ತೆಲಂಗಾಣ ತಳಮಳ: 72 ಶಾಸಕರಿಂದ ರಾಜೀನಾಮೆ

ರಾಜ್ಯ ವಿಧಾನಸಭೆಯ ಸ್ಪೀಕರ್ ಮಲ್ಲು ಭಟ್ಟಿ ವಿಕ್ರಮಾರ್ಕ ಅವರಿಗೆ ಈ ಶಾಸಕರು ತಮ್ಮ ರಾಜೀನಾಮೆ ಪತ್ರಗಳನ್ನು ಜುಲೈ 4ರಂದು ಸಲ್ಲಿಸಿದ್ದಾರೆ.
ರಾಜೀನಾಮೆ ನೀಡಿದ ಕಾಂಗ್ರೆಸ್ ಸದಸ್ಯರ ಪೈಕಿ 11 ಮಂದಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದಾರೆ. ಟಿಡಿಪಿಯ 4 ಭಿನ್ನಮತೀಯ ಶಾಸಕರೂ ರಾಜೀನಾಮೆ ಸಲ್ಲಿಸಿದ್ದು, ಒಟ್ಟು 72 ಶಾಸಕರು ರಾಜೀನಾಮೆ ನೀಡಿದ್ದಾರೆ. ಈ ಮಧ್ಯೆ, ರಾಜ್ಯಸಭಾ ಸದಸ್ಯ ಕೆ. ಕೇಶವ ರಾವ್ ಸಹ ರಾಜೀನಾಮೆ ಸಲ್ಲಿಸಿದ್ದಾರೆ.
ಇದೇ ವೇಳೆ, ತೆಲಂಗಾಣ ಭಾಗದ ಇನ್ನೂ 53 ಶಾಸಕರು ಮತ್ತು 9 ಕಾಂಗ್ರೆಸ್ ಸಂಸದರು ಇಂದು ಸಂಜೆ ವೇಳೆಗೆ ರಾಜೀನಾಮೆ ನಿಡುವ ಸಾಧ್ಯತೆಗಳಿವೆ. ಈ ಮಧ್ಯೆ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ ಎಸ್) ಅಧ್ಯಕ್ಷ ಕೆ. ಚಂದ್ರಶೇಖರ್ ರಾವ್ ಮತ್ತು ಮೇಡಕ್ ಸಂಸದೆ, ನಟಿ ವಿಜಯಶಾಂತಿ ಅವರು ಇನ್ನೂ ರಾಜೀನಾಮೆ ಸಲ್ಲಿಸಿಲ್ಲ.
ಸಾಮೂಹಿಕ ರಾಜೀನಾಮೆ ಪರಿಣಾಮವಾಗಿ ರಾಜಕೀಯ ಮತ್ತು ಸಂವಿಧಾನಾತ್ಮಕ ಬಿಕ್ಕಟ್ಟು ತೀವ್ರವಾಗಿದೆ. ಮುಖ್ಯಮಂತ್ರಿ ರೆಡ್ಡಿ ಅವರ ತಲೆನೋವು ಹೆಚ್ಚಾಗಿದೆ. ಚಿರಂಜೀವಿ ನೇತೃತ್ವದ ಪ್ರಜಾರಾಜ್ಯಂ ಪಾರ್ಟಿಯ 17 ಶಾಸಕರು ರೆಡ್ಡಿಗೆ ಬೆಂಬಲ ನೀಡುವ ಸಾಧ್ಯತೆ ಇದೆಯಾದರೂ ರಾಜ್ಯ ಮತ್ತು ಕೇಂದ್ರದ ಎರಡೂ ಸರಕಾರಗಳಿಗೆ ವಿಷಯ ಪರಿಸ್ಥಿತಿ ತಲೆದೋರುವುದು ಖಚಿತವಾಗಿದೆ.
ಆಂಧ್ರ ವಿಧಾನಸಭೆ ಬಲ - 294
ಕಾಂಗ್ರೆಸ್ನ ಹಾಲಿ ಬಲ - 164
ತೆಲಂಗಾಣ ಕಾಂಗ್ರೆಸ್ ಶಾಸಕರು - 50
ಸರ್ಕಾರ ರಚನೆಗೆ ಬೇಕಿರುವ ಬಲ - 148
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications