ಶಬರಿಮಲೆಯಲ್ಲಿ ಬುಧವಾರದಿಂದ ಮೊಳಗಲಿದೆ ಕನ್ನಡ ಭಕ್ತಿಗೀತೆಗಳು

ಶಬರಿಮಲೆ ದೇಶದ ಎಲ್ಲಾ ಭಾಗಗಳಿಂದಲೂ ಭಕ್ತರನ್ನು ಸೆಳೆಯುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ದೇವಸ್ಥಾನದ ಆಡಳಿತ ನಡೆಸುತ್ತಿರುವ ತಿರುವಾಂಕೂರು ದೇವಸ್ವಂ ಮಂಡಳಿ ತಿಳಿಸಿದೆ.
ಇನ್ನು ಮುಂದೆ ಮುಂಜಾನೆ ಗರ್ಭ ಗುಡಿ ತೆರೆಯುವಾಗ ಮತ್ತು ಸಂಜೆ ದೇವಸ್ಥಾನ ಮುಚ್ಚುವಾಗ ಮಲೆಯಾಳಂ ಮತ್ತು ಸಂಸ್ಕೃತ ಗೀತೆಯೊಂದಿಗೆ ಕನ್ನಡ, ಹಿಂದಿ, ತೆಲಗು ಮತ್ತು ತಮಿಳು ಭಕ್ತಿ ಗೀತೆಗಳನ್ನು ಪ್ರಸಾರ ಮಾಡಲಾಗುವುದು. ಹಲವಾರು ದಶಕಗಳಿಂದ ದೇವಸ್ಥಾನ ತೆರೆಯುವಾಗ ಮತ್ತು ಮುಚ್ಚುವಾಗ ಯೇಸುದಾಸ್ ಮತ್ತು ಜಯನ್-ವಿಜಯನ್ ಜೋಡಿ ಹಾಡಿದ ಹಾಡು ಹಾಕಲಾಗುತ್ತಿತ್ತು.
ಈಗ ಸಿರ್ ಕಾಳಿ ಗೋವಿಂದರಾಜನ್, ಎಸ್.ಪಿ. ಬಾಲಸುಬ್ರಹ್ಮಣ್ಯಂ, ವೀರಮನ್-ಕಣ್ಣನ್ ಮತ್ತು ನಾರಾಯಣ ರೆಡ್ಡಿ ಅವರು ಹಾಡಿರುವ ವಿವಿಧ ಭಾಷೆಗಳ ಹಾಡಿನ ನೂತನ ಸಿ.ಡಿ.ಯನ್ನು ಸಿದ್ದಗೊಳಿಸಲಾಗಿದೆ. ಪ್ರತಿ ವರ್ಷ ನವೆಂಬರ್-ಜನವರಿ ಅವಧಿಯಲ್ಲಿ 30 ದಶ ಲಕ್ಷಕ್ಕೂ ಹೆಚ್ಚು ಮಂದಿ ಭಕ್ತರು ಶಬರಿಮಲೆಗೆ ಭೇಟಿ ನೀಡುತ್ತಾರೆ. ಇವರಲ್ಲಿ ಹೆಚ್ಚು ಮಂದಿ ಕರ್ನಾಟಕ, ತಮಿಳುನಾಡು ಮತ್ತು ಆಂಧ್ರ ಪ್ರದೇಶದವರಾಗಿರುತ್ತಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications