ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿ ನಾಡಿನಲ್ಲಿ RTI ಕಾರ್ಯಕರ್ತನ ಮೇಲೆ ತೀವ್ರ ಹಲ್ಲೆ

By Srinath
|
Google Oneindia Kannada News

narendra modi
ರಾಜ್‌ಕೋಟ್, ಜೂನ್ 26: ಪೋರ್ ಬಂದರ್ ನಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ವಿರುದ್ದ ಹೋರಾಟ ನಡೆಸುತ್ತಿದ್ದ ಮಾಹಿತಿ ಹಕ್ಕು ಕಾರ್ಯಕರ್ತ ಭಾಗುಬಾಯ್ ದೇವಾನಿ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಪೊಲೀಸರು 4 ಮಂದಿಯನ್ನು ಶನಿವಾರ ಬಂಧಿಸಿದ್ದಾರೆ.

ದೇವಾನಿ ಅವರು ಮಾಹಿತಿ ಹಕ್ಕು ಕಾರ್ಯಕರ್ತರಾಗಿದ್ದು, ಪೋರಬಂದರಿನಲ್ಲಿ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ ವಿರುದ್ದದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಅಲ್ಲದೆ ಇಲ್ಲಿ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ನಿರ್ಮಿಸುತ್ತಿದ್ದ ಬಹುಮಹಡಿ ಕಟ್ಟಡಗಳು ಹಾಗೂ ಹೋಟೆಲ್‌ಗಳ ವಿರುದ್ದ ಗುಜರಾತ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ರಾಜೀವ್‌ನಗರದಲ್ಲಿ ಅವರ ನಿವಾಸದ ಬಳಿ ದೇವಾನಿ ಕಾರಿನಲ್ಲಿ ಹೋಗುತ್ತಿದ್ದಾಗ ಶುಕ್ರವಾರ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆ ನಡೆಸಿದರು. ಮಾರಣಾಂತಿಕವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಈ ಸಂಬಂಧ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ನಾಲ್ವರನ್ನು ಬಂಧಿಸಿದ್ದು, ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಕಳೆದ ವರ್ಷ ಜುಲೈನಲ್ಲಿ ಅಕ್ರಮ ಗಣಿಗಾರಿಕೆ ವಿರುದ್ದ ಹೋರಾಟ ನಡೆಸುತ್ತಿದ್ದ ಅಮಿತ್‌ಜೇತ್ವ ಎಂಬವರನ್ನು ಹೈಕೋರ್ಟ್ ಬಳಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

English summary
Four people were arrested for their involvement in the stabbing of Bhagu Devani, a Right to Information (RTI) activist from Porbandar, Gujarat. Devani, who has been crusading against the mushrooming illegal constructions in Porbandar, was pulled out of his car and stabbed by six assailants Friday (June 24).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X