ಪೇದೆ ನಂದೀಶನಿಗೆ ಸಿಕ್ಕಿದ್ದು ಚಪ್ಪಲಿ ಸೇವೆ, ದೇಹ ಸೇವೆಯಲ್ಲ

ಸಹದ್ಯೋಗಿ ಎಂಬ ಕನಿಕರದಿಂದ ನಾನು, ಆತನನ್ನು ಕ್ಷಮಿಸಿದೆ. ಆದರೆ, ಆತ ಈ ಘಟನೆಯನ್ನುನನ್ನ ಗಮನಕ್ಕೆ ಬಾರದಂತೆ ರಹಸ್ಯ ಕ್ಯಾಮೆರಾದಲ್ಲಿ ಚಿತ್ರೀಕರಿಸಿ, ಈಗ ಸಾರ್ವತ್ರಿಕವಾಗಿ ಬಹಿರಂಗಪಡಿಸಿದ್ದಾನೆ. ಇದು ಸಹಮತ ಸರಸವಲ್ಲ ಎಂದು ಸಕಲೇಶಪುರದಲ್ಲಿ ಪೇದೆಯಾಗಿದ್ದ ಚಂದ್ರಕಲಾ ಸ್ಪಷ್ಟಪಡಿಸಿದ್ದಾರೆ.
ಈ ಘಟನೆ ನಡೆದು ಆಗಲೇ ಒಂದು ವರ್ಷ 2 ತಿಂಗಳ ಆಗಿದೆ. ಕಳೆದ 17 ವರ್ಷಗಳಿಂದಲೂ ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಈ ಅವಧಿಯಲ್ಲಿ ಯಾರೊಂದಿಗೂ ಅಸಭ್ಯವಾಗಿ ವರ್ತಿಸಿಲ್ಲ. ಉತ್ತಮ ಚಾರಿತ್ರ್ಯದಾಖಲೆಗಳನ್ನು ಹೊಂದಿದ್ದೇನೆ. ನನ್ನ ಸೇವೆಯನ್ನು ಪ್ರಶಂಸಿಸಿ, ಸಾರ್ವಜನಿಕರು ಹಾಗೂ ಪತ್ರಕರ್ತರೇ ಸನ್ಮಾನಿಸಿದ್ದಾರೆ. ನಂದೀಶನಿಗೆ ಅಂದು ಕ್ಷಮೆ ನೀಡಿದ್ದೆ ತಪ್ಪಾಯ್ತು ಎಂದು ಅನ್ನಿಸತೊಡಗಿದೆ ಎಂದು ಚಂದ್ರಕಲಾ ಹೇಳುತ್ತಾರೆ.
ಸಹಮತ ಸರಸವಲ್ಲ: ದೃಶ್ಯಾವಳಿಗಳಲ್ಲಿ ನಾನು ಪ್ರತಿಭಟಿಸುತ್ತಿರುವುದನ್ನು ನೋಡಬಹುದು. ನನ್ನ ಸಹಕಾರ ಇರುವ ದೃಶ್ಯಗಳು ಇದ್ದಲ್ಲಿ ಯಾವುದೇ ಶಿಕ್ಷೆಗೂ ಸಿದ್ಧನಿದ್ದೇನೆ ಎಂದು ಚಂದ್ರಕಲಾ ಸವಾಲು ಹಾಕುತ್ತಾರೆ. ಈ ಹಿಂದೆ ಇದ್ದ ಡಿವೈಎಸ್ ಪಿ ಕಲಾ ಕೃಷ್ಣಮೂರ್ತಿ ಅವರು ನನಗೆ ಹತ್ತಿರವಾಗಿದ್ದನ್ನು ಸಹಿಸ ಸಹದ್ಯೋಗಿಗಳ ಪಿತೂರಿ ಕೆಲಸ ಇದು. ಪೇದೆಗಳಾದ ನಂದೀಶ, ಜಗದೀಶ, ಮಲ್ಲಿಕಾರ್ಜುನ, ಧರಣೇಂದ್ರ ಎಂಬುವವರು ತಮ್ಮ ವಿರುದ್ಧ ಪಿತೂರಿ ನಡೆಸಿರುವ ಫಲ ಇದು ಎಂದು ಸದ್ಯ ಆಲೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಚಂದ್ರಕಲಾ ನೊಂದು ನುಡಿಯುತ್ತಾರೆ.
ಪಟ್ಟಣ ಪೊಲೀಸ್ ಠಾಣೆಯಲ್ಲೇ ಕಾರ್ಯ ನಿರ್ವಹಿಸುತ್ತಿರುವ ಪೇದೆ ನಂದೀಶ, ಕರ್ತವ್ಯದ ಮೇರೆಗೆ ಜಿಲ್ಲೆಯಿಂದ ಹೊರಗಿದ್ದು, ಸಂರ್ಪಕಕ್ಕೆ ಸಿಗುತ್ತಿಲ್ಲ. ಈತ ಆಲೂರು ತಾಲ್ಲೂಕಿನವನಾಗಿದ್ದು, ಕಳೆದ ಎರಡೂವರೆ ವರ್ಷಗಳಿಂದ ಸೇವೆಯಲ್ಲಿದ್ದಾನೆ. ತಿಂಗಳ ಹಿಂದೆಯಷ್ಟೇ ಈತನಿಗೆ ವಿವಾಹವಾಗಿದೆ.
ಎಂಎಂಎಸ್ ಪ್ರಕರಣದ ಸತ್ಯಾಸತ್ಯತೆಯನ್ನು ಅರಿಯಲು ತನಿಖೆ ನಡೆಸಲಾಗುವುದು. ತಪ್ಪು ರುಜುವಾತಾದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದು ಡಿವೈಎಸ್ ಪಿ ಉಪೇಂದ್ರ ಸ್ಥಳೀಯ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications