ದೇವಸ್ಥಾನದ ಕೋಟಿ ಆಸ್ತಿ ಲೂಟಿ : ಅರ್ಚಕ ಕಣ್ಣೀರು

ದೇವಸ್ಥಾನ ಸ್ಥಳ ಗೋಮಾಳದ ಜಾಗವಾಗಿದ್ದು, ಸರಕಾರಕ್ಕೆ ಸೇರಿದೆ ಎಂಬ ನೆಪವೊಡ್ಡಿ ದೇವಸ್ಥಾನವನ್ನು ಸಂಪೂರ್ಣ ನಾಶ ಮಾಡಲಾಗಿದೆ. ಕೊಳದ ಮಠದ ಸ್ವಾಮೀಜಿ ಮಧ್ಯಸ್ಥಿಕೆಯಿಂದ ಗರ್ಭಗುಡಿ ಮಾತ್ರ ಉಳಿದುಕೊಂಡಿದೆ. ಇದರಿಂದ 5 ಕೋಟಿ ರು.ನಷ್ಟು ಆಸ್ತಿಪಾಸ್ತಿಗೆ ಭ್ರಷ್ಟ ಅಧಿಕಾರಿಯಿಂದ ಹಾನಿಯಾಗಿದೆ. ಮುಖ್ಯಮಂತ್ರಿಗಳೇ ಇದಕ್ಕೆ ಪರಿಹಾರ ದೊರಕಿಸಿಕೊಡಬೇಕು ಎಂದು ಅವರು ನುಡಿದರು.
ಸುದ್ದಿಗಾರರನ್ನು ಉದ್ದೇಶಿಸಿ ತಮ್ಮ ಗೋಳನ್ನು ಹಂಚಿಕೊಂಡ ದೇವಸ್ಥಾನದ ಪ್ರಧಾನ ಅರ್ಚಕ ಮತ್ತು ವ್ಯವಸ್ಥಾಪಕ ಟ್ರಸ್ಟಿ ಶಕ್ತಿಬಾಬಾ ಅವರು ಕಷ್ಟನಷ್ಟಗಳನ್ನು ನೆನೆದು ಕಣ್ಣೀರು ಸುರಿಸಿದರು. ದೇವಾಲಯದ ಜಮೀನು ಗೋಮಾಳವಾಗಿದೆ ಎಂದು ಸರಕಾರ ಹೇಳುತ್ತಿದೆ. ಇದರ ಹಿಂದೆ ಡಿಸಿ ಮತ್ತು ಜಮೀನು ಮಾರಿದ ವೇಣುಗೋಪಾಲ ಎಂಬಾತನ ಹುನ್ನಾರವಿದೆ ಎಂದು ಆರೋಪಿಸಿದರು.
ಇಷ್ಟು ಮಾತ್ರವಲ್ಲ, ದೇವಸ್ಥಾನ ತೆರವುಗೊಳಿಸುವಾಗ ಮಗುವಿನಂತೆ ಸಾಕಿದ್ದ ಗೋವನ್ನು ಹತ್ಯೆ ಕೂಡ ಮಾಡಿದ್ದಾರೆ. ಗೋಹತ್ಯೆ ಮಾಡಿದ ಈ ಹೆಗ್ಗಣಗಳನ್ನು ಮೊದಲಿಗೆ ಮನೆಗೆ ಕಳುಹಿಸಬೇಕು ಎಂದು ಶಕ್ತಿಬಾಲಾ ಆಕ್ರೋಶ ವ್ಯಕ್ತಪಡಿಸಿದರು. ದೇವಸ್ಥಾನ ಮೂರು ಅರ್ಚಕರನ್ನು ಹೊಂದಿದ್ದು, ಎಲ್ಲರೂ ಈಗ ನಿರುದ್ಯೋಗಿಗಳಾಗಿದ್ದಾರೆ. ನನ್ನಂಥವನಿಗೇ ಹೀಗೆ ಆದರೆ ಬಡವರ ಗತಿಯೇನು ಎಂದು ಶಕ್ತಿಬಾಲಾ ಪ್ರಶ್ನಿಸಿದರು.
ಸುದ್ದಿಗೋಷ್ಠಿಯಲ್ಲಿ ಹಾಜರಿದ್ದ ಕೊಳದ ಮಠದ ಡಾ. ಶಾಂತವೀರ ಸ್ವಾಮೀಜಿಯವರು, ಯಾವುದೇ ಪೂರ್ವಭಾವಿ ನೋಟೀಸ್ ಇಲ್ಲದೆ ನಡೆಸಿದ ಕಾರ್ಯಾಚರಣೆಯಿಂದ ದೇವಸ್ಥಾನದ ಆಸ್ತಿಪಾಸ್ತಿಗೆ ಭಾರೀ ಹಾನಿಯಾಗಿದ್ದು, ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟಾಗಿದೆ. ಕೂಡಲೆ ಮಂಜುನಾಥ್ ವಿರುದ್ಧ ಕ್ರಮ ಜರುಗಿಸಿ, ದೇವಸ್ಥಾನವನ್ನು ಮರುನಿರ್ಮಾಣ ಮಾಡಿಕೊಡದಿದ್ದರೆ ಭಕ್ತರು ಜು.6ರಂದು ಕೆಂಗೇರಿ ಬಳಿ ಮೈಸೂರು ರಸ್ತೆ ತಡೆ ಮಾಡಲಿದ್ದಾರೆ ಎಂದು ನುಡಿದರು. [ಈ ದಿನದ ಎಲ್ಲಾ ಲೇಖನಗಳು]
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications