ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪ ದಾಖಲೆ ಹೊತ್ತು ದೆಹಲಿ ತಲುಪಿದ ಎಚ್‌.ಡಿ.ಕೆ

By Srinath
|
Google Oneindia Kannada News

kumarswamy
ಬೆಂಗಳೂರು, ಜೂನ್ 22: ಇತ್ತ ಸ್ವಂತ ಜಿಲ್ಲೆ ಹಾಸನದಲ್ಲಿ ಯಡಿಯೂರಪ್ಪನಿಂದಾಗಿ ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲವೆಂದುದು ದೂಷಿಸಿ ಅಪ್ಪನನ್ನು ಉಪವಾಸಕ್ಕೆ ಕೂಡಿಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಷ್ಟ್ರದ ರಾಜಧಾನಿ ದೆಹಲಿಯನ್ನು ತಲುಪಿಕೊಂಡಿದ್ದು ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಹಗರಣಗಳ ಕುರಿತು ದಾಖಲೆಗಳನ್ನು ಬಿಡುಗಡೆ ಮಾಡುವುದು ಬಹುತೇಕ ಖಚಿತವಾಗಿದೆ.

ಕುಮಾರಸ್ವಾಮಿ ಅವರು ದಾಖಲೆಗಳ ಸಹಿತ ಮಂಗಳವಾರ ರಾತ್ರಿ 8.30ರ ವಿಮಾನದಲ್ಲಿ ದೆಹಲಿ ತಲುಪಿದ್ದಾರೆ. ಬುಧವಾರ ಮಧ್ಯಾಹ್ನ 3 ಗಂಟೆಗೆ (ಜೂನ್ 22) ಕಾನ್‌ಸ್ಟಿಟ್ಯೂಷನ್‌ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ದಾಖಲೆಗಳನ್ನು ಬಿಡುಗಡೆ ಮಾಡಲಿದ್ದಾರೆ. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ, ಅವರ ಪುತ್ರರು ಮತ್ತು ಅಳಿಯಂದಿರ ಹೊಸ ಹಗರಣ ಇದಾಗಿದೆ ಎಂದು ಹೇಳಲಾಗಿದೆ.

ಬಿಜೆಪಿ ಹೈಕಮಾಂಡ್‌ ಈಗಲಾದರೂ ರಾಜ್ಯದಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ಗಮನಿಸಲಿ ಎಂಬ ಕಾರಣದಿಂದ ನವದೆಹಲಿಯಲ್ಲಿಯೇ ದಾಖಲೆ ಬಿಡುಗಡೆ ಮಾಡುವುದು ಹಿಂದಿನ ಉದ್ದೇಶವಾಗಿದೆ. ಯಡಿಯೂರಪ್ಪ ಭಾಗಿಯಾಗಿದ್ದಾರೆನ್ನಲಾದ 4 ಹಗರಣಗಳ ಬಗ್ಗೆ ಸಾಕ್ಷ್ಯ, ದಾಖಲೆಗಳನ್ನು ಅವರು ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಈ ಮಧ್ಯೆ, ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡುವ ವಿಚಾರದ ಬಗ್ಗೆ ಈ ತಿಂಗಳ 27ರವರೆಗೆ ಸಾರ್ವಜನಿಕವಾಗಿ ಮಾತನಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಬೆಂಗಳೂರಿನಲ್ಲಿ ಹೇಳಿದ್ದಾರೆ.

English summary
Karnataka JDS president HD Kumaraswamy is all set to embarrass senior central leaders of BJP along with Chief Minister B. S. Yeddyurappa by releasing documents in support of his allegations against BSY in New Delhi on Wednesday (June 22).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X