ಈ ಚಂದಗುಳಿ ಗಣಪನಿಗೆ ಘಂಟೆಯೇ ನೈವೇದ್ಯ!

ಆಸ್ತಿಕ ವರ್ಗದಲ್ಲಿ ತನ್ನದೇ ಅಪಾರ ಸಂಖ್ಯೆಯ ಭಕ್ತಾದಿಗಳನ್ನು ಹೊಂದಿ, ನಿತ್ಯ ಪೂಜಿಸಲ್ಪಡುತ್ತಿರುವ ಈ ಗಣಪ ಜಿಲ್ಲೆಯ ಮಾತು ಬಿಡಿ ಹೊರ ರಾಜ್ಯಗಳಲ್ಲಿಯೂ ಭಕ್ತರನ್ನು ಹೊಂದಿದ್ದಾನೆಂದರೆ ನಂಬಲೇ ಬೇಕು.ಘಂಟೆ ಗಣಪನೆಂಬ ಅನ್ವರ್ಥ ಹುಟ್ಟಿಕೊಳ್ಳಲೂ ಕಾರಣವಿದೆ. ನಿಮ್ಮ ಸಮಸ್ಯೆ ಯಾವುದೇ ಇರಲಿ.ಪರಿಹಾರಕ್ಕಾಗಿ ಈತ ಕೇಳುವದು ನಿಮ್ಮ ಶಕ್ತಿಗೆ ಅನುಸಾರವಾಗಿ ಯಾವುದೇ ಗಾತ್ರದ ಘಂಟೆಯಷ್ಟೇ.ನಂಬಿ ಕೆಟ್ಟವರಿಲ್ಲ ಎನ್ನುತ್ತಾರೆ.
ಹಾಗೆಯೇ ಈ ಘಂಟೆ ಗಣಪನನ್ನು ನಂಬಿದವರಿಗೆ ಪರಿಹಾರವೂ ದೊರೆಯದಿಲ್ಲ. ಅಚ್ಚರಿಯೆಂದರೆ, ಭಕ್ತರು ಇಲ್ಲಿ ಬಂದು ತಮ್ಮ ಸಮಸ್ಯೆಯ ಪರಿಹಾರಕ್ಕಾಗಿ ಹರಕೆ ಹೊತ್ತ ನಂತರ ಅವರ ಪ್ರತಿಯೊಂದು ಸಮಸ್ಯೆಯೂ ಪರಿಹಾರವಾಗುತ್ತದೆ.ಇದು ಕೇವಲ ನಂಬಿಕೆಯ ವಿಷಯವಷ್ಟೇ ಅಲ್ಲ. ಸತ್ಯವೂ ಕೂಡ.
ಹೀಗೆ ಭಕ್ತಾದಿಗಳು ಸಲ್ಲಿಸಿ ಹೋದ ಘಂಟೆಗಳ ದೊಡ್ಡ ಸಾಲೇ ಇಲ್ಲಿದೆ.ಈ ದೇವಸ್ಥಾನದಲ್ಲಿ ಎತ್ತ ಕಣ್ಣು ಹಾಯಿಸಿದರೂ ಬರೀ ಘಂಟೆಗಳೇ!ಕಿರುಬೆರಳಿನಾಕಾರದ ಘಂಟೆಗಳಿಂದ ಹಿಡಿದು ದೊಡ್ಡ ದೊಡ್ಡ ಘಂಟೆಗಳು.ಪ್ರವೇಶ ದ್ವಾರದಲ್ಲೂ ಘಂಟೆ.ಕಿಟಕಿಗಳ ಮೇಲ್ಗಡೆಗೂ ಘಂಟೆ.ಅಷ್ಟೇ ಅಲ್ಲ,ದೇವಾಲಯದ ಛಾವಣಿಯ ತೊಲೆ, ಜಂತಿಗಳಲ್ಲೂ ಸಾಲುಸಾಲು ಘಂಟೆಗಳು.ಗೋಪುರದ ಸುತ್ತಲೂ ಘಂಟೆಗಳು.....ಈ ಘಂಟೆಗಳ ಸಾಲನ್ನು ನೋಡುವದೇ ಸಂಭ್ರಮ.
ಇಲ್ಲಿ ಪ್ರಸಾದ ಕೇಳುವದು ಎಂಬ ವಿಶಿಷ್ಠ ಪದ್ಧತಿಯೂ ಇದೆ.ಸಮಸ್ಯೆಗಳ ಪರಿಹಾರಕ್ಕಾಗಿ ಆತನಲ್ಲಿಯೇ ಮೊರೆಹೋಗುವದು.ಅರ್ಚಕರ ಪ್ರಾರ್ಥನೆಯ ನಂತರ ಯಾವ ಹರಕೆಗೆ ಪ್ರಸಾದ ಸಿದ್ಧಿಸುತ್ತದೋ ಆ ಹರಕೆಯನ್ನು ನಂತರ ತೀರಿಸಿಕೊಳ್ಳಬೇಕಷ್ಟೆ.
ಈ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತಾದಿಗಳ ಬಾಯಿಂದ ಬಾಯಿಗೆ ಹರಡಿದ ಗಣಪನ ಮಹಿಮೆ ಹೊರರಾಜ್ಯಗಳಲ್ಲೂ ಹಬ್ಬಿದೆ.ನೆರೆಯ ಗೋವಾ,ಮಹಾರಾಷ್ಟ್ರಗಳಿಂದ ಪ್ರತಿನಿತ್ಯವೂ ಭಕ್ತಾದಿಗಳು ಬರುತ್ತಾರೆ.ಸಂಕಷ್ಟಹರ ಚತುರ್ಥಿ,ಅಂಗಾರಕ ಚತುರ್ಥಿಗಳ ದಿನವಂತೂ ಇಲ್ಲಿ ಜಾತ್ರೆಯೇ ನೆರೆದಿದೆಯೇನೋ ಎಂಬಷ್ಟು ಜನ ಸೇರುತ್ತಾರೆ.
ಗಣಹವನ, ಮೋದಕ ಹವನಗಳು ನಿರಂತರವಾಗಿ ನಡೆಯುತ್ತವೆ. ಹಚ್ಚ ಹಸಿರಿನ ನಡುವೆ ಇರುವ ಚಂದಗುಳಿ, ಕಳೆದ ನಾಲ್ಕಾರು ವರ್ಷಗಳಿಂದೀಚೆಗಷ್ಟೇ ಪ್ರಸಿದ್ಧವಾಗುತ್ತಿದೆ.1992ರಲ್ಲಿ ನೂತನ ಕಟ್ಟಡ ಸ್ಥಾಪನೆಗೊಂಡು ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಗಳಿಂದ ನೂತನ ಮೂರ್ತಿ ಪ್ರತಿಷ್ಠಾಪನೆಗೊಂಡಿದೆ.
ಏನಿಲ್ಲವೆಂದರೂ ಇಲ್ಲಿರುವ ಸಾಲು ಸಾಲು ಘಂಟೆಗಳನ್ನು ಕಣ್ತುಂಬಿಕೊಳ್ಳುವ ಉದ್ದೇಶದಿಂದಾದರೂ ಇಲ್ಲೊಮ್ಮೆ ಬರಲೇಬೇಕು ನೀವು.ಯಲ್ಲಾಪುರದಿಂದ 17 ಕಿ.ಮೀ ದೂರವಿರುವ ಚಂದಗುಳಿ ದೇವಸ್ಥಾನ ತಲುಪಲು ಮಾಗೋಡು ಜಲಪಾತದ ಮಾರ್ಗದಲ್ಲಿ ಸಾಗಬೇಕು.ಬಸ್ ಸೌಕರ್ಯವಿದೆ.
ಅಲ್ಲದೆ,ಶಿರಸಿ-ಯಲ್ಲಾಪುರ ರಸ್ತೆಯಲ್ಲಿರುವ ಮಳಲಗಾಂ-ಮಾಗೋಡು ಕೂಡು ರಸ್ತೆಯಿಂದಲೂ ತಲುಪಬಹುದು. ದೇವಸ್ಥಾನದ ಪೂಜೆ ಹಾಗೂ ಇತರ ಮಾಹಿತಿಗಳಿಗೆ ದೇವಾಲಯದ ದೂ.ಸಂ:(08419)238 380,238 395 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.
;-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications