಟ ರಾಷ್ಟ್ರಗಳ ಸಾಲಿನಲ್ಲಿ ಚೀನಾ 78 ನೇಸ್ಥಾನದಲ್ಲಿದ್ದರೆ, ಭಾರತ 87 ನೇ ಸ್ಥಾನದಲ್ಲಿದೆ.
www.522phone.com ಎಂಬ ಇನ್ನೊಂದು ವೆಬ್ ತಾಣ ಕೂಡಾ ಇದೇ ರೀತಿ ಅಭಿಯಾನ ನಡೆಸುತ್ತಿದ್ದು, ಇತ್ತೀಚೆಗೆ ಭಾರಿ ಲಂಚ ನೀಡಿದ ವ್ಯಾಪಾರಿಯೊಬ್ಬನ ಕಥೆ ಪ್ರಕಟಿಸಿದೆ 3 ಮಿಲಿಯನ್ ಯಾನ್ (ರು.2.1 ಕೋಟಿ) ನೀಡಿ ಗುತ್ತಿಗೆ ಪಡೆದಿದ್ದ ವ್ಯಾಪಾರಿ ನಾನು ವ್ಯವಸ್ಥೆಯ ಕೈಗೊಂಬೆ ಎಂದು ತನ್ನ ಅಳಲು ತೋಡಿಕೊಂಡಿದ್ದಾನೆ.
ನಮ್ಮ ಐಡಿಯಾ ಕದ್ದು, ಭ್ರಷ್ಟರನ್ನು ಓಡಿಸುವ ಚೀನಿಯರ ಯೋಜನೆ ಯಶಸ್ವಿಯಾಗಲಿ. ಸೋಮವಾರ ನಮ್ಮ ವೆಬ್ ತಾಣಕ್ಕೆ ಚೀನಾ ಕಡೆಯಿಂದ ಸುಮಾರು 20 ಸಾವಿರಕ್ಕೂ ಅಧಿಕ ಹಿಟ್ಸ್ ಬಂದಿತ್ತು. ಇದರ ಮೂಲ ಹುಡುಕಿದಾಗ ಚೀನಿಯರ ವೆಬ್ ತಾಣದಲ್ಲಿ ನಮ್ಮ ಮಾದರಿ ಅಳವಡಿಸಿರುವ ಸಂಗತಿ ತಿಳಿಯಿತು. ಪ್ರಜಾಪ್ರಭುತ್ವ ಆಧಾರಿತ ಈ ಹೋರಾಟ ಕಮ್ಯೂನಿಸ್ಟ್ ದೇಶಕ್ಕೆ ರಫ್ತು ಆಗುತ್ತಿರುವುದು ಸಂತೋಷದ ವಿಷಯ ಎಂದು ಜನಾಗ್ರಹದ ವೆಬ್ ಸಂಚಾಲಕ ಟಿಆರ್ ರಘುನಂದನ್ ಪ್ರತಿಕ್ರಿಯಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications