ಕುಮಾರಸ್ವಾಮಿ ಉಪವಾಸ ಸತ್ಯಾಗ್ರಹ ಅಂತ್ಯ

ಮುಖ್ಯಮಂತ್ರಿಗಳ ಸಂಧಾನದ ಹಿನ್ನೆಲೆಯಲ್ಲಿ ಬೆಳಗ್ಗೆ 11 ಗಂಟೆಗೆ ಜೆಡಿಎಸ್ ಕಚೇರಿಯಲ್ಲಿ ಸಭೆ ಸೇರಿ ಕುಮಾರಸ್ವಾಮಿ ಅವರ ಉಪವಾಸ ಸ್ಥಗಿತಗೊಳಿಸುವ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ಸಂಸದ ಚಲುವರಾಯಸ್ವಾಮಿ ಪ್ರಕಟಿಸಿದ್ದಾರೆ. ಈ ಮಧ್ಯೆ, ಸ್ಥಳಕ್ಕೆ ಯಡಿಯೂರಪ್ಪ ಅವರೇ ಬರಬೇಕೆಂದು ಜೆಡಿಎಸ್ ಬೆಂಬಲಿಗರು ಪಟ್ಟು ಹಿಡಿದಿದ್ದಾರೆ.
ಬಿಜೆಪಿ ಮತ್ತು ಮುಖ್ಯವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜೆಡಿಎಸ್ ವರಿಷ್ಠರ ವಿರುದ್ಧ ಮಾಡಿರುವ ಅಕ್ರಮ ಆಸ್ತಿ ಗಳಿಕೆಯ ಆರೋಪದ ಕಳಂಕವನ್ನು ತೊರೆಯಲು ತನಿಖೆಗೆ ಆಗ್ರಹಿಸಿ ಕುಮಾರಸ್ವಾಮಿ ಶನಿವಾರ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ್ದರು.












Click it and Unblock the Notifications