ಇಲಾಖೆಗಳ ಮಧ್ಯೆ ಜಟಾಪಟಿ: 'ನಮ್ಮ ಮೆಟ್ರೊ' ಕಾಮಗಾರಿ ಸ್ಥಗಿತ

namma metro
ಬೆಂಗಳೂರು, ಜೂನ್ 23: ನಗರ ರೈಲ್ವೆ ನಿಲ್ದಾಣದ ವ್ಯಾಪ್ತಿಯಲ್ಲಿ ನಡೆಯುತ್ತಿರುವ 'ನಮ್ಮ ಮೆಟ್ರೊ' ಕಾಮಗಾರಿಗಳನ್ನು ತಕ್ಷಣ ನಿಲ್ಲಿಸುವಂತೆ ರೈಲ್ವೆ ಇಲಾಖೆಯು ಬೆಂಗಳೂರು ಮೆಟ್ರೊ ರೈಲು ನಿಗಮಕ್ಕೆ (ಬಿಎಂಆರ್ ಸಿಎಲ್) ಸೂಚಿಸಿದೆ.

ಪ್ರಸ್ತುತ, ಒಟ್ಟು ಮೂರು ಕಡೆ (ಪ್ಲಾಟ್‌ಫಾರಂ ರಸ್ತೆ, ಅಯ್ಯಪ್ಪಸ್ವಾಮಿ ದೇವಾಲಯ ಮತ್ತು ರೈಲ್ವೆ ಇಲಾಖೆ ನೌಕರರ ವಸತಿಗೃಹಗಳು) ಮೆಟ್ರೊ ನೆಲದಡಿಯ ನಿಲ್ದಾಣ ಮತ್ತು ಸುರಂಗ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದೆ. ಈ ಮೂರನ್ನೂ ತಡೆಹಿಡಿಯುವಂತೆ ಇಲಾಖೆ ಸೂಚನೆ ನೀಡಿದೆ.

ಮುಖ್ಯವಾಗಿ, ತನ್ನ ಜತೆಗಿನ ಒಪ್ಪಂದದಂತೆ ಮೆಟ್ರೊ ಕಾಮಗಾರಿ ನಡೆಸುತ್ತಿಲ್ಲ ಎಂಬುದು ಇಲಾಖೆಯ ಅಸಮಾಧಾನಕ್ಕೆ ಕಾರಣ ಎನ್ನಲಾಗಿದೆ. ಮೆಟ್ರೊ ನಿಗಮದವರು ರೈಲ್ವೆ ವಸತಿ ಗೃಹಗಳಿಗೆ ಸೂಕ್ತ ಭದ್ರತೆ ಒದಗಿಸಿಲ್ಲ. ಕಾಮಗಾರಿ ಕೈಗೊಂಡಿರುವ ಸುತ್ತಮುತ್ತಲ ಜಾಗದಲ್ಲಿ ರಸ್ತೆ ಮತ್ತು ಚರಂಡಿಗಳ ದುರಸ್ತಿ ಕಾರ್ಯ ಕೈಗೊಂಡಿಲ್ಲ.

'ರೈಲ್ವೆ ಜಾಗ ಬಳಸಿಕೊಳ್ಳಲು ಪರವಾನಗಿ ಶುಲ್ಕವಾಗಿ 98 ಕೋಟಿ ರುಪಾಯಿ ಪಾವತಿ ಮಾಡಲಾಗಿದೆ. 14 ಕೋಟಿ ರುಪಾಯಿ ವೆಚ್ಚದಲ್ಲಿ ರೈಲ್ವೆ ನೌಕರರಿಗೆ ವಸತಿ ಗೃಹಗಳನ್ನು ನಿರ್ಮಿಸಿಕೊಡಲಾಗಿದೆ. ಅಂತರರಾಷ್ಟ್ರೀಯ ಮಟ್ಟದ ಭದ್ರತಾ ವ್ಯವಸ್ಥೆಯನ್ನು ಒದಗಿಸಲಾಗಿದೆ. ಆದರೂ ತಕರಾರು ಎತ್ತುತ್ತಿರುವುದು ಸರಿಯಲ್ಲ' ಎಂದು ಮೆಟ್ರೊ ರೈಲು ನಿಗಮದ ವಕ್ತಾರ ಬಿ.ಎಲ್.ವೈ.ಚವಾಣ್ ಪ್ರತಿಕ್ರಿಯಿಸಿದ್ದಾರೆ.

ಎರಡೂ ಇಲಾಖೆಗಳ ಜಟಾಪಟಿ ನಡುವೆಯೂ ಪ್ರಮಾಣ ಪತ್ರ ಪಡೆದ ಬಳಿಕ, ಅಂದರೆ ಆಗಸ್ಟ್ ತಿಂಗಳಲ್ಲಿ ರೀಚ್- 1ರಲ್ಲಿ ಮೆಟ್ರೊ ರೈಲು ಗಾಡಿಯ ಸಾರ್ವಜನಿಕ ಸಂಚಾರ ವಿಧ್ಯುಕ್ತವಾಗಿ ಆರಂಭವಾಗುವ ಸಾಧ್ಯತೆ ಇದೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+