ಚಾರ್ಜ್ ಶೀಟ್ ವಿರುದ್ಧ ಕುಮಾರಸ್ವಾಮಿ ಉಪವಾಸ ಸತ್ಯಾಗ್ರಹ

ಅಕ್ರಮ ಆಸ್ತಿಗೆ ಸಂಬಂಧಿಸಿಂತೆ ಇನ್ನೊಂದು ವಾರದೊಳಗೆ ತನಿಖೆಗೆ ಆದೇಶಿಸಿ. ಮೂರು ತಿಂಗಳೊಳಗೆ ತನಿಖಾ ವರದಿ ಒಪ್ಪಿಸಿ ಸತ್ಯಾಸತ್ಯತೆ ಇತ್ಯರ್ಥ ಮಾಡದಿದ್ದರೆ, ವಿಧಾನಸೌಧದ ಮುಂದೆ ಆಮರಣಾಂತ ಉಪವಾಸ ಸತ್ಯಾಗ್ರಹ ಹೂಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸರ್ಕಾರಕ್ಕೆ ಗಡುವು ನೀಡಿದ್ದಾರೆ.
ಜೆಡಿಎಸ್ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ, ಆಣೆ ಪ್ರಮಾಣ ಮಾಡದೆ ಯಡಿಯೂರಪ್ಪ ಪಲಾಯನ ಮಾಡಿದ್ದಾರೆ. ರಾಮನ ಹೆಸರು ಹೇಳಿಕೊಂಡು ಆರು ವರ್ಷ ಅಧಿಕಾರ ಮಾಡಿದ್ದು ಪಾಪ ಗಡ್ಕರಿ ಮರೆತಿದ್ದಾರೆ. ಈಗ ರಾಮನನ್ನು ಕಾಡಿಗೆ ಅಟ್ಟಿದ್ದಾರೆ. ಧರ್ಮದಲ್ಲಿ ರಾಜಕಾರಣ ಇರಬಾರದು ಎಂದು ಈಗ ಉಪದೇಶ ಮಾಡುತ್ತಾರೆ ಎಂದು ಕುಮಾರಸ್ವಾಮಿ ಲೇವಡಿ ಮಾಡಿದರು.
ನಾನು ಈಗಾಗಲೇ ಹಲವು ಬಾರಿ ಮುಖ್ಯಮಂತ್ರಿ ವಿರುದ್ಧ ಹಲವು ಆರೋಪ ಮಾಡಿ, ದಾಖಲೆ ಬಿಡುಗಡೆ ಮಾಡಿರುವೆ. ಆದರೆ ಮುಖ್ಯಮಂತ್ರಿಗಳಿಂದ ಸ್ಪಷ್ಟನೆ ಸಿಕ್ಕಿಲ್ಲ. ಬಿಜೆಪಿ ಬಿಡುಗಡೆ ಮಾಡಿರುವ ಚಾರ್ಜ್ಶೀಟ್ನ ಆರೋಪದಲ್ಲಿ ಯಾವುದೇ ಹುರುಳಿಲ್ಲ. ನಮ್ಮ ಕುಟುಂಬದ ವಿರುದ್ದ ಮಾಡಿರುವ 1500 ಕೋಟಿ ರು.ಗಳ ಆರೋಪದ ಬಗ್ಗೆ ಸಮಗ್ರ ತನಿಖೆ ಆಗಲಿ, ಸತ್ಯಾಸತ್ಯತೆ ಹೊರಬರಲಿ. ಇಲ್ಲದೆ ಹೋದಲ್ಲಿ ಮುಂದೆ ಆಗುವ ಅನಾಹುತಕ್ಕೆ ಸರ್ಕಾರವೇ ಹೊಣೆ ಎಂದು ಕುಮಾರಸ್ವಾಮಿ ಗುಡುಗಿದರು.
ಯಡಿಯೂರಪ್ಪ ಧೈರ್ಯವಾಗಿ ಮುಂದೆ ಬಂದು ಸಮರ ಮಾಡದೆ, ಕೆಲವು ಸರ್ಕಾರಿ ವಿದೂಷಕರನ್ನು ಬಳಸಿ ತಪ್ಪು ಮಾಹಿತಿಯುಳ್ಳ ಚಾರ್ಜ್ ಶೀಟ್ ತಯಾರಿಸಲು ತುಂಬಾ ಶ್ರಮ ಪಟ್ಟಿದ್ದಾರೆ. ನಮ್ಮ ಕುಟುಂಬದ ಹೆಸರಿನಲ್ಲಿ ಇಲ್ಲದ ಆಸ್ತಿಪಾಸ್ತಿ ವಿವರಗಳನ್ನು ಸೇರಿಸಿದ್ದಾರೆ. ಬಿಜೆಪಿ ನಾಯಕರಿಗೆ ನೈತಿಕತೆ, ಧೈರ್ಯ, ತಾಕತ್ತಿದ್ದರೆ, ಪ್ರಾಮಾಣಿಕತೆ ಇದ್ದರೆ ತನಿಖೆ ನಡೆಸಲಿ ಎಂದು ಕುಮಾರಸ್ವಾಮಿ ಸವಾಲೆಸೆದಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications