ರೈಲು ದುರಂತ ಸ್ಥಳಕ್ಕೆ ಹೋಗದೆ ಸಚಿವರ ಉದ್ದಟತನ

Manmohan Singh
ಕೋಲ್ಕತ್ತಾ, ಜುಲೈ 12: ಅಸ್ಸಾಂನಲ್ಲಿ ಗುವಾಹಟಿ- ಪುರಿ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುವಂತೆ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರು ಸೂಚಿಸಿದ ನಂತರವೂ ರೈಲ್ವೆ ಖಾತೆ ರಾಜ್ಯ ಸಚಿವ ಮುಕುಲ್ ರಾಯ್ ಅವರು ಅಲ್ಲಿಗೆ ಹೋಗದಿರುವುದು ವಿವಾದಕ್ಕೆ ಕಾರಣವಾಗಿದೆ.

ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ಮಾನ ಸಿಗಲಿಲ್ಲ. ಅದು ಪಕ್ಷದ ಮತ್ತೋರ್ವ ನಾಯಕ ದಿನೇಶ್ ತ್ರಿವೇದಿ ಅವರ ಪಾಲಾಗಿದೆ ಎಂದು ಅಸಮಾಧಾನಗೊಂಡ ತೃಣಮೂಲ ನಾಯಕ ಮುಕುಲ್ ಪ್ರಧಾನಿ ಆದೇಶವನ್ನು ಧಿಕ್ಕರಿಸಿ, ತಮ್ಮ ಸಾಮಾಜಿಕ ಹೊಣೆಗಾರಿಕೆಗೆ ಎಳ್ಳು ನೀರು ಬಿಟ್ಟರೆಂದು ತಿಳಿದುಬಂದಿದೆ.

ಪ್ರಧಾನಿಗಳ ಸೂಚನೆ ಹೊರತಾಗಿಯೂ ತಾವು ಸ್ಥಳಕ್ಕೆ ತೆರಳುವುದಿಲ್ಲವೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ರಾಯ್, 'ಈ ಬಗ್ಗೆ ಹೇಳುವುದು ಏನೂ ಇಲ್ಲ. ಹೆಚ್ಚಿನ ಮಾಹಿತಿಗೆ ಉತ್ತರ ಪ್ರಾಂತೀಯ ರೈಲ್ವೆ ಪ್ರಧಾನ ವ್ಯವಸ್ಥಾಪಕರನ್ನು ಪ್ರಶ್ನಿಸಿ' ಎಂದು ಉದ್ದಟತನದ ಉತ್ತರ ನೀಡಿದರು.

ಉತ್ತರ ಪ್ರಾಂತೀಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಎಂ.ಆರ್.ಚಂದ್ರ ಅವರು, ಸಚಿವರು ರೈಲು ಹಳಿ ತಪ್ಪಿದ ರಂಗಿಯಾ ಸ್ಥಳಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದರು. ಆದರೆ ಅಲ್ಲಿನ ಪರಿಸ್ಥಿತಿ ಸಹಜವಾಗಿದ್ದು, ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರಷ್ಟೇ. ಯಾವುದೇ ಸಾವು ಸಂಭವಿಸಿಲ್ಲ ಹಾಗಾಗಿ ಸ್ಥಳಕ್ಕೆ ಭೇಟಿ ನೀಡುವ ಅಗತ್ಯ ಇಲ್ಲ ಎಂದು ಸಲಹೆ ಮಾಡಿದ್ದಾಗಿ ತಿಳಿಸಿದರು.

ಉತ್ತರ ಪ್ರದೇಶದ ಫತೇಪುರ ಜಿಲ್ಲೆಯ ಮಾಲ್ವ ಬಳಿ ಕಲ್ಕಾ ರೈಲು ದುರಂತದ ಸ್ಥಳಕ್ಕೆ ಏಕೆ ಭೇಟಿ ನೀಡಿಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸಿದ ರಾಯ್, ರೈಲ್ವೆ ಖಾತೆ ರಾಜ್ಯ ಸಚಿವ ಕೆ.ಎಚ್.ಮುನಿಯಪ್ಪ ಅವರು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿದ್ದು, ರಕ್ಷಣೆ ಹಾಗೂ ಪರಿಹಾರ ಕಾರ್ಯದ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದಾರೆ ಎಂದು ಉತ್ತರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+