ಇಂದು ದೊಡ್ಡಗೌಡರ ದರ್ಶನ; ಯಡಿಯೂರಪ್ಪಗೆ ಶುಭ ಶುಕ್ರವಾರವಾಗಲಿ

ಹಾಸನ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ದೇವೇಗೌಡರ ಗುಡುಗಿಗೆ ಬೆದರಿದಂತಿರುವ ಯಡಿಯೂರಪ್ಪ ಅವರು ಶುಕ್ರವಾರ ಸಂಜೆ 5.30ಕ್ಕೆ ತಮ್ಮ ಗೃಹ ಕಚೇರಿ 'ಕೃಷ್ಣಾ'ದಲ್ಲಿ ಸಭೆ ಕರೆದು ಅದರಲ್ಲಿ ಭಾಗವಹಿಸುವಂತೆ ದೇವೇಗೌಡ ಮತ್ತು ಹಾಸನ ಜಿಲ್ಲೆಯ ಶಾಸಕರಿಗೆ ಆಹ್ವಾನ ನೀಡಿದ್ದಾರೆ.
ಜಿಲ್ಲೆಯ ಅಭಿವೃದ್ಧಿಯ ವಿಚಾರದಲ್ಲಿ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಹಾಸನದಲ್ಲಿ ಹಾಗೂ ಬೆಂಗಳೂರಿನ ಮುಖ್ಯಮಂತ್ರಿ ನಿವಾಸದ ಎದುರು ದೇವೇಗೌಡರು ಶಾಸಕರ ಜತೆಗೂಡಿ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಆ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರೇ ಜು. 8ರಂದು ಸಭೆ ನಿಗದಿ ಮಾಡಿದ್ದರು. ಮುಖ್ಯಮಂತ್ರಿ ಸಚಿವಾಲಯದ ಅಧಿಕಾರಿಗಳಿಗೆ ದೇವೇಗೌಡರು 16 ಬೇಡಿಕೆಗಳ ಮನವಿಯನ್ನು ಅಂದು ಅರ್ಪಿಸಿದ್ದರು.











Click it and Unblock the Notifications