ಸ್ವಾಗತ ಫಲಕ ಕೂಡಾ ಇಂಗ್ಲೀಷ್ ನಲ್ಲಿ ನಾಚಿಕೆಗೇಡು

ಲೋಕೋಪಕಾರಕ್ಕೆ ಮುಂದಾಗಿರುವ ಇಲಾಖೆಯ ಈ ವರ್ತನೆಯನ್ನು ತೀವೃವಾಗಿ ಖಂಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕಾ ಘಟಕ, ವಿದೇಶಿ ಅಕ್ಷರಗಳ ವ್ಯಾಮೋಹಕ್ಕೆ ದೇಶಿ ಆಕಳ ಸಗಣಿಯನ್ನು ಬಳಿಯುವ ಮೂಲಕ ತನ್ನ ಆಕ್ರೋಶ ವ್ಯಕ್ತಪಡಿಸಿದೆ. ಮುಂದಿನ ಮೂರು ದಿನಗಳಲ್ಲಿ ಕನ್ನಡ ಅಕ್ಷರವನ್ನು ಬರೆಯದಿದ್ದರೆ, ಸಂಪೂರ್ಣ ಫಲಕವನ್ನೆ ಕೆಡವಿ ಹಾಕಲಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.
ಈ ನಾಮಫಲಕಕ್ಕೆ ಸಗಣಿ ಬಳಿದ ತಾಲೂಕಾ ಕ.ರ.ವೇ ಅಧ್ಯಕ್ಷ ಮಲ್ಲಾರೆಪ್ಪ ತಳ್ಳಿಹಳ್ಳಿ, ಕನ್ನಡವನ್ನು ಕಾಲಕಸವೆನ್ನುವ ಅಧಿಕಾರಶಾಹಿ ಪ್ರವೃತ್ತಿ ತಾಲೂಕಿನಲ್ಲಿ ಮುಂದುವರೆದಿದ್ದು, ಆಡಳಿತದಲ್ಲಿ ಕನ್ನಡ ಖಡ್ಡಾಯ ಎಂಬ ಸರಕಾರಿ ಸುತ್ತೋಲೆ ಕೇವಲ ಬಾಯಿ ಮಾತಿಗೆ ಮಾತ್ರ ಸೀಮಿತವಾಗಿದೆ. ಹಲವಾರು ಇಲಾಖೆಗಳಲ್ಲಿ ಇಂದಿಗೂ ವ್ಯಾಪಕವಾದ ಪ್ರಮಾಣದಲ್ಲಿ ಆಂಗ್ಲ ಭಾಷೆಯನ್ನು ಬಳಸಲಾಗುತ್ತಿದೆ ಎಂದು ಆಕ್ಷೇಪಿಸಿದ್ದಾರೆ.
ಸವಣೂರ-ಬಂಕಾಪೂರ ರಸ್ತೆಯಲ್ಲಿರುವ ಮಣ್ಣೂರ ಗ್ರಾಮದ ಬಳಿ ಲೋಕೋಪಯೋಗಿ ಇಲಾಖೆ ನಿರ್ಮಿಸಿರುವ ಎರಡು ಪ್ರತ್ಯೇಕ ಸ್ವಾಗತ ಫಲಕದ ತುಂಬೆಲ್ಲ ಇಂಗ್ಲೀಷ್ ಅಕ್ಷರಗಳೇ ರಾರಾಜಿಸುತ್ತಿದೆ. ರಸ್ತೆಯ ಎರಡೂ ಬದಿಗಳಲ್ಲಿ ಕಟ್ಟೆಗಳನ್ನು ಕಟ್ಟಿ ಈ ಫಲಕಗಳನ್ನು ರೂಪಿಸಲಾಗಿದೆ. ಎರಡು ಫಲಕಗಳ ಎರಡೂ ಬದಿಗಳಲ್ಲಿಯೂ ಇಂಗ್ಲೀಷ್ ಅಕ್ಷರಗಳೇ ತುಂಬಿಕೊಂಡಿದ್ದು, ನೆಪ ಮಾತ್ರಕ್ಕೂ ಕನ್ನಡವನ್ನು ಬಳಸದ ಇಲಾಖಾ ಅಧಿಕಾರಿಗಳು, ತಮ್ಮ ಇಂಗ್ಲೀಷ್ ಜಾಣ್ಮೆಯನ್ನು ತೋರಿದ್ದಾರೆ. ಆಡಳಿತದಲ್ಲಿ ಕನ್ನಡ ಎಂಬ ಸರಕಾರದ ಆದೇಶವನ್ನೂ ಉಲ್ಲಂಘಿಸಿದ್ದಾರೆ ಎಂದು ಕ.ರ.ವೇ ಆಕ್ಷೇಪಿಸಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications