ಕೃಷ್ಣದೇವರಾಯ ನಾಣ್ಯ ತಯಾರಿಕೆಗೆ ಕೇಂದ್ರ ಅಸಡ್ಡೆ

ಕೇಂದ್ರ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಅವರು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಗಳಿಗೆ 'ನಮ್ಮಲ್ಲಿ ನಾಣ್ಯ ತಯಾರಕ ಸಿಬ್ಬಂದಿಯ ಕೊರತೆ ಇದೆ. ನಾಣ್ಯಗಳ ಕೊರತೆಯೂ ಇದೆ. ಟಂಕ ಶಾಲೆಯ ಸಿಬ್ಬಂದಿ ಆರ್ಬಿಐನ ಟಾರ್ಗೆಟ್ ತಲುಪುವಲ್ಲಿ ಬ್ಯುಸಿಯಾಗಿದ್ದಾರೆ. ನಿರೀಕ್ಷಿಸಿದ ಸಮಯದಲ್ಲಿ ಸಾಧ್ಯವಿಲ್ಲ" ಎಂದು ಪತ್ರದಲ್ಲಿ ತಿಳಿಸುವ ಮೂಲಕ ಈ ಪ್ರಶ್ನೆ ಮೂಡಿದೆ.
ಕರ್ನಾಟಕ ರಾಜ್ಯ ಸರ್ಕಾರ ವಿಜಯನಗರ ಸಾಮ್ರಾಜ್ಯದ ಅಧಿಪತಿ ಶ್ರೀಕೃಷ್ಣದೇವರಾಯ ಅವರ 500ನೇ ಪಟ್ಟಾಭಿಷೇಕ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಿ ಹಂಪೆ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದೆ. ಅಲ್ಲದೇ, 100 ಕೋಟಿ ರುಪಾಯಿ ವೆಚ್ಚದಲ್ಲಿ ಥೀಮ್ಪಾರ್ಕ್ ನಿರ್ಮಿಸಲಿದೆ.
ಕೇಂದ್ರ ಸರ್ಕಾರ ಕೂಡ ರಾಜ್ಯ ಸರ್ಕಾರದ ಆಶಯಕ್ಕೆ ಸಕಾರಾತ್ಮಕವಾಗಿಯೇ ಸ್ಪಂದಿಸಿ, ಶ್ರೀಕೃಷ್ಣದೇವರಾಯ ಸ್ಮಾರಕ ಅಂಚೆ ಚೀಟಿಯನ್ನು ಸಮಾರಂಭದ ವೇದಿಕೆಯಲ್ಲೇ ಪ್ರಕಟಿಸಿದೆ. ಇದಕ್ಕೆ ಪೂರಕವಾಗಿ 'ಶ್ರೀಕೃಷ್ಣದೇವರಾಯನ ಪಟ್ಟಾಭಿಷೇಕದ 500ನೇ ವರ್ಷಾಚರಣೆಯ ಅಂಗವಾಗಿ ಅಪರೂಪದ ಸ್ಮಾರಕ ನಾಣ್ಯವನ್ನು" ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಕೇಂದ್ರ ಹಣಕಾಸು ಸಚಿವಾಲಕ್ಕೆ ಮನವಿ ಸಲ್ಲಿಸಿತ್ತು.
ಮುಖ್ಯಮಂತ್ರಿ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಿ. ಜನಾರ್ದನ ರೆಡ್ಡಿ ಇಬ್ಬರೂ ಕೂಡ ಕೇಂದ್ರ ಹಣಕಾಸು ಸಚಿವಾಲಯಕ್ಕೆ ಈ ಕುರಿತು ಪತ್ರ ಬರೆದು 'ಅಪರೂಪದ ಸ್ಮಾರಕ" ನಾಣ್ಯ ಬಿಡುಗಡೆಗೆ ಕೋರಿದ್ದರು. ಆದರೆ, ಕೇಂದ್ರ ಸರ್ಕಾರ ನಕಾರಾತ್ಮಕವಾಗಿ ಸ್ಪಂದಿಸಿದೆ.
ಜನಾರ್ದನರೆಡ್ಡಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಣಬ್ ಮುಖರ್ಜಿ ಅವರು ಅಪರೂಪದ ಸ್ಮಾರಕ ನಾಣ್ಯ ಬಿಡುಗಡೆಗೆ ಸಕಾರಾತ್ಮಕವಾಗಿ ಸ್ಪಂದಿಸಿ ದೇಶದ - ವಿಶ್ವದ ಇತಿಹಾಸದ ಭಾಗವಾಗಿರುವ ಹಂಪೆಯ ವಿಜಯನಗರ ಸಾಮ್ರಾಜ್ಯಕ್ಕೆ ಗೌರವ ಸಲ್ಲಿಸಬೇಕಿದೆ. ವಿಜಯನಗರ ಸಾಮ್ರಾಜ್ಯ ದೇಶದ ಕೀರ್ತಿ ಶಿಖಿರ. ಕೇಂದ್ರ ಸಚಿವ ಪಿ. ಚಿದಂಬರಂ ಅವರು ಕೂಡ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ದೇಶದ ಯುವ ಪೀಳಿಗೆಗೆ ವಿಜಯನಗರ ಸಾಮ್ರಾಜ್ಯದ ಮಹತ್ವ, ಸಾಧನೆ ಹಾಗೂ ಇತಿಹಾಸ ತಿಳಿಸಿ ಹೇಳುವ ನಿಟ್ಟಿನಲ್ಲಿ ಶ್ರೀಕೃಷ್ಣದೇವರಾಯರ ನಾಣ್ಯ ಬಿಡುಗಡೆ ಆಗಬೇಕಿತ್ತು ಎಂದು ಹೇಳಿದರು.
ಈ ವಿಚಾರದಲ್ಲಿ ಅಧಿಕಾರಿಗಳು ದಾರಿತಪ್ಪಿಸಿರುವ ಸಾಧ್ಯತೆಗಳಿವೆ. ಕಾರಣ ಕೇಂದ್ರ ಸರ್ಕಾರಕ್ಕೆ ಮತ್ತು ಸಚಿವ ಪ್ರಣಬ್ ಮುಖರ್ಜಿ ಅವರಿಗೆ ಮತ್ತೊಮ್ಮೆ ಪತ್ರ ಬರೆದು, ನಾಣ್ಯ ಬಿಡುಗಡೆಗೆ ಕೋರುವೆ ಎಂದು ಹೇಳಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications