ಕಾಮಾಟಿಪುರದಲ್ಲಿದ್ದ ಗುಂಡ್ಲುಪೇಟೆ ಮಹಿಳೆಯ ರಕ್ಷಣೆ

ನಾಲ್ಕು ವರ್ಷಗಳ ಹಿಂದೆ ಗುಂಡ್ಲುಪೇಟೆ ಬಳಿಯ ಗ್ರಾಮವೊಂದರಲ್ಲಿ ವಾಸವಾಗಿದ್ದ ವಿಧವೆಯೊಬ್ಬಳನ್ನು ಪರಿಚಯಿಸಿಕೊಂಡ ಇಬ್ಬರು ಹುಡುಗರು ಆಕೆಗೆ ಕುಡಿಯಲು ತಂಪುಪಾನೀಯ ನೀಡಿದ್ದರು. ಅದನ್ನು ಕುಡಿದ ಬಳಿಕ ಆಕೆ ಪ್ರಜ್ಞೆ ತಪ್ಪಿದ್ದಳು. ಆದರೆ ಆಕೆಗೆ ಪ್ರಜ್ಞೆ ಬರುವ ವೇಳೆಗೆ ಯುವಕರಿಬ್ಬರು ಆಕೆಯನ್ನು ಮುಂಬೈನ ಕಾಮಾಟಿಪುರಕ್ಕೆ ಮಾರಾಟ ಮಾಡಿದ್ದರು.
ಅಲ್ಲಿ ವಿವಿಧ ಹಿಂಸೆ ಅನುಭವಿಸುತ್ತಾ ವೇಶ್ಯಾವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ಆಕೆಯ ಬಳಿಗೆ ಇತ್ತೀಚೆಗೆ ಗುಲಬರ್ಗಾ ಮೂಲದ ಲಾರಿ ಚಾಲಕ ನೂರ್ ಅಹಮ್ಮದ್ ಎಂಬಾತ ತೆರಳಿದ್ದನು. ಆತ ಕರ್ನಾಟಕದವನೆಂದು ತಿಳಿದ ಆ ವಿಧವೆ ಹೆಂಗಸು ತನ್ನ ಕಷ್ಟವನ್ನು ಹೇಳಿದ್ದಳಲ್ಲದೆ, ಈ ನರಕದಿಂದ ತನ್ನನ್ನು ಪಾರು ಮಾಡುವಂತೆ ಬೇಡಿಕೊಂಡಿದ್ದಾಳೆ. ಆಕೆಯಿಂದ ಎಲ್ಲಾ ವಿಚಾರ ಕೇಳಿ ತಿಳಿದುಕೊಂಡ ಚಾಲಕ ನೂರ್ಅಹಮ್ಮದ್ ಗುಂಡ್ಲುಪೇಟೆಗೆ ತೆರಳಿ ಆಕೆಯ ಸಹೋದರನಿಗೆ ವಿಷಯ ತಿಳಿಸಿದ್ದಾನೆ. ಸಹೋದರ ಗ್ರಾಮಸ್ಥರೊಂದಿಗೆ ಮುಂಬೈಗೆ ತೆರಳಿ ಅಲ್ಲಿನ ಸೇವಾ ಸಂಸ್ಥೆ ಇಂಡಿಯನ್ ರೆಸ್ಕ್ಯೂ ಮಿಷನ್ನ ಮುಖ್ಯಸ್ಥ ಜೇಮ್ಸ್ ವರ್ಗೀಸ್ ಎಂಬುವರ ಸಹಾಯ ಪಡೆದು ಪೊಲೀಸರ ಸಹಕಾರದೊಂದಿಗೆ ಕಾಮಕೂಪದಲ್ಲಿದ್ದ ವಿಧವೆ ಮಹಿಳೆಯನ್ನು ಬಿಡಿಸಿ ತರುವಲ್ಲಿ ಯಶಸ್ವಿಯಾಗಿದ್ದಾರೆ.
ವಿಧವೆ ಮಹಿಳೆಯ ಪತಿ ಹತ್ತು ವರ್ಷಗಳ ಹಿಂದೆಯೇ ಮೃತಪಟ್ಟಿದ್ದ. ಇದ್ದ ಮಗನೊಬ್ಬನನ್ನು ಈಕೆಯೇ ಓದಿಸುತ್ತಿದ್ದಳು. ಆದರೆ ಆಕೆ ಇದ್ದಕ್ಕಿದ್ದಂತೆ ನಾಪತ್ತೆಯಾದಾಗ ಪೋಷಕರು ಎಲ್ಲೆಡೆ ಹುಡುಕಾಟ ಆರಂಭಿಸಿದ್ದರು. ಎಲ್ಲೂ ಸಿಗದಿದ್ದಾಗ ಕೈಚೆಲ್ಲಿ ಕುಳಿತಿದ್ದರು. ಈ ಪ್ರಕರಣದಿಂದ ಕರ್ನಾಟಕದಲ್ಲಿ ಯುವತಿಯರು ಹಾಗೂ ಮಹಿಳೆಯರನ್ನು ಅಪಹರಿಸಿ ಮಾರಾಟ ಮಾಡುತ್ತಿರುವ ಜಾಲವೊಂದು ಕಾರ್ಯಾಚರಣೆ ನಡೆಸುತ್ತಿರುವುದು ಸ್ಪಷ್ಟವಾಗಿದೆ. ಪ್ರತಿ ದಿನ ಪಟ್ಟಣ ಹಾಗೂ ಹಳ್ಳಿಗಳಲ್ಲಿ ಮಹಿಳೆಯರು ನಾಪತ್ತೆಯಾಗುತ್ತಿರುವ ವರದಿಗಳು ಬರುತ್ತಿದ್ದು ಇದರ ಹಿಂದಿನ ರಹಸ್ಯ ಇನ್ನೂ ಬಯಲಾಗುತ್ತಿಲ್ಲ. ಪೊಲೀಸರು ಈ ಬಗ್ಗೆ ತನಿಖೆ ನಡೆಸಬೇಕಾದ ಅಗತ್ಯವಿದೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ











Click it and Unblock the Notifications