ತೈಲಬೆಲೆ ವಿರೋಧಿಸಿ ಅರಕಲಗೂಡಿನಲ್ಲಿ ಚಕ್ಕಡಿ ಮೆರವಣಿಗೆ

ಕರವೇ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರಕುಮಾರ್ ಹಾಗೂ ತಾಲೂಕು ಘಟಕದ ಅಧ್ಯಕ್ಷ ರಾಜೇಗೌಡ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಚಕ್ಕಡಿಗಳನ್ನು ಮೆರವಣಿಗೆಯಲ್ಲಿ ತರುವ ಮೂಲಕ ಗಮನ ಸೆಳೆದ ಪ್ರತಿಭಟನಾಕಾರರು, ಪೇಟೆ ಅನಕೃ ವೃತ್ತದ ಮೂಲಕ ಸಾಗಿ ಕೋಟೆ ಗಣಪತಿ ಕೊತ್ತಲು ವೃತ್ತದ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ರವೀಂದ್ರಕುಮಾರ್, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಸೀಮೆಎಣ್ಣೆ ಬೆಲೆಯನ್ನು ಸರ್ಕಾರ ಮನಸೋಇಚ್ಚೆ ಏರಿಸಿದೆ. ಇದರಿಂದಾಗಿ ಜನಸಾಮಾನ್ಯರ ಬದುಕು ತುಟ್ಟಿಯಾಗಿದೆ ಬದುಕು ದುಸ್ತರವಾಗಿದೆ. ತಕ್ಷಣ ಕೇಂದ್ರ ಸರ್ಕಾರ ಬೆಲೆ ಏರಿಕೆಯನ್ನು ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಹಾಸನ-ಅರಕಲಗೂಡು-ರಾಮನಾಥಪುರ-ಕೊಣನೂರು ಮತ್ತು ಅರಕಲಗೂಡು-ಶನಿವಾರಸಂತೆ ರಸ್ತೆ ಸಂಪೂರ್ಣ ಹದಗೆಟ್ಟಿದೆ. ರಾಜ್ಯ ಸರ್ಕಾರ ರಸ್ತೆ ವಿಚಾರದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಸ್ತೆ ನಿರ್ಮಾಣಕ್ಕಾಗಿ ಬಂದ ಅನುದಾನವನ್ನು ಬೇರೆಡೆಗೆ ವರ್ಗಾಯಿಸಿಕೊಂಡು ಜಿಲ್ಲೆಯ ಜನರನ್ನು ವಂಚಿಸಿದೆ ಎಂದು ಆರೋಪಿಸಿದರು.
ಅರಕಲಗೂಡು-ಹಾಸನ ಮಾರ್ಗದ ಬಸ್ ಗಳು ಕಡ್ಡಾಯವಾಗಿ ಸಂತೆಪೇಟೆ ಮಾರ್ಗವಾಗಿ ಸಂಚರಿಸಬೇಕು, ಈಗ ಬೈಪಾಸ್ ಮಾರ್ಗದಲ್ಲಿ ಸಂಚರಿಸುತ್ತಿರುವುದರಿಂದ ರೈತರಿಗೆ ಮತ್ತು ಕೂಲಿಕಾರ್ಮಿಕರಿಗೆ ತುಂಬಾ ತೊಂದರೆಯಾಗಿದೆ, ಕೆಎಸ್ ಆರ್ ಟಿ ಸಿ ಡಿಸಿ ಬಸವರಾಜು ಈ ವಿಚಾರದಲ್ಲಿ ಬೇಜವಾಬ್ದಾರಿಯಿಂದ ವರ್ತಿಸುತ್ತಾ ಪೋಲಿಸರು ಅನುಮತಿಸಬೇಕು ಎಂದು ಹೇಳುತ್ತಿದ್ದಾರೆ. ಇಂತಹ ವರ್ತನೆಯನ್ನು ತಾವು ಸಹಿಸುವುದಿಲ್ಲ ಇನ್ನು ಒಂದು ವಾರದೊಳಗೆ ಸಂತೆಪೇಟೆ ಮಾರ್ಗವಾಗಿ ಬಸ್ ಗಳು ಈ ಹಿಂದಿನಂತೆ ಸಂಚರಿಸದಿದ್ದರೆ ಹಾಸನ ನಗರದೊಳಗೆ ಸಂಚರಿಸುವ ಎಲ್ಲಾ ಬಸ್ ಗಳನ್ನು ತಡೆಯಲಾಗುವುದು ಎಂದು ಎಚ್ಚರಿಸಿದರು.
ತಿಮ್ಮಕ್ಕನಿಂದ ಉಚಿತ ಗಿಡ ವಿತರಣೆ : ಪೊಟ್ಯಾಟೋ ಕ್ಲಬ್ ಆಶ್ರಯದಲ್ಲಿ ಉಚಿತ ಗಿಡಗಳನ್ನು ಸಾಲುಮರದ ತಿಮ್ಮಕ್ಕ ರೈತರಿಗೆ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ್ಲಬ್ ನ ಸಂಸ್ಥಾಪಕ ಅಧ್ಯಕ್ಷ ಯೋಗಾರಮೇಶ್ ತಿಳಿಸಿದ್ದಾರೆ. ಜು.3ರಂದು ಬೆಳಿಗ್ಗೆ 10.30ಕ್ಕೆ ಪಟ್ಟಣದ ಶಿಕ್ಷಕರ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾಲು ಮರದ ತಿಮ್ಮಕ್ಕ ಕಾರ್ಯಕ್ರಮವನ್ನು ಉದ್ಘಾಟಿಸಿ ಗಿಡ ವಿತರಣೆ ಮಾಡುವರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications