ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪರನ್ನು ಜೈಲಿಗೆ ತಳ್ಳುವತ್ತ ಕಾಂಗ್ರೆಸ್‌ ನಡಿಗೆ

By Srinath
|
Google Oneindia Kannada News

siddaramaiah
ಕೋರಾ (ತುಮಕೂರು), ಜೂನ್ 12: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಜೈಲಿಗೆ ತಳ್ಳುವ ಮಾತನ್ನಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ವ್ಯಾಪಕ ಭ್ರಷ್ಟಾಚಾರ ನಡೆಸಿರುವ ಯಡಿಯೂರಪ್ಪ ಜೈಲಿಗೆ ಹೋಗುವುದು ಖಚಿತ ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ.

ಬೇರುಮಟ್ಟದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಪಡೆಯನ್ನು ಸಜ್ಜುಗೊಳಿಸಲು ಹಾಗೂ ಬಿಜೆಪಿಯ ಭ್ರಷ್ಟಾಚಾರದ ಬಗ್ಗೆ ಶ್ರೀಸಾಮಾನ್ಯರಿಗೆ ಅರಿವು ಮೂಡಿಸಲು ಕಾಂಗ್ರೆಸ್‌ ಬುಧವಾರದಿಂದ ಆರಂಭಿಸಿರುವ 60 ದಿನಗಳ 'ಕಾಂಗ್ರೆಸ್‌ ನಡಿಗೆ ಜನರ ಬಳಿಗೆ' ಆಂದೋಲನದ ಉದ್ಘಾಟನಾ ಸಮಾರಂಭದಲ್ಲಿ ಸಿದ್ದರಾಮಯ್ಯ ಈ ಎಚ್ಚರಿಕೆ ನೀಡಿದರು.

ತುಮಕೂರಿನ ಕೋರಾ ಗ್ರಾಮದಲ್ಲಿ ನಡೆದ ಈ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಸಂದರ್ಭದಲ್ಲೂ ಚುನಾವಣೆ ಎದುರಾಗಬಹುದು. ಆ ಸಂದರ್ಭದಲ್ಲಿ ರಾಜ್ಯದ ಜನತೆ ಕಾಂಗ್ರೆಸ್‌ಗೆ ಬೆಂಬಲ ನೀಡಿದರೆ ದುರಾಡಳಿತ ನಡೆಸುತ್ತಿರುವ ಯಡಿಯೂರಪ್ಪ ಹಾಗೂ ಅವರ ಸಚಿವ ಸಂಪುಟದ ಭ್ರಷ್ಟ ಸದಸ್ಯರನ್ನು ಜೈಲಿಗೆ ಕಳುಹಿಸುವುದು ಖಚಿತ ಎಂದು ಹೇಳಿದರು.

ಸಮಾರಂಭ ಉದ್ಘಾಟಿಸಿದ ಗೋವಾ ಮಾಜಿ ಮುಖ್ಯಮಂತ್ರಿ ಲೂಸಿನೋ ಫೆಲೆರೋ, ಭ್ರಷ್ಟಾಚಾರ ನಡೆಸಿದರು ಎಂಬ ಆರೋಪ ಬಂದ ಮಾತ್ರಕ್ಕೆ ಕಲ್ಮಾಡಿ, ಎ. ರಾಜಾ ಹಾಗೂ ಕನಿಮೋಳಿ ಜೈಲು ಸೇರಿದ್ದಾರೆ. ಆದರೆ, 2ಜಿ ಸ್ಪೆಕ್ಟ್ರಂ ಹಾಗೂ ಕಾಮನ್‌ವೆಲ್ತ್‌ ಹಗರಣಕ್ಕಿಂತಲೂ ದೊಡ್ಡ ಮಟ್ಟದ ಗಣಿ ಅದಿರು ಭ್ರಷ್ಟಾಚಾರ ನಡೆಸಿದ ಯಡಿಯೂರಪ್ಪ ಇನ್ನೂ ಏಕೆ ಜೈಲಿಗೆ ಹೋಗಿಲ್ಲ ಎಂಬುದಕ್ಕೆ ಬಿಜೆಪಿ ವರಿಷ್ಠರು ಉತ್ತರಿಸಬೇಕು ಎಂದು ಆಗ್ರಹಿಸಿದರು.

English summary
Although the Chief Minister B S Yeddyurappa has been spared of land scam noose, temporarily, he would definitely be sent to jail once Congress comes to power, Leader of Opposition in Legislative Assembly Siddaramaiah said in Tumkur on Wednesday (June 15).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X