'ಆಸರೆ' ಮನೆ ಕಟ್ಟಿಯಾಗಿದೆ, ಹಂಚುವುದು ಯಾವಾಗ?

ಭಾರತ್ ಮೈನ್ಸ್ ಅಂಡ್ ಮಿನರಲ್ಸ್ ಕಂಪನಿಯು ಜಿಲ್ಲಾಡಳಿತದ ಜೊತೆ 2009ರ ಫೆಬ್ರವರಿಯಲ್ಲಿ ಮಾಡಿಕೊಂಡ ಒಪ್ಪಂದದ ಪ್ರಕಾರವೇ ಸಿರುಗುಪ್ಪ ತಾಲೂಕಿನ ಟಿ.ಎಸ್. ಕೂಡ್ಲೂರು ಮತ್ತು ಮಾಟೂರು ಗ್ರಾಮಗಳಲ್ಲಿ ಒಟ್ಟು 700 ಮನೆಗಳನ್ನು 30 ಅಡಿ ಅಗಲ, 50 ಅಡಿ ಉದ್ಧದ ನಿವೇಶನದಲ್ಲಿ ಅಂದಾಜು ಒಂದು ಮನೆಗೆ 2 ಲಕ್ಷ ರುಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.
ಪ್ರತಿ ಕೋಣೆಯಲ್ಲಿ 1 ಹಾಲ್, 1 ಬೆಡ್ರೂಂ, 1 ಅಡುಗೆ ಮನೆ, 1 ಸ್ನಾನಗೃಹ ಮತ್ತು ಮನೆಯ ಹೊರಭಾಗದಲ್ಲಿ ಶೌಚಾಲಯ ನಿರ್ಮಾಣ ಆಗಿದ್ದು, ಆಧುನಿಕ ಮನೆಗಳ ರೀತಿಯಲ್ಲೇ ಸಾಕಷ್ಟು ಗಾಳಿ - ಬೆಳಕಿನ ವ್ಯವಸ್ಥೆ ಕಲ್ಪಿಸಲಾಗಿದೆ. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿಯ ಇಂಜಿನಿಯರಿಂಗ್ ವಿಭಾಗದ ಹಿರಿಯ ಅಧಿಕಾರಿಗಳು ಅಂತಿಮಗೊಳಿಸಿರುವ ನಕ್ಷೆಯ ಪ್ರಕಾರವೇ ಮನೆಗಳ ನಿರ್ಮಾಣ ಆಗಿದೆ. ಈ ಪ್ರದೇಶದಲ್ಲಿ ರಸ್ತೆ, ಕುಡಿಯುವ ನೀರಿನ ಓವರ್ ಹೆಡ್ ಟ್ಯಾಂಕ್, ಶಾಲೆ, ಪಾರ್ಕ್ ನಿರ್ಮಾಣ ಆಗಿವೆ.
ಸಿರುಗುಪ್ಪ ತಾಲೂಕಿನ ಹಚ್ಚೊಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಟಿ.ಎಸ್. ಕೂಡ್ಲೂರು ಮತ್ತು ಮಾಟೂರು ಗ್ರಾಮಗಳು 2009ರ ಸೆಪ್ಟೆಂಬರ್ ಮತ್ತು ಅಕ್ಟೋಬರ್ನಲ್ಲಿ ಸುರಿದ ಭಾರೀ ಮಳೆಯಿಂದ ಜಲಾವೃತ್ತಗೊಂಡಿದ್ದವು. ಇಲ್ಲಿಯ ಜನ - ಜಾನುವಾರು ಪ್ರವಾಹಕ್ಕೆ ಸಿಲುಕಿ ತೀವ್ರ ಸಂಕಷ್ಟಕ್ಕೆ ಗುರಿ ಆಗಿದ್ದರು. ಪರಿಸ್ಥಿತಿ ಶೋಚನೀಯವಾಗಿತ್ತು. ಅನೇಕರು ಮನೆ ಕಳೆದುಕೊಂಡಿದ್ದರು. ನೀರಿನ ರಭಸಕ್ಕೆ ಮನೆಯಲ್ಲಿದ್ದ ಕಾಗದಪತ್ರಗಳು, ಧವಸಧಾನ್ಯಗಳು, ಬಟ್ಟೆಗಳು, ಇನ್ನಿತರೆ ಎಲ್ಲವನ್ನೂ ಕಳೆದುಕೊಂಡು ಅಕ್ಷರಶಃ ಬೀದಿಪಾಲಾಗಿದ್ದರು.
ನಿರಾಶ್ರಿತರಾದ ಅನೇಕರು ಅನಾಥಪ್ರಜ್ಞೆಯಲ್ಲಿದ್ದರು. ಬಡ - ನಿರ್ಗತಿಕರ ಬದುಕುಗಳಿಗೆ ನೆರವಾಗಲು ನಿರ್ಧರಿಸಿದ ಅನೇಕರು ಕೈಲಾದಷ್ಟು ಸಹಾಯ ಮಾಡಿ ಮಾನವೀಯತೆ ತೋರಿದರು. ಸರ್ಕಾರ ನಿರಾಶ್ರಿತರ ಬದುಕುಗಳಿಗೆ ಶಾಶ್ವತ ನೆಲೆ ಕಲ್ಪಿಸಲು ಮನೆಗಳನ್ನು ನಿರ್ಮಿಸಿಕೊಡಲು 'ಆಸರೆ" ಯೋಜನೆಯನ್ನು ಘೋಷಣೆ ಮಾಡಿತು.
ನಿರಾಶ್ರಿತೆ ಹುಲಿಗೆಮ್ಮ ಮಾತನಾಡಿ 'ಮೊದ್ಲು ಅಡಿಗೆ ಮನೆ ಸಣ್ಣದಾಗಿತ್ತು. ಈಗ ದೊಡ್ದದಾಗೈತೆ. ಗಾಳಿ - ಬೆಳಕು ಚೆನ್ನಾಗೆ ಒಳಗ ಬರ್ತಾವೆ. ಪಾಕೇನ ಹೊರಾಗ ಕಟ್ಸಿ ಒಳ್ಳೇದ್ ಮಾಡ್ಯಾರ. ಇಲ್ಲಾಂದ್ರೆ ಗಬ್ಬು ವಾಸನೆ ಮನೆ ತುಂಬಾ ತುಂಬಿರ್ತಿತ್ತು. ಮಕ್ಳು ಆಡಿಕೊಳ್ಳಾಕ, ದನ - ಕರ ಕಟ್ಟಾಗ ಒಂದಿಷ್ಟು ಅಂಗ್ಳ ಐತೆ. ಜಾಗ ಕೂಡ ಐತೆ. ಚೆನ್ನಾಗಿಯೇ ಐದಾವೆ" ಎಂದು ಹೇಳುತ್ತಾರೆ.
ಬಹುತೇಕ ನಿರಾಶ್ರಿತರು ಈಗಲೂ ತಾತ್ಕಾಲಿಕ ಶೆಡ್ಗಳಲ್ಲಿ ವಾಸಿಸುತ್ತಿದ್ದಾರೆ. ಮಳೆ, ಗಾಳಿ, ಚಳಿ ಮತ್ತು ಬಿಸಿಲ ಬೇಗೆಗೆ ತತ್ತರಿಸುತ್ತಿದ್ದಾರೆ. ಟಿ.ಎಸ್. ಕೂಡ್ಲೂರು ಮತ್ತು ಮಾಟೂರು ಗ್ರಾಮಗಳಲ್ಲಿ ಪೂರ್ಣಗೊಂಡಿರುವ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ಹಂಚಲು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಆಸಕ್ತಿ ತೋರಬೇಕು ಎಂದು ಮನವಿ ಮಾಡಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications