ಬೆಂಗಳೂರಿನಲ್ಲಿ ಕರುಳುಬೇನೆ, ಚಿಕುನ್ ಗೂನ್ಯ ಅಟ್ಯಾಕ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅನೇಕ ಆಸ್ಪತ್ರೆಗಳಲ್ಲಿ ಕರಳುಬೇನೆ, ಚಿಕುನ್ ಗೂನ್ಯಾ ಪ್ರಕರಣಗಳು ದಾಖಲಾಗಲು ಪ್ರಾರಂಭವಾಗಿವೆ. 2011ರಲ್ಲಿ ಒಟ್ಟು 511 ಪ್ರಕರಣಗಳು ದಾಖಲಾಗಿವೆ. ನಾವು ಈಗಲೆ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಈ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಲಿವೆ ಎಂದು ಬಿಬಿಎಂಪಿ ವೈದ್ಯಾಧಿಕಾರಿ ಎಚ್ಚರಿಸಿದ್ದಾರೆ.
ಬೆಂಗಳೂರಿನ ನಲ್ಲಿಗಳಲ್ಲಿ ಹರಿದುಬರುವ ಕುಡಿಯುವ ನೀರು ಸ್ವಚ್ಛವಾಗಿರುವುದಿಲ್ಲವೆಂಬುದನ್ನು ಜನರು ಮನಗಾಣಬೇಕಾಗಿದೆ. ಅನೇಕ ಕಡೆಗಳಲ್ಲಿ ಅಭಿವೃದ್ಧಿ(?) ಕಾರ್ಯಗಳು ನಡೆಯುತ್ತಿರುವುದರಿಂದ ನೆಲ ಅಗಿತದ ಕಾರಣ ನೀರಿನ ಪೈಪುಗಳು ಒಡೆದು ಚರಂಡಿ ನೀರು ಕುಡಿಯುವ ನೀರಿನಲ್ಲಿ ಸೇರಿಕೊಳ್ಳುತ್ತಿದೆ. ಇದೇ ನೀರನ್ನು ಜನರು ಸೇವಿಸುತ್ತಿರುವುದು ರೋಗ ಬರಲು ಕಾರಣವಾಗಿದೆ.
ಮೇಲಿನ ಸಂಖ್ಯೆಗಳು ಬೌರಿಂಗ್ ಮತ್ತು ವಿಕ್ಟೋರಿಯಾ ಆಸ್ಪತ್ರೆಗಳಲ್ಲಿ ದಾಖಲಾದ ರೋಗಿಗಳ ಸಂಖ್ಯೆ. ಇನ್ನೂ ಖಾಸಗಿ ಆಸ್ಪತ್ರೆಗಳಿಗೆ ಹೋಗುವವರು ಎಷ್ಟು ಜನರೋ? ಈ ನಿಟ್ಟಿನಲ್ಲಿ ಜಲಮಂಡಳಿ ಇಲಾಖೆಯ ಜವಾಬ್ದಾರಿ ಅಧಿಕವಾಗಿದೆ. ಎಲ್ಲೆಲ್ಲಿ ಕುಡಿಯುವ ನೀರಿನಲ್ಲಿ ಚರಂಡಿ ನೀರು ಸೇರುತ್ತಿದೆಯೋ ಅಲ್ಲೆಲ್ಲ ಪೈಪುಗಳನ್ನು ಬದಲಿಸಬೇಕಿದೆ.
ಎಲ್ಲಕ್ಕಿಂತ ಹೆಚ್ಚಾಗಿ, ಜನರೇ ಎಚ್ಚೆತ್ತುಕೊಳ್ಳಬೇಕು. ಎಲ್ಲೆಂದರಲ್ಲಿ ನೀರು ಕುಡಿಯುವುದು, ಸಿಕ್ಕದ್ದು ತಿನ್ನುವುದು, ಅಪರಿಚಿತರ ಸಂಪರ್ಕಕ್ಕೆ ಬರುವುದು, ರೋಗ ಬಂದ ಕೂಡಲೆ ಕೂಡಲೆ ಚಿಕಿತ್ಸೆ ಪಡೆದುಕೊಳ್ಳದಿರುವುದನ್ನು ಕಡಿಮೆ ಮಾಡಬೇಕಿದೆ. ರೋಗ ಬಂದ ನಂತರ ಚಿಕಿತ್ಸೆ ಪಡೆಯುವ ಬದಲು ಮುನ್ನೆಚ್ಚರಿಕೆ ಕೈಗೊಳ್ಳುವುದೇ ಕ್ಷೇಮ ಮತ್ತು ಜಾಣತನ.
ಎಚ್ಚರಿಕೆಯ ಮಾತುಗಳು
* ಮನೆಯಲ್ಲಿ, ಹೊಟೇಲುಗಳಲ್ಲಿ ಕುಡಿಯುವ ನೀರಿನ ಬಗ್ಗೆ ಎಚ್ಚರಿಕೆವಹಿಸಿ.
* ತಣ್ಣೀರಿನ ಬದಲು ಕಾದು ಆರಿಸಿದ ನೀರು ಕುಡಿಯುವುದನ್ನು ರೂಢಿಸಿಕೊಳ್ಳಿ.
* ಸಾಧ್ಯವಾದ ಮಟ್ಟಿಗೆ ಹೊರಗಡೆಯ ಆಹಾರ ತಿನ್ನುವುದನ್ನು ನಿಲ್ಲಿಸಿ.
* ಕೆಲಸದಿಂದ ಮನೆಗೆ ಮರಳಿದ ಕೂಡಲೆ ಸೋಪಿನಿಂದ ಕೈ ಚೆನ್ನಾಗಿ ತೊಳೆಯಿರಿ.
* ಅನುಮಾನ ಬರುತ್ತಲೇ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯಿರಿ.
* ಹೂಕುಂಡಗಳಲ್ಲಿ, ಚಿಪ್ಪುಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಿ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications