ಜಯಲಲಿತಾ ಕಿವಿಯಲ್ಲಿ ಶೀಲಾ ದೀಕ್ಷಿತ್ ಹೇಳಿದ್ದೇನು !?

ಈ ಹಿನ್ನೆಲೆಯಲ್ಲಿ, ತಮಿಳುನಾಡು ಮುಖ್ಯಮಂತ್ರಿ ಜಯಾ ಜತೆ ದೆಹಲಿಯ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ಸೋಮವಾರ ಮಾತುಕತೆ ನಡೆಸಿದರು. ಯುಪಿಎ ಅಧಿನಾಯಕಿ ಸೋನಿಯಾ ಗಾಂಧಿ ರಾಜಧಾನಿಯಿಂದ ಹೊರಗಿರುವುದರಿಂದ ಜಯಾ ಆತಿಥ್ಯವನ್ನು ಶೀಲಾ ಅವರೇ ನೋಡಿಕೊಳ್ಳುತ್ತಿದ್ದಾರೆ.
ಮೇಡಂ ಬರುವವರೆಗೂ ಅನುಕ್ಷಣವೂ ಜಯಾ ಅವರನ್ನು ಶೀಲಾ ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದಾರೆ. ಸೋನಿಯಾ ನಿರ್ದೇಶನಗಳನ್ನು ಚಾಚೂ ತಪ್ಪದೆ ಪಾಲಿಸುತ್ತಿರುವ ಶೀಲಾ ಮಧ್ಯೆ ಮಧ್ಯೆ, ಸೋನಿಯಾರ ರಾಜಕೀಯ ಸಂದೇಶಗಳನ್ನು ಜಯಲಲಿತಾ ಕಿವಿಗೆ ಹಾಕುತ್ತಿದ್ದಾರೆ. ಯುಪಿಎ ಮತ್ತು ಅಣ್ಣಾ ಡಿಎಂಕೆ ಸಂಭವನೀಯ ಮೈತ್ರಿ ಬಗ್ಗೆ ಮಂಗಳವಾರ ಅಧಿಕೃತ ಘೋಷಣೆ ಹೊರಬೀಳಬಹುದು ಎಂದು ನಿರೀಕ್ಷಿಸಲಾಗಿದೆ.
ಜಯಲಲಿತಾ ಮಂಗಳವಾರ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಕಂಡು ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಕುರಿತು ಚರ್ಚಿಸಲಿದ್ದಾರೆ. ಹಣಕಾಸು ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದು, ಇದನ್ನು ಸರಿದಾರಿಗೆ ತರಲು ಕೇಂದ್ರದ ನೆರವು ಕೋರಿ ಮನವಿ ಸಲ್ಲಿಸಲಿದ್ದಾರೆ. ಬಳಿಕ ಯೋಜನಾ ಆಯೋಗದ ಉಪಾಧ್ಯಕ್ಷ ಡಾ. ಮಾಂಟೆಕ್ ಸಿಂಗ್ ಅಹ್ಲುವಾಲಿಯಾ ಅವರನ್ನು ಭೇಟಿ ಮಾಡುವರು.
ಪ್ರಧಾನಿ ಅವರನ್ನು ಜಯಾ ಭೇಟಿ ಮಾಡುತ್ತಿರುವುದಕ್ಕೆ ವಿಶೇಷ ಅರ್ಥವಿಲ್ಲ ಎಂದು ಹೇಳಲಾಗುತ್ತಿದ್ದರೂ ಮಾತುಕತೆ ವೇಳೆ ರಾಜಕೀಯ ಬೆಳವಣಿಗೆ ಕುರಿತು ಪ್ರಸ್ತಾಪವಾಗಬಹುದು ಎಂದು ನಿರೀಕ್ಷಿಸಲಾಗಿದೆ. ತಮಿಳುನಾಡು ಮತ್ತು ಪುದುಚೇರಿ ಚುನಾವಣೆ ಸೋಲಿಗೆ ಕಾಂಗ್ರೆಸ್ ಮತ್ತು ಡಿಎಂಕೆ ಪರಸ್ಪರರ ವಿರುದ್ಧ ದೂಷಣೆ ಮಾಡುತ್ತಿವೆ. ಸೋಲಿಗೆ 2ಜಿ ಹಗರಣ ಕಾರಣ ಎಂದು ಕಾಂಗ್ರೆಸ್ ಈಗಾಗಲೇ ಹೇಳಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications