ಈಶ್ವರಪ್ಪ ಆಣೆ ಮಾಡಲಿ: ದೊಡ್ಡ ಗೌಡರ ಹೊಸ ಛಾಲೆಂಜ್

ಆದರೆ ಒಂದು ಸಲಹೆ: ಶೃಂಗೇರಿ ಸ್ವಾಮೀಜಿಗಳ ಬಗ್ಗೆ ಮಾತ್ರವೇ ತನಗೆ ನಂಬಿಕೆ ಇರುವುದಾಗಿ ಇತ್ತೀಚೆಗೆ ದೊಡ್ಡ ಗೌಡರು ಘೋಷಿಸಿಕೊಂಡಿದ್ದಾರೆ. ಆದ್ದರಿಂದ ಶೃಂಗೇರಿಯಲ್ಲಿ ಮುಂದಿನ ಆಣೆ ಪ್ರಮಾಣ ಪ್ರಹಸನವನ್ನು ರಾಝ್ಯದ ಜನತೆ ನೋಡುವಂತಾಗಲಿ.
ವಿಷಯ ಏನೆಂದರೆ ಮೂರು ತಿಂಗಳ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್. ಈಶ್ವರಪ್ಪ ಅವರು ಬಿ.ಎಸ್. ಯಡಿಯೂರಪ್ಪ ಅವರನ್ನು ಮುಗಿಸುವವರೆಗೂ ನಿದ್ದೆ ಮಾಡುವುದಿಲ್ಲ ಎಂದು ದೊಡ್ಡ ಗೌಡರ ಬಳಿ ಹೇಳಿದ್ದರಂತೆ.
ಈಗ ಯಡಿಯೂರಪ್ಪ ಕಡೆಯಿಂದ ವಸೂಲಿ ಚೆನ್ನಾಗಿದೆ ಎಂದು ಈಶ್ವರಪ್ಪ ಅವರ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿರುವ ಗೌಡರು, ಬೇಕಿದ್ದರೆ ಈ ನನ್ನ ಮಾತು ಸುಳ್ಳು ಎಂದು ಈಶ್ವರಪ್ಪ ಆಣೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಇಂಚಿಂಚೂ ಜಾಗವನ್ನು ಈಶ್ವರಪ್ಪ ಹಾಗೂ ಯಡಿಯೂರಪ್ಪ ಕಬಳಿಸುತ್ತಿದ್ದಾರೆ. ಇವರು ಉಳಿಸಿದ ಜಾಗವನ್ನು ಮತ್ತೂಬ್ಬ ನಾಯಕ ಡಿ.ಎಚ್. ಶಂಕರಮೂರ್ತಿ ಖರೀದಿಸುತ್ತಿದ್ದಾರೆ. ಇಂಧನ ಸಚಿವರಾದ ಶೋಭಾ ಕರಂದ್ಲಾಜೆ ಹಾಗೂ ನೀರಾವರಿ ಸಚಿವ ಬಸವರಾಜ ಬೊಮ್ಮಾಯಿ ಅವರ ಈಗಿನ ಆಸ್ತಿ ಹಾಗೂ ಅಧಿಕಾರಕ್ಕೆ ಬರುವ ಮೊದಲಿನ ಆಸ್ತಿ ಬಗ್ಗೆಯೂ ತನಿಖೆ ನಡೆಯಲಿ ಎಂದು ಹೇಳಿದರು.
ಬಿಜೆಪಿ ಪ್ರಕಟಿಸಿರುವ ಚಾರ್ಜ್ಶೀಟ್ನಲ್ಲಿ ಯಾರದೋ ಮನೆಯನ್ನು ನನ್ನ ಮನೆಯೆಂದು ಪ್ರಕಟಿಸಲಾಗಿದೆ. ಇಡೀ ಪುಸ್ತಕದಲ್ಲಿ ಸುಳ್ಳುಗಳ ಕಂತೆಯನ್ನು ಪೋಣಿಸಲಾಗಿದೆ. ಹಿಂದೆ ದೇವೇಗೌಡರ ವಿರುದ್ಧ ಬಿಜೆಪಿ ನಾಯಕರಾಗಿದ್ದ ವೆಂಕಟಗಿರಿ ಗೌಡರು ಪುಸ್ತಕ ಬರೆದಿದ್ದರು. ಈಗ ಈ ಯಡಿಯೂರಪ್ಪ ಹಾಗೂ ಈಶ್ವರಪ್ಪ ಸುಳ್ಳು ಆರೋಪಗಳ ಸರಮಾಲೆಯನ್ನೇ ಹೇಳುತ್ತಿದ್ದಾರೆ ಎಂದರು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications