ಉದ್ದೀಪನ ಮದ್ದಿಗೆ 'ಚಿನ್ನದ ಚಿಗರೆ' ಅಶ್ವಿನಿ ಅಕ್ಕುಂಜೆ ಬಲಿ

ಏನಪಾ ಅಂದರೆ ಉದ್ದೀಪನ ಮದ್ದು ಸೇವನೆ ಪರೀಕ್ಷೆಯಲ್ಲಿ ಸಿಕ್ಕಿಬಿದ್ದಿರುವ ಭಾರತ ಅಥ್ಲೀಟ್ಗಳಾದ ಅಶ್ವಿನಿ ಅಕ್ಕುಂಜೆ ಹಾಗೂ ಪ್ರಿಯಾಂಕಾ ಪನ್ವಾರ್ ಅವರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ. ಇದರಿಂದಾಗಿ ಜಪಾನ್ನ ಕೋಬ್ನಲ್ಲಿ ಜುಲೈ 7ರಿಂದ 10ರವರೆಗೆ ನಡೆಯಲಿರುವ ಏಷ್ಯಾ ಅಥ್ಲೆಟಿಕ್ ಚಾಂಪಿಯನ್ಷಿಪ್ಗೆ ತೆರಳದಂತೆ ಅವರನ್ನು ತಡೆಹಿಡಿಯಲಾಗಿದೆ.
ಕೋಚ್ ಕಾರಣೀಭೂತ: 'ತಮ್ಮಿಂದ ತಪ್ಪನ್ನು ಮುಚ್ಚಿ ಹಾಕಲು ಆಹಾರ ಎಂದು ಕೆಲವರು ಸಬೂಬು ಹೇಳುತ್ತಿದ್ದಾರೆ. ಅಥ್ಲೀಟ್ಗಳು ಸಿಕ್ಕಿಬೀಳಲು ಆಹಾರ ಖಂಡಿತ ಕಾರಣವಲ್ಲ. ವಿದೇಶಿ ಕೋಚ್ ಯೂರಿ ಒಗೊರೊನಿಕ್ ಕಾರಣ. ಇದರಲ್ಲಿ ಭಾರತದ ಕೆಲ ಕೋಚ್ಗಳ ಕೈವಾಡವೂ ಇದೆ. ಉತ್ತಮ ಫಲಿತಾಂಶ ತರಲು ಅಡ್ಡ ದಾರಿ ಹಿಡಿಯುತ್ತಿದ್ದಾರೆ ಎಂದು ಖ್ಯಾತ ಕೋಚ್ ವಿ.ಆರ್.ಬೀಡು ಆರೋಪಿಸಿದ್ದಾರೆ. ಈಗ ಸಿಕ್ಕಿಬಿದ್ದಿರುವ ಹೆಚ್ಚಿನ ಮಹಿಳಾ ಅಥ್ಲೀಟ್ಗಳೆಲ್ಲಾ ಉಕ್ರೇನ್ನ ಯೂರಿ ಅವರ ಮಾರ್ಗದರ್ಶನದಲ್ಲಿ ಪಟಿಯಾಲದಲ್ಲಿ ತರಬೇತಿ ಪಡೆಯುತ್ತಿದ್ದಾರೆ ಎನ್ನುವುದು ವಿಶೇಷ.
ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ (ನಾಡಾ) ಜೂನ್ 27ರಂದು ಪಟಿಯಾಲದಲ್ಲಿ ಇವರನ್ನು ಪರೀಕ್ಷೆಗೆ ಒಳಪಡಿಸಿತ್ತು. ಅದರಲ್ಲಿ ಅನಾಬಾಲಿಕ್ ಸ್ಟಿರಾಯ್ಡ ತೆಗೆದುಕೊಂಡಿರುವುದು 'ಎ' ಸ್ಯಾಂಪಲ್ ಪರೀಕ್ಷೆಯಿಂದ ಸಾಬೀತಾಗಿದೆ. 'ಎ' ಸ್ಯಾಂಪಲ್ ಪರೀಕ್ಷೆಯಲ್ಲಿ 'ಮೆಟಾಬಾಲೈಟ್ಸ್ ಆಫ್ ಮೆತಂಡಿನಾನ್' ಎಂಬ ಅಂಶ ಇರುವುದು ಪತ್ತೆಯಾಗಿದೆ. ಆಕಸ್ಮಾತ್ 'ಬಿ' ಸ್ಯಾಂಪಲ್ ಪರೀಕ್ಷೆಯಲ್ಲೂ ಮದ್ದು ಸೇವಿಸಿರುವುದು ಸಾಬೀತಾದರೆ ಗರಿಷ್ಠ ಎರಡು ವರ್ಷಗಳ ನಿಷೇಧ ಶಿಕ್ಷೆಗೆ ಗುರಿಯಾಗುವ ಸಾಧ್ಯತೆಯಿದೆ.
ನವದೆಹಲಿ ಕಾಮನ್ವೆಲ್ತ್ ಹಾಗೂ ಚೀನಾದಲ್ಲಿ ನಡೆದ ಏಷ್ಯನ್ ಕ್ರೀಡಾಕೂಟದಲ್ಲಿ 400 ಮೀ. ಓಟ ಮತ್ತು 4x400 ಮೀ. ರಿಲೇಯಲ್ಲಿ ಚಿನ್ನದ ಪದಕ ಜಯಿಸಿದ್ದ ಅಶ್ವಿನಿ ಏಷ್ಯಾ ಅಥ್ಲೆಟಿಕ್ ಚಾಂಪಿಯನ್ಷಿಪ್ನಲ್ಲಿ ಪಾಲ್ಗೊಳ್ಳಲು ಸೋಮವಾರ ರಾತ್ರಿ 11.30ಕ್ಕೆ ಜಪಾನ್ಗೆ ತೆರಳಬೇಕಿತ್ತು. ಅಶ್ವಿನಿ ಹಾಗೂ ಪ್ರಿಯಾಂಕಾ 4x400 ಮೀ. ರಿಲೇಯಲ್ಲಿ ಸ್ಪರ್ಧಿಸಲು ಆಯ್ಕೆ ಆಗಿದ್ದರು. ಅಷ್ಟರಲ್ಲಿ ಈ ಆಘಾತಕಾರಿ ಅಂಶ ಹೊರಬಿದ್ದಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications