ಯಡಿಯೂರಪ್ಪ ಮಂಗಳವಾರ ಸ್ಕೂಲಿಗೆ ಹೋಗುತ್ತಾರೆ

ಸರಕಾರಿ ಶಾಲೆಗಳು ಹೇಗೆ ನಡೆಯುತ್ತಿವೆ, ವಿದ್ಯಾರ್ಥಿಗಳು ಬರುತ್ತಿದ್ದಾರಾ, ಶಿಕ್ಷಕರೆಷ್ಟಿದ್ದಾರೆ, ಶಾಲೆಗೆ ನಡ್ಕೊಂಡೇ ಬರ್ತಾರಾ, ಬಸ್ಸಿಗೆ ಬರ್ತಾರಾ... ಇತ್ಯಾದಿ ಸಂಗತಿಗಳ ಪರಿಶೀಲನೆ ಮಾಡಲಿದ್ದಾರೆ. 'ಇದು ನಮ್ಮ ಶಾಲೆ' ಅಭಿಯಾನದಡಿ ಇಂಥದೊಂದು ವಿನೂತನ ಕಾರ್ಯಕ್ರಮವನ್ನು ಸರ್ವಶಿಕ್ಷಣ ಅಭಿಯಾನದ ನಿರ್ದೇಶಕ ಬಿವಿ ಕುಲಕರ್ಣಿ ಹಮ್ಮಿಕೊಂಡಿದ್ದಾರೆ.
ಮಕ್ಕಳ ಶಿಕ್ಷಣದ ಹಕ್ಕು ಕಾಯಿದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಮುದಾಯದ ಸಹಭಾಗಿತ್ವವನ್ನು ಪಡೆಯುವ ದಿಸೆಯಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ವಿಧಾನಸಭೆ, ಸಂಸತ್ ಸದಸ್ಯರು ಶಾಲೆಗಳಿಗೆ ಭೇಟಿ ನೀಡುವ ಕಾರ್ಯಕ್ರಮ ಆಯೋಜಿಸಲಾಗಿದೆ. ಇಂಥ ಪ್ರಯತ್ನ ನಡೆಯುತ್ತಿರುವುದು ಇದು ಪ್ರಥಮ ಬಾರಿ.
ಜನಪ್ರತಿನಿಧಿಗಳು ಏನೇನು ಪರಿಶೀಲಿಸಲಿದ್ದಾರೆ?
* ಶಾಲೆ ಆರಂಭವಾಗುವ ಹೊತ್ತಿಗೆ ಪ್ರಾರ್ಥನಾ ಚಟುವಟಿಕೆ.
* ತರಗತಿವಾರು ಮಕ್ಕಳ ಮತ್ತು ಶಿಕ್ಷಕರ ಹಾಜರಾತಿ.
* ಪಠ್ಯಪುಸ್ತಕ, ಸಮವಸ್ತ್ರ, ಬೈಸಿಕಲ್ಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ.
* ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶೌಚಾಲಯ ವ್ಯವಸ್ಥೆ.
* ಶೌಚಾಲಯಗಳ ಸ್ವಚ್ಛತೆ ಮತ್ತು ಬಳಕೆ.
* ಕುಡಿಯುವ ನೀರಿನ ಲಭ್ಯತೆ, ಬಿಸಿಯೂಟದ ತಯಾರಿ, ಅದರ ವಿತರಣೆ.
* ಗ್ರಂಥಾಲಯದ ಬಳಕೆ, ಮಕ್ಕಳಲ್ಲಿ ಓದುವ ಸಾಮರ್ಥ್ಯದ ಅಧ್ಯಯನ.
* ಪಾಠ ಮಾಡುವ ಗುಣಮಟ್ಟದ ಪರಿಶೀಲನೆ.
ಈ ಎಲ್ಲ ವಿಷಯಗಳನ್ನು ಕೂಲಂಕಷವಾಗಿ ಅಧ್ಯಯನ ಮಾಡಿದ ನಂತರ ಶಾಲಾಭಿವೃದ್ಧಿ ಮತ್ತು ಉಸ್ತುವಾರಿ ಸಮಿತಿಯ ಕ್ರಿಯಾಶೀಲತೆ ಮತ್ತು ಸಮುದಾಯದ ಸಹಭಾಗಿತ್ವದ ಕುರಿತು ಜನಪ್ರತಿನಿಧಿಗಳು ಗಮನಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ. ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಆಲ್ ದಿ ಬೆಸ್ಟ್. ಜನಪ್ರತಿನಿಧಿಗಳು ಈ ಬಾರಿಯಾದರೂ ಶಾಲೆಗೆ ಚಕ್ಕರ್ ಹಾಕದಿರಲಿ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications