ಸತ್ಯ ಸತ್ಯ ಸತ್ಯ: ಮಂಜುನಾಥನೆದುರು ಸ್ವಾಮಿ ಪ್ರಮಾಣ

ಮಂಜುನಾಥ ಸ್ವಾಮಿ ದರ್ಶನದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ತಮ್ಮಿಬ್ಬರ ಭೇಟಿಯಿಂದ ಶ್ರೀ ಕ್ಷೇತ್ರದಲ್ಲಿ ಉಂಟಾದ ಅನಾನುಕೂಲಗಳಿಗೆ ಸಾರ್ವಜನಿಕರಿಗೆ ಮೊದಲನೆಯದಾಗಿ ಕ್ಷಮೆ ಬೇಡುವೆ ಎಂದು ಸ್ವಾಮಿ ಮಾತಿಗಿಳಿದರು.
ಸಂಧಾನಕ್ಕಾಗಿ ಯಡಿಯೂರಪ್ಪ ಅವರು ತಮ್ಮ ಬಳಿಗೆ ದೂತನನ್ನು ಕಳಿಸಿದ್ದರು. ಈ ವಿಚಾರದಲ್ಲಿ ನಾನು ಯಾವುದೇ ಸುಳ್ಳು ಹೇಳಿಲ್ಲ. ಇದು ನೂರಕ್ಕೆ ನೂರು ನಿಜ ಎಂದು ಸ್ವಯಂಪ್ರೇರಿತನಾಗಿ ಮಂಜುನಾಥನ ಸನ್ನಿಧಿಯಲ್ಲಿ ಪ್ರಮಾಣ ಮಾಡಿಕೊಂಡೆ. ನಾನು ಹೇಳಿರುವುದೆಲ್ಲ ಸತ್ಯ, ಸತ್ಯ, ಸತ್ಯ ಎಂದು ಮೂರು ಬಾರಿ ಹೇಳಿರುವುದಾಗಿ ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ಬಳಿಕ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆ ಅವರಿಗೆ ನೀಡಿದ್ದ ಪತ್ರವನ್ನು ಯಥಾವತ್ತಾಗಿ ಓದಿದರು. ತಾವು ಮಾಡಿರುವ ಆರೋಪಗಳ ಸತ್ಯಾಸತ್ಯತೆಯನ್ನು ಆ ದೇವರೇ ನೋಡಿಕೊಳ್ಳಲಿ ಎಂದೂ ನುಡಿದರು.
ಅದಕ್ಕೂ ಮುಂಚೆ ಶಾಂತಿವನ ಅತಿಥಿ ಗೃಹದಲ್ಲಿ ತಂಗಿದ್ದ ಕುಮಾರಸ್ವಾಮಿ, ಪಕ್ಷದ ಶಾಸಕರು ಮತ್ತು ಕಾರ್ಯಕರ್ತರ ಪಟಾಲಂನೊಂದಿಗೆ ಜಿಟಿಜಿಟಿ ಮಳೆಯಲ್ಲಿ ನೇರವಾಗಿ ದೇವಸ್ಥಾನಕ್ಕೆ ಆಗಮಿಸಿದ್ದರು. ಆದರೆ ಬೆಳಗ್ಗೆ ನೀಡಿದ್ದ ಹೇಳಿಕೆಗೆ ವ್ಯತಿರಿಕ್ತವಾಗಿ, ಸಾರ್ವಜನಿಕವಾಗಿ ಸಾಲಿನಲ್ಲಿ ನಿಲ್ಲದೆ ನೇರವಾಗಿ ದೇವಾಲಯ ಪ್ರವೇಶಿಸಿದರು.
ಇದರಿಂದ ಭಕ್ತರಿಗೆ ಸಾಕಷ್ಟು ಕಸಿವಿಸಿಯಾಯಿತು. ಧಾರ್ಮಿಕ ಕ್ಷೇತ್ರವನ್ನು ರಾಜಕೀಯಕ್ಕೆ ಬಳಸಿಕೊಂಡ ಇಬ್ಬರೂ ನಾಯಕರಿಗೆ ಭಕ್ತಾದಿಗಳು ಛೀಮಾರಿ ಹಾಕಿದ್ದು ವಿಶೇಷವಾಗಿತ್ತು. ಆದರೆ ತಮ್ಮ ನಾಯಕರು ಮಾತು ಉಳಿಸಿಕೊಂಡರೆಂದು ಭಾವಿಸಿದ ಜೆಡಿಎಸ್ ಕಾರ್ಯಕರ್ತರು ಕುಮಾರಸ್ವಾಮಿಗೆ ಜೈಕಾರ ಹಾಕಿ, ಕುಮಾರಸ್ವಾಮಿ ಭೇಟಿಯನ್ನು ಬೆಂಬಲಿಸಿದರು. ಸಿಎಂಗೆ ಧಿಕ್ಕಾರವನ್ನೂ ಕೂಗಿದರು. ಈ ಸಂದರ್ಭದಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿತ್ತು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications