ಒಂದು ಕೈಯಿಂದ ಚಪ್ಪಾಳೆ ತಟ್ಟಲಾಗದು: ಧರ್ಮಾಧಿಕಾರಿ ಹೆಗ್ಗಡೆ

ಈ ಮಧ್ಯೆ, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು 'ಯಾವುದೇ ಒಬ್ಬ ವ್ಯಕ್ತಿ ತಾನೊಬ್ಬನೇ ದೇವರ ಎದುರು ನಿಂತು ಅವರ ಸತ್ಯವನ್ನು ಬಿನ್ನವಿಸಿದರೆ ಅದು ಪ್ರಮಾಣ ಆಗುವುದಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ. ಅಂದರೆ ಒಂದು ಕೈಯಿಂದ ಚಪ್ಪಾಳೆ ತಟ್ಟಲು ಸಾಧ್ಯವಿಲ್ಲ.
ಶ್ರೀಕ್ಷೇತ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಾನು ದೇವರ ಎದುರು ನಿಂತು ಸತ್ಯ ನಿವೇದನೆ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.
ಅದು ಪ್ರಮಾಣವಾಗುವುದಿಲ್ಲವೇ ಎಂದು ಕೇಳಿದಾಗ, 'ದೇವರ ಬಳಿ ಯಾವುದೇ ಭಕ್ತ ತನ್ನ ಸಂಕಷ್ಟವನ್ನು ತೋಡಿಕೊಳ್ಳಬಹುದು. ಭಕ್ತರು ಮತ್ತು ದೇವರ ನಡುವಿನ ಸಂಬಂಧಕ್ಕೆ ಯಾರೂ ಅಡ್ಡಿಯಾಗಲಾರರು. ಆದರೆ ಅಷ್ಟಕ್ಕೇ, ಒಬ್ಬನೇ ಬಂದು ದೇವರೆದುರು ಬಿನ್ನವಿಸುವುದು ಪ್ರಮಾಣವಾಗುವುದಿಲ್ಲ' ಎಂದಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಇಬ್ಬರೂ ಬಂದು ದೇವರ ದರ್ಶನ ಮಾಡಿ ರಾಜ್ಯದ ಜನತೆಯ ಒಳಿತಿಗಾಗಿ ಪ್ರಾರ್ಥಿಸುವುದಾಗಿ ಹೇಳಿರುವುದು ಸಂತಸ ತಂದಿದೆ.
ಕುಮಾರಸ್ವಾಮಿಯವರು ಪ್ರಮಾಣ ಮಾಡವುದಾಗಿ ತನ್ನ ಬಳಿ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ ಹೆಗ್ಗಡೆ, ಪ್ರಮಾಣ ಎಂದಾದರೆ ಎರಡು ಕಡೆಯವರು ಕ್ಷೇತ್ರಕ್ಕೆ ಮೊದಲೇ ತಿಳಿಸಿ ಬರಬೇಕು. ಕುಮಾರಸ್ವಾಮಿಯವರು ತನಗೆ ಬರೆದ ಪತ್ರ ಖಾಸಗಿಯಾಗಿದ್ದು ಅದನ್ನು ಮಾಧ್ಯಮಗಳ ಬಳಿ ಚರ್ಚಿಸಲಾರೆ. ಆದರೆ ಅವರು ಮಾಧ್ಯಮದ ಬಳಿ ಅದನ್ನು ಹೇಳುವುದಕ್ಕೆ ತನ್ನ ಅಭ್ಯಂತರ ಇಲ್ಲ. ಅವರ ಭಾವನೆಗಳನ್ನು ತನ್ನ ಬಳಿ ಹೇಳಿಕೊಂಡಿದ್ದಾರೆ. ಅದೇನೂ ಗುಪ್ತ ವಿಷಯ ಅಲ್ಲ. ಆತ್ಮ ನಿವೇದನೆ ಮಾಡಿಕೊಂಡಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications