ಪ್ರೇಕ್ಷಕರ ಒತ್ತಾಯದ ಮೇರೆಗೆ ಮತ್ತೆ ಜುಗಾರಿ ಕ್ರಾಸ್ !

ಕನ್ನಡ ಸಾಹಿತ್ಯ ಲೋಕದಲ್ಲಿ ಅಚ್ಚಳಿಯದ ಛಾಪನ್ನು ಮೂಡಿಸಿದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಯವರ ಜುಗಾರಿ ಕ್ರಾಸ್ ಒಂದು ವಿಶಿಷ್ಟ ಕಾದಂಬರಿ. ಕಾಡುಗಳ್ಳರ.ಕಾಳದಂಧೆಗಳ ಕುರಿತು ಈ ಕೃತಿಯಲ್ಲಿ ಮಾತನಾಡುವ ತೇಜಸ್ವಿಯವರು ಪರಿಸರ, ಪ್ರಾಕೃತಿಕ ಸಂಪತ್ತು, ಅವುಗಳನ್ನು ಕಾಪಾಡುವ ಬಗ್ಗೆ ತಮ್ಮದೇ ನೆಲೆಯಲ್ಲಿ ಮಾತನಾಡುತ್ತ ಬಂದವರು. ಕಾಡು ಮೇಡುಗಳಲ್ಲಿ ಅಲೆಯುತ್ತ ಪಕ್ಷಿ ಪರಿಸರಗಳ ಕುರಿತು ವಿಶೇಷ ಅಧ್ಯಯನ ಮಾಡಿದ ತೇಜಸ್ವಿ ಕಟ್ಟಿಕೊಟ್ಟ ಕಥೆಯನ್ನು ನಾಟಕ ರೂಪಕ್ಕೆ ತಂದವರು ಕನ್ನಡ ರಂಗಭೂಮಿಯ ಮತ್ತೊಬ್ಬ ವಿಶೇಷ ಪ್ರತಿಭೆ ಯಾದ ನಟರಾಜ ಹೊನ್ನವಳ್ಳಿ ಯವರು.
ನಾಟಕದ ವಿವರ: ಈ ನಾಟಕ ಕೇವಲ 24 ಘಂಟೆಗಳಲ್ಲಿ ನೆಡೆಯುವ ಒಂದು ರೊಮ್ಯಾಂಟಿಕ್ ಥ್ರಿಲ್ಲರ್, ಜೊತೆಗೆಯೇ ಇದು ನಿಜವಾಗಿಯೂ ಸಹ್ಯಾದ್ರಿಯ ಕಾಡುಗಳ ತಪ್ಪಲಿನಲ್ಲಿ ನಡೆಯಬಹುದಾದ ವಾಸ್ತವದ ಸಾಮಾಜಿಕ ಕಾದಂಬರಿ. ಮಲೆನಾಡಿನ ದಟ್ಟ ಕಾಡೇ ಕಾಳ ಧಂಧೆಗಳ ತವರೂರಾಗುವುದು, ಕಾಡಿನಿಂದ ಉತ್ಪತ್ತಿಯಾಗುವ ಕಾಳಧನ ದೇಶದ ರಾಜಕೀಯವನ್ನೇ ನಿಯಂತ್ರಿಸುವುದು, ಈ ಕಾಳ ವ್ಯವಹಾರಗಳ ಜೊತೆಜೊತೆಗೇ ಡ್ರಗ್ಸ್ ಮಾಫಿಯಾ ಜೂಜು ಸೇರಿ, ಅನೇಕ ವೇಳೆ ಇದ್ಯಾವುದಕ್ಕ್ಕೂ ಸಂಬಂಧಿಸದ ಮುಗ್ಧರನ್ನೂ ಪ್ರಾಣಾಪಾಯದ ಅಂಚಿಗೆ ತಳ್ಳಬಹುದು ಎಂಬುದೇ ಈ ಕಥೆಯ ಹಿನ್ನೆಲೆ. ಏಲಕ್ಕಿ ಬೆಳೆಗಾರ ಸುರೇಶ ಮತ್ತು ಅವನ ಹೆಂಡತಿ ಗೌರಿ ಏಲಕ್ಕಿ ವ್ಯಾಪಾರಕ್ಕೆಂದು ಪೇಟೆಗೆ ಬಂದವರು, ಅವರಿಗೇ ತಿಳಿಯದೇ ಕಳ್ಳ ಧಂಧೆಗೆ ಸಿಕ್ಕಿಕೊಂಡು ಕ್ಷಣ ಕ್ಷಣಕ್ಕೂ ರೋಚಕವಾಗಿ ಸಾಗುವ, ಬೆಚ್ಚಿಬೀಳಿಸುವ ಅಂಡರ್ವರ್ಲ್ಡ್ನ ಕಥೆಯೊಂದಿಗೆ ಹೆಣೆದುಕೊಂಡಿರುವ ನಾಟಕವೇ ಜುಗಾರಿ ಕ್ರಾಸ್.
ನಾಟಕ : ಜುಗಾರಿ ಕ್ರಾಸ್
ರಚನೆ : ಕೆ. ಪಿ. ಪೂರ್ಣಚಂದ್ರ ತೇಜಸ್ವಿ
ನಾಟಕ ರೂಪ ಮತ್ತು ನಿರ್ದೇಶನ : ನಟರಾಜ್ ಹೊನ್ನವಳ್ಳಿ
ಸಂಗೀತ :ಗಜಾನನ ಟಿ. ನಾಯ್ಕ
ಸ್ಥಳ : ರಂಗಶಂಕರ, ಜೆ.ಪಿ. ನಗರ. ಬೆಂಗಳೂರು
ದಿನಾಂಕ/ವಾರ : 24/06/2011 ಶುಕ್ರವಾರ
ಸಮಯ : ಸಂಜೆ 7.30
ಸಂಪರ್ಕಿಸಿ : 99001 82400.
ಟಿಕೆಟ್ ದರ: 70 ರೂಪಾಯಿಗಳು.
ವೆಬ್ ಸೈಟ್ : www.indianstage.in
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications