ಅಧಿಕಾರಕ್ಕಾಗಿ ಬಿಎಸ್ವೈ-ಎಚ್ಡಿಕೆ ಒಳಒಪ್ಪಂದ

ಮೈಸೂರಿನಲ್ಲಿ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಆಣೆ-ಪ್ರಮಾಣದಿಂದ ಕರ್ನಾಟಕದಲ್ಲಿ ಹೊಸ ಸಂಪ್ರದಾಯ ಹುಟ್ಟಿಕೊಂಡಿದೆ. ಅಷ್ಟೇ ಅಲ್ಲ ಆ ಮೂಲಕ ಇಬ್ಬರು ನಾಯಕರು ಜನರ ಧಾರ್ಮಿಕ ಭಾವನೆಯೊಂದಿಗೆ ಆಟವಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ದೇಶದಲ್ಲಿ ಹಲವಾರು ಸಮಸ್ಯೆ ಹಾಗೂ ಲೋಕಪಾಲ ಮಸೂದೆ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಯುತ್ತಿದೆ ಅದರಲ್ಲಿ ಭಾಗವಹಿಸಿ ಸಲಹೆ ನೀಡಬೇಕಾದ ಮಾಜಿ ಪ್ರಧಾನಿ ದೇವೇಗೌಡರು ಅದೆಲ್ಲವನ್ನು ಬಿಟ್ಟು ಹಾಸನದ ಬಿಲ್ಪಾಸ್ ಆಗಿಲ್ಲ ಎಂದು ಫುಟ್ಪಾತ್ನಲ್ಲಿ ಧರಣಿ ಕೂರುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದ ಅವರು ಆ ವಿಚಾರದಲ್ಲಿ ಅಧಿಕಾರಿಗಳನ್ನು ಕರೆದು ಕಿವಿ ಹಿಂಡಿ ಕೆಲಸ ಮಾಡಿಸಿಕೊಳ್ಳುವುದನ್ನು ಬಿಟ್ಟು ಪ್ರಚಾರಕ್ಕಾಗಿ ರಸ್ತೆಗಿಳಿಯುವುದು ಸರಿಯಲ್ಲ ಎಂದರು.












Click it and Unblock the Notifications