ಟ್ರಾಫಿಕ್ ಸಮಸ್ಯೆ ಜಾಗೃತಿ ಜಾಹೀರಾತು ಕನ್ನಡದಲ್ಲಿರಲಿ

ಆದ್ರೆ, ಬೆಂಗಳೂರಿನ ಟ್ರಾಫಿಕ್ ಸಮಸ್ಯೆಯನ್ನು ನಿಯಂತ್ರಣ ಮಾಡುವಲ್ಲಿ ಸಾರ್ವಜನಿಕರು ಪೋಲೀಸರಿಗೆ ಸರಿಯಾಗಿ ಸಹಕರಿಸಿಲ್ಲ ಎಂದು ಬೆಂಗಳೂರಿನ ಪೋಲೀಸ್ ಕಮೀಷನರ್ ಜ್ಯೋತಿ ಪ್ರಕಾಶ್ ಮಿರ್ಜಿಯವರು ನಗರದ ಒಂದು ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಟ್ರಾಫಿಕ್ ಸಮಸ್ಯೆಯನ್ನು ನಿಯಂತ್ರಿಸುವಲ್ಲಿ ಪೋಲೀಸಿನವರಷ್ಟೇ ಸಾರ್ವಜನಿಕರ ಪಾತ್ರವೂ ಇದೆ. ಟ್ರಾಫಿಕ್ ಸಮಸ್ಯೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಅತ್ಯಗತ್ಯ. ಈ ಜಾಗೃತಿ ಕೆಲಸವನ್ನು ಪೋಲೀಸಿನವರ ಮಾಡುತ್ತಿಲ್ಲವೆಂದೇನಿಲ್ಲ. ಸಾರ್ವಜನಿಕರಲ್ಲಿ ಟ್ರಾಫಿಕ್ ಸಮಸ್ಯೆ ಬಗ್ಗೆ ಜಾಗೃತಿ ಮೂಡಿಸೋ ಕೆಲ್ಸನೂ ಸಹ ಪೋಲೀಸಿನವರು ಮಾಡುತ್ತಿದ್ದಾರೆ. ಆದರೆ ಇದು ಪರಿಣಾಮಕಾರಿಯಾಗಿಲ್ಲ ಅನ್ನೊದು ನನ್ನ ಅನಿಸಿಕೆ.
ಟ್ರಾಫಿಕ್ ಸಮಸ್ಯೆಯ ಬಗ್ಗೆ ಜಾಗೃತಿ ಕೆಲ್ಸದಲ್ಲಿ ಭಾಷೆ ಅತ್ಯಂತ ಮುಖ್ಯ. ಜನರಿಗೆ ಅರ್ಥ ಆಗೋ ಬಾಷೆಲಿ ಈ ಕೆಲ್ಸ ನಡೆದ್ರೆ ಪರಿಣಾಮಕಾರಿಯಾಗಿರುತ್ತೆ. ಬೆಂಗಳೂರಿನ ಬಹುಸಂಖ್ಯಾತ ಜನರ ಭಾಷೆ ಕನ್ನಡದಲ್ಲಿ ಜಾಗೃತಿ ಕಾರ್ಯಕ್ರಮ ನಡೆದ್ರೆ ಜಾಗೃತಿ ಸಂದೇಶ ಜನರಿಗೆ ತಲುಪುತ್ತೆ. ವಿಷಾದದ ಸಂಗತಿಯೆಂದರೆ, ಪೋಲೀಸಿನವರು ಸಾರ್ವಜನಿಕರನ್ನು ಜಾಗೃತಿ ಮಾಡೋ ಕಾರ್ಯದಲ್ಲಿ ವಲಸಿಗರನ್ನ ಮಾತ್ರ ಗಣನೆಗೆ ತೆಗೆದುಕೊಂಡು ಬಹುಸಂಖ್ಯಾತ ಕನ್ನಡಿಗರನ್ನ ಮರೆತಿರುವುದು ದುರದ್ರುಶ್ಟವೇ.
ಟ್ರಾಫಿಕ್ ಸಮಸ್ಯೆಯ ಬಗ್ಗೆ ನಗರದಲ್ಲಿ ಹಲವಾರು ಹೋರ್ಡಿಂಗ್ ಗಳನ್ನ ನೋಡಬಹುದು ಈ ಹೋರ್ಡಿಂಗ್ ಗಳನ್ನ ಪೋಲೀಸ್ ಇಲಾಖೆ ಜನರಿಗೆ ಜಾಗೃತಿ ಮಾಡೊಕ್ಕೆ ಅಂತಾನೇ ಹಾಕಿರೋದು. ಆದ್ರೆ ಹೆಚ್ಚಿನ ಹೋರ್ಡಿಂಗ್ ಗಳಲ್ಲಿ ಬಹುಸಂಖ್ಯಾತ ಬೆಂಗಳೂರಿಗರಿಗೆ ಅರ್ಥವಾಗದ ಇಂಗ್ಲೀಷ್ ಭಾಷೆಯಲ್ಲಿ ಮಾತ್ರ ಇದೆ. ಇನ್ನು ಇತ್ತೀಚೆಗೆ ಹಲವಾರು ಕಡೆ ಅಳವಡಿಸಲಾಗಿರೋ ಎಲೆಕ್ಟ್ರಾನಿಕ್ ಡಿಸ್ಪ್ಲೆ ಕಡೆ ನೋಡಿದ್ರೆ, ಅಲ್ಲೂ ಸಹ ಇದೆ ರೀತಿ ಜನರಿಗೆ ಗೊತ್ತಿಲ್ಲದ ಭಾಷೆಯಲ್ಲಿ ಜಾಗೃತಿ ಮಾಡೊ ಪ್ರಯತ್ನ ಮಾಡ್ತಿರೋದು ಎದ್ದು ಕಾಣಿಸುತ್ತಿದೆ.
ಇನ್ನು ಟ್ರಾಫಿಕ್ ಪೋಲೀಸಿನವರು ಕಳೆದ ಕೆಲವು ತಿಂಗಳ ಹಿಂದೆ ಜನರಲ್ಲಿ ಟ್ರಾಫಿಕ್ ಸಮಸ್ಯೆಯ ಬಗ್ಗೆ ಜಾಗೃತಿ ಮಾಡೊಕ್ಕೆ ಅಂತ ಒಂದು ವೀಡಿಯೋ ಮಾಡಿ ಬೆಂಗಳೂರಿನ ಚಿತ್ರ ಮಂದಿರಗಳಲ್ಲಿ ಚಿತ್ರ ಪ್ರದರ್ಶನಕ್ಕೆ ಮೊದಲು ಪ್ರದರ್ಶನ ಮಾಡೊ ವ್ಯವಸ್ಥೆ ಮಾಡಿದ್ದಾರೆ. ಇದು ಒಂದು ಉತ್ತಮ ನಡೆಯೇ, ಆದ್ರೆ ಈ ವೀಡಿಯೋ ನಲ್ಲಿ ಜಾಗೃತಿಗೆ ಅಂತ ಬಳಸಿರೋದು ಬೆಂಗಳೂರಿನ ಜನರಿಗೆ ಅರ್ಥವಾಗದಿರೋ ಹಿಂದಿ ಭಾಷೆನ! ಜಾಗೃತಿ ಮಾಡೊವಾಗ ಬಳಸಬೇಕಾದ್ದು ಜನರಿಗೆ ಗೊತ್ತಿರೋ ಕನ್ನಡ ಭಾಷೆನ ಹೊರೆತು, ಜನರಿಗೆ ತಿಳಿಯದ ಹಿಂದಿ ಭಾಷೆಯನ್ನಲ್ಲ ಅಲ್ವ?
ನಿಜವಾಗಿಯೂ ಪೋಲೀಸ್ ಇಲಾಖೆ ತನ್ನ ಜಾಗೃತಿ ಮೂಡಿಸೋ ಕಾರ್ಯದಲ್ಲಿ ಕನ್ನಡವನ್ನ ಬಳಸಿದ್ರೆ, ಇಂದಿಗಿಂತ ಹೆಚ್ಹು ಪರಿಣಾಮಕಾರಿಯಾಗಿ ಜನರನ್ನ ಜಾಗೃತರನ್ನಾಗಿ ಮಾಡೊಕ್ಕೆ ಸಾಧ್ಯ ಅಲ್ವ?
ಟ್ರಾಫಿಕ್ ಸಮಸ್ಯೆಯನ್ನ ಜನರಲ್ಲಿ ಜಾಗ್ರುತಿ ಮಾಡೊದ್ರಿಂದ ಮಾತ್ರ ಕಡಿಮೆ ಮಾಡಬಹುದು, ಜಾಗೃತಿಗೆ ಬಳಸೋ ಭಾಷೆ ಕೂಡ ಜನರಿಗೆ ಅರ್ಥ ಆಗೋ ಭಾಷೆ, ಕನ್ನಡ ಆಗಿರಬೇಕು ಅಲ್ವ? ಏನಂತೀರ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications