ಮಂಗಳೂರು ಎಸ್‌ಇಝಡ್ : 560 ನಿರ್ವಸಿತರಿಗೆ ಉದ್ಯೋಗ

Mangalore district in-charge minister Krishna Palemar
ಮಂಗಳೂರು, ಜೂ. 14 : ಮಂಗಳೂರು ವಿಶೇಷ ಆರ್ಥಿಕ ವಲಯ ಸ್ಥಾಪನೆಗೆ ಭೂಮಿ ನೀಡಿ ನಿರ್ವಸಿತರಾದವರ ಕುಟುಂಬದವರು ಸಂಸ್ಥೆಯಲ್ಲಿ ಉದ್ಯೋಗ ಕೊಡುವಂತೆ ಆಗ್ರಹಿಸಿ ನಡೆಸುತ್ತಿದ್ದ ಧರಣಿಯನ್ನು ಕೈಬಿಟ್ಟಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಜೆ.ಕೃಷ್ಣ ಪಾಲೇಮಾರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಂಸ್ಥೆಯ ಹಿರಿಯ ಅಧಿಕಾರಿಗಳು ಮತ್ತು ನಿರ್ವಸಿತರ ನಾಯಕರುಗಳ ಸಭೆಯಲ್ಲಿ ನಿರ್ವಸಿತರಿಗೆ ಉದ್ಯೋಗ ನೀಡುವ ಒಪ್ಪಂದಕ್ಕೆ ಬರಲಾಗಿದೆ.

ಅದರಂತೆ ವಿಶೇಷ ಆರ್ಥಿಕ ವಲಯದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 560 ಮಂದಿಗೆ ಉದ್ಯೋಗ ಕೊಡಲು ಸಮ್ಮತಿಸಲಾಯಿತು. ಉದ್ಯೋಗ ಬೇಡ ಎನ್ನುವವರಿಗೆ ನಗದು ಪರಿಹಾರ ಮೊತ್ತ ನೀಡಲು ಸಭೆಯಲ್ಲಿ ನಿರ್ಣಯಿಸಲಾಯಿತು. ಉದ್ಯೋಗ ಬೇಡ ಎನ್ನುವವರು 7 ಲಕ್ಷ ರೂಪಾಯಿ ನಗದು ಪಡೆಯಲಿದ್ದಾರೆ.

ಈ ಮೂಲಕ ಕಳೆದ ಹದಿನಾಲ್ಕು ದಿನಗಳಿಂದ ನಿರ್ವಸಿತರು ನಡೆಸುತ್ತಿದ್ದ ಅಹೋರಾತ್ರಿ ಧರಣಿಗೆ ತೆರೆಬಿದ್ದಿದೆ. ಈ ಸಭೆಯಲ್ಲಿ ವಿಧಾನಸಭೆಯ ಉಪಸಭಾಪತಿ ಎನ್.ಯೋಗೀಶ್ ಭಟ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಅಭಯಚಂದ್ರ ಜೈನ್ ಸಹಿತ ಪ್ರಮುಖರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+