ಹಾರಂಗಿ ಜಲಾಶಯದಿಂದ ಭರ್ತಿ, ಕಟ್ಟೆಯೊಡೆದ ಸಂಭ್ರಮ

ಕಾವೇರಿ ಕಣಿವೆಯ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹಾರಂಗಿ ಜಲಾಶಯ ಪ್ರಸಕ್ತ ಸಾಲಿನಲ್ಲಿ ಪ್ರಥಮ ಬಾರಿಗೆ ಭರ್ತಿಯಾದ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಜಲಾಶಯ ಗರಿಷ್ಠ ಮಟ್ಟ 2859 ಅಡಿಯಿದ್ದು, ಜಲಾಶಯದ ಈಗಿನ ನೀರಿನ ಮಟ್ಟ 2856 ಅಡಿಯಿದ್ದು, ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ 1900 ಕ್ಯೂಸೆಕ್ಸ್ನಷ್ಟಿದೆ.
ಜಲಾಶಯ ಮತ್ತು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ ಬಳಿಕ ನಾಲ್ಕು ಗೇಟ್ಗಳಿಂದ ನೀರನ್ನು ಹರಿಯಬಿಡಲಾಯಿತು. ಜಲಾಶಯದಿಂದ ನೀರು ಹರಿಸುವ ಮುನ್ನ ತಗ್ಗುಪ್ರದೇಶದ ಜನರಿಗೆ ಮೀನುಗಾರರಿಗೆ, ನದಿಯ ಅಸುಪಾಸಿನಲ್ಲಿ ವಾಸಿಸುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲು ಮೂರು ಭಾರಿ ಸೈರನ್ ಮೊಳಗಿಸಲಾಯಿತು.
ಜಲಾಶಯದಿಂದ ನೀರು ಬಿಟ್ಟ ವಿಷಯ ತಿಳಿಯುತ್ತಿದ್ದಂತೆಯೇ ಸುತ್ತಮುತ್ತಲಿನ ಜನರು ಸ್ಥಳಕ್ಕೆ ಧಾವಿಸಿ ಸಂಭ್ರಮಿಸಿದರು. ಜಲಾಶಯದಿಂದ ನಾಲ್ಕು ಕ್ರೆಸ್ಟ್ ಗೇಟ್ಗಳ ಮೂಲಕ ನದಿಗೆ 1000 ಕ್ಯೂಸೆಕ್ಸ್ ಗಳಷ್ಟು ನೀರನ್ನು ಹರಿಬಿಡಲಾಗಿದೆ. ಸುಮಾರು 8.5 ಟಿಎಂಸಿ ಸಾಮರ್ಥ್ಯದ ಹಾರಂಗಿ ಜಲಾಶಯದಲ್ಲಿ ಇದೀಗ 8 ಟಿ.ಎಂ.ಸಿ.ಗಳಷ್ಟು ನೀರಿದೆ. ಶನಿವಾರ ಹಾರಂಗಿ ಜಲಾನಯನ ಪ್ರದೇಶದ ವ್ಯಾಪ್ತಿಯಲ್ಲಿ 11.2 ಮಿ.ಮೀ.ನಷ್ಟು ಮಳೆ ದಾಖಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಈ ತನಕ 355 ಮಿ.ಮೀ. ಮಳೆ ಬಿದ್ದಿದೆ.
ಕಣ್ಮನ ಸೆಳೆಯುವ ಜಲಾಶಯ : ಜಲಾಶಯದ ಕ್ರೆಸ್ಟ್ ಗೇಟ್ಗಳ ಹೊರಹೋಗುತ್ತಿರುವ ನೀರು ಹಾಲಿನ ನೊರೆಯಂತೆ ಧುಮ್ಮಿಕ್ಕುತ್ತಿದ್ದು, ಈ ನಯನ ಮನೋಹರ ದೃಶ್ಯ ನೋಡಲು ಪ್ರವಾಸಿಗರು ಹಾರಂಗಿಗೆ ಲಗ್ಗೆಯಿಡುತ್ತಿದ್ದಾರೆ.
ಹಾರಂಗಿ ಜಲಾಶಯದಿಂದ ಕೊಡಗು ಜಿಲ್ಲೆ ಸೇರಿದಂತೆ ನೆರೆಯ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ, ಹುಣಸೂರು ಮತ್ತು ಕೆ.ಆರ್.ನಗರ ಹಾಗೂ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕು ಸೇರಿದಂತೆ 1,34,895 ಎಕರೆ ಪ್ರದೇಶಕ್ಕೆ ನೀರು ಪೂರೈಸಲಾಗುತ್ತಿದೆ. ಹಾರಂಗಿ ಜಲಾಶಯದಿಂದ ಹರಿಯುವ ನೀರು, ಕೂಡಿಗೆ ಬಳಿ ಹಾರಂಗಿ ನದಿ ಮೂಲಕ ಕಾವೇರಿ ನದಿ ಸೇರಿ, ನಂತರ ಕೃಷ್ಣರಾಜ ಸಾಗರವನ್ನು ಸೇರಲಿದೆ. ಹಾರಂಗಿ ಜಲಾಶಯದಿಂದ ಹೆಚ್ಚುವರಿ ನೀರು ಹರಿದು ಬರುತ್ತಿರುವುದರಿಂದ ಕೆಆರ್ಎಸ್ ಬಹು ಬೇಗ ಭರ್ತಿಯಾಗುವ ಸಾಧ್ಯತೆ ಕಂಡು ಬರತೊಡಗಿದೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications