ಅಮರನಾಥ ಯಾತ್ರೆ ವಿವಾದ: ಪೂಜೆ ಸಂಪ್ರದಾಯಕ್ಕೆ ಭಂಗ

ಹಿಮಾಲಯದ ದುರ್ಗಮ ಗುಹೆಯಲ್ಲಿ ಜೂನ್ ವೇಳೆಗೆ ಉದ್ಭವವಾಗುವ ನೈಸರ್ಗಿಕ ಹಿಮಲಿಂಗಕ್ಕೆ ಭಕ್ತರು ಪೂಜೆ ಸಲ್ಲಿಸುವುದು ಪರಂಪರಾಗತ. ಆದರೆ ಈ ಬಾರಿ ಜೂನ್ 29ರಿಂದ ಯಾತ್ರೆ ಆರಂಭಿಸಿ ಎಂದು ಶ್ರೀ ಅಮರನಾಥ ಯಾತ್ರಾ ಮಂಡಳಿಯು ಭಕ್ತರಿಗೆ ಸೂಚಿಸಿತ್ತು. ಆದರೆ ಭಕ್ತರು ಜೂನ್ 15ರಿಂದಲೇ ಯಾತ್ರೆ ಆರಂಭಿಸುತ್ತೇವೆಂದು ಪಟ್ಟು ಹಿಡಿದಿದ್ದರು. ಅದರಂತೆ 4 ಮಂದಿ ಹೆಲಿಕಾಪ್ಟರ್ ನಲ್ಲಿ ಹೋಗಿ ಹಿಮಲಿಂಗಕ್ಕೆ ಪೂಜೆ ಸಲ್ಲಿಸುವ ಒಪ್ಪಂದಕ್ಕೆ ಬರಲಾಗಿತ್ತು.
ಆದರೆ ಬುಧವಾರ ಈ ಒಪ್ಪಂದ ಕೈಗೂಡಲಿಲ್ಲ. ಮೂಲ ಸ್ಥಳದಿಂದ 6 ಕಿ.ಮೀ. ದೂರವಿರುವ ಅನಂತನಾಗ ಜಿಲ್ಲೆಯ ಪಂಜ್ತರಣಿ ಎಂಬಲ್ಲಿ ಭಕ್ತರು ಪೂಜೆ ಸಲ್ಲಿಸಿದರು. ಹಿಂದು ಪುರಾಣದ ಪ್ರಕಾರ ಅಮರನಾಥದ ಗುಹೆಯಲ್ಲಿ ಕುಳಿತು ಈಶ್ವರನು ಪಾರ್ವತಿಗೆ ಅಮರತ್ವವನ್ನು ಬೋಧಿಸಿದ ಎನ್ನಲಾಗುತ್ತದೆ. ಪ್ರತಿವರ್ಷ ಇಲ್ಲಿಗೆ ಸಾವಿರಾರು ಭಕ್ತರು ಜಾರುವ ಹಿಮದ ಮಧ್ಯೆ ಕಾಲ್ನಡಿಗೆಯಲ್ಲಿ ಬಂದು ಪೂಜೆ ಸಲ್ಲಿಸುತ್ತಾರೆ. 2005ರಿಂದ ಪ್ರತಿವರ್ಷ 2 ತಿಂಗಳ ಕಾಲ ಪೂಜೆಗೆ ಅವಕಾಶ ನೀಡುತ್ತಿದ್ದ ಸರ್ಕಾರ ಈ ಬಾರಿ ಅದನ್ನು 46 ದಿನಗಳಿಗೆ ಇಳಿಸಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications