ಅರಾಜ'ಕತೆ': ಮಿಣ ಮಿಣ ಮೀನಾ, ತಲೆಚಚ್ಚಿಕೊಂಡ ಶಾಸಕ

ಘಟನೆ ಒಂದು: ಕೋಲಾರದ ವಕ್ಕಲೇರಿ ಜಿ.ಪಂ. ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಛತ್ರಕೋಡಿಹಳ್ಳಿ ಮತಗಟ್ಟೆಯಲ್ಲಿ ಕೆಲವರು ಅಕ್ರಮ ಮತದಾನದಲ್ಲಿ ತೊಡಗಿದ್ದರು. ವಿಷಯ ತಿಳಿದು ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ ಮನೋಜ್ ಕುಮಾರ್ ಮೀನಾ ಮತದಾರನೊಬ್ಬನ ಕತ್ತಿನ ಪಟ್ಟಿ ಹಿಡಿದುಕೊಂಡು ಗುಂಪು ಚದುರಿಸಲು ಮುಂದಾದರು. ಸುಮ್ಮನೆ ನಿಂತಿದ್ದವರನ್ನೂ ಬಿಡದೆ ಲಾಠಿ ಹಿಡಿದು ಮೀನಾ ಮಿಣ ಮಿಣ ಮಿಂಚಿದರು.
ಘಟನೆ ಎರಡು: ಇದು ಕೋಲಾರದ ಚೆನ್ನಯ್ಯ ರಂಗಮಂದಿರದಲ್ಲಿ ನಡೆದ ಘಟನೆ; ಮತ್ತೊಮ್ಮೆ ಅದೇ ಅಧಿಕಾರಿ ಇಲ್ಲಿಯೂ ಖಳನಾಯಕ. ಸುವರ್ಣ ಭೂಮಿ ಯೋಜನೆಗೆ ತಾಲ್ಲೂಕಿನ ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡುವಲ್ಲಿ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿ, ಕರ್ನಾಟಕ ರಕ್ಷಣಾ ವೇದಿಕೆ ಮುಖಂಡ ಕೃಷ್ಣೇಗೌಡ ಆಯ್ಕೆ ಪ್ರಕ್ರಿಯೆಯನ್ನು ಪ್ರಶ್ನಿಸಿದರು. ಅಷ್ಟಕ್ಕೇ ಸಿಟ್ಟಿಗೆದ್ದ ಜಿಲ್ಲಾಧಿಕಾರಿ ಮೀನಾ, ಕೃಷ್ಣೇಗೌಡರನ್ನು ಎಳೆದು, ಅವರ ಕತ್ತಿಗೆ ಕೈ ಹಾಕಿ ಹೊರಕ್ಕೆ ತಳ್ಳಿದರು.
ದಾಖಲಾರ್ಹ ಸಂಗತಿ ಏನೆಂದರೆ ಚಾಮರಾಜನಗರದಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ (ಡಿಸೆಂಬರ್12, 2009) ಇದೇ ಖಳನಾಯಕ್ ಅಧಿಕಾರಿ ಮೀನಾ, ರೈತರ ಮೇಲೆ ಲಾಠಿ ಪ್ರಹಾರಕ್ಕಿಳಿದು ಸರಕಾರವನ್ನು ಮುಜಗುರಕ್ಕೀಡುಮಾಡಿದ್ದರು. ಅದೇ ಕಾರಣಕ್ಕೆ ಜಿಲ್ಲೆಯಿಂದ ಎತ್ತಂಗಡಿಯೂ ಆಗಿದ್ದರು. ಆಣೆ-ಪ್ರಮಾಣ ರಾಜಕೀಯದಿಂದ ಒಂದಷ್ಟು ಬಿಡುವು ಪಡೆದಂತೆ ಕಾಣುತ್ತಿರುವ ನಾಡಿನ ಮುಖ್ಯಮಂತ್ರಿಗಳು ಇಂತಹ ಉದ್ದಟತನದ ಅಧಿಕಾರಿ ಬಗ್ಗೆ ಯಾವ ಕ್ರಮ ಕೈಗೊಳ್ಳುತ್ತಾರೋ?
ಘಟನೆ ಮೂರು: ಮೈಸೂರಿನಲ್ಲಿ ರಸ್ತೆ ಬದಿ ವ್ಯಾಪಾರಿಗಳನ್ನು ಎತ್ತಂಗಡಿ ಮಾಡುವುದರ ವಿರುದ್ಧ ಪ್ರತಿಭಟನೆ ನಡೆಯುತ್ತಿತ್ತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಶಾಸಕ ಎಚ್. ಎಸ್. ಶಂಕರಲಿಂಗೇಗೌಡರು ವ್ಯಾಪಾರಿಗಳ ಪರ ನಿಂತು, ಅಧಿಕಾರಿಗಳ ವಿರುದ್ಧ ಸಿಟ್ಟಿಗೆದ್ದರು. ಪೊಲೀಸರಿಂದ ಲಾಠಿ ಕಿತ್ತುಕೊಂಡವರೇ ಒಂದೇ ಸಮನೆ ಲಾಠಿಯಿಂದ ತಮ್ಮ ಹಣೆ ಚಚ್ಚಿಕೊಳ್ಳತೊಡಗಿದರು ...
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications