ಯಡಿಯೂರಪ್ಪ ಆಣೆ-ಪ್ರಮಾಣಕ್ಕೆ ರೆಡ್ಡಿ ಥಂಬ್ಸ್ ಅಪ್
'ನಿಮ್ಮೊಂದಿಗೆ ನಾವು" ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಪೂರ್ವದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸಸಿನೆಟ್ಟು ಮಾಧ್ಯಮಗಳ ಜೊತೆ ಭಾನುವಾರ ಮಾತನಾಡಿದ ಅವರು, ಯಡಿಯೂರಪ್ಪನವರು ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದ್ದನ್ನು ಅವರು ಬೆಂಬಲಿಸಿದರು.
ಸಿದ್ದು ರಾಜಕೀಯ ನಿವೃತ್ತಿ ಪಡೆಯುವರೆ? : ಮುಂದಿನ ಚುನಾವಣೆಯಲ್ಲೂ ಬಿಜೆಪಿ ಗೆದ್ದೇ ಗೆಲ್ಲುತ್ತದೆ. ಬಿಜೆಪಿ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದಲ್ಲಿ ಸಿದ್ಧರಾಮಯ್ಯ ರಾಜಕೀಯದಿಂದ ನಿವೃತ್ತಿ ಪಡೆಯುವರೇ? ಎಂದು ಜನಾರ್ದನ ರೆಡ್ಡಿ ಸಿದ್ದರಾಮಯ್ಯನವರಿಗೆ ಸವಾಲು ಹಾಕಿದರು. ಬಿಜೆಪಿ ಇನ್ನೂ ಐದು ದಶಕಗಳ ಕಾಲ ರಾಜ್ಯದಲ್ಲಿ ಅಧಿಕಾರ ನಡೆಸಲಿದೆ. ಕಾಂಗ್ರೆಸ್ - ಜೆಡಿಎಸ್ ಈ ಅವಧಿಯಲ್ಲಿ ವಿರೋಧ ಪಕ್ಷದ ಸ್ಥಾನಕ್ಕೇ ಸಮಾಧಾನ ಪಡಬೇಕಾಗುತ್ತದೆ ಎಂದು ಅವರು ಭವಿಷ್ಯ ನುಡಿದರು.
ಕಾಂಗ್ರೆಸ್ ಪುನಶ್ಚೇತನಕ್ಕೆ ಎಸ್.ಎಂ. ಕೃಷ್ಣ ಅಥವಾ ಯಾರು ಬಂದರೂ ಅದು ಚೇತರಿಸಿಕೊಳ್ಳುವುದಿಲ್ಲ. ಬಿಜೆಪಿಯನ್ನು ಅಧಿಕಾರದಿಂದ ದೂರ ತಳ್ಳಲಿಕ್ಕಾಗಿ ಜೆಡಿಎಸ್ - ಕಾಂಗ್ರೆಸ್ ಪದೇ ಪದೇ ವಿಫಲಯತ್ನ ನಡೆಸುತ್ತಿವೆ. ಬಿಜೆಪಿ ಮತ್ತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಡಳಿತ ಜನಪರವಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿಯದ್ದೇ ಪದೇ ಪದೇ ಗೆಲುವು ಎಂದರು.