ತ್ರಿವಳಿ ಸ್ಫೋಟ: ಈ ಅವಳಿಯ ಹಾವಳಿ ಇರಬಹುದೇ?

ಮತ್ತೊಂದು ದೂರದ ಸಾಧ್ಯತೆ ಎಂದರೆ ಪಾಕ್ ನಲ್ಲಿ ನೆಲೆಸಿರುವ, ಅಲ್ ಖೈದಾದತ್ತ ಸಹಾನುಭೂತಿ ಹೊಂದಿರುವ ಲಷ್ಕರೆ ತಯ್ಬಾ ಪ್ರತ್ಯೇಕತಾವಾದಿ ಸಂಘಟನೆಯತ್ತಲೂ ಸಂಶಯ ಸುಳಿದಾಡುತ್ತದೆ. 2008 ಮುಂಬೈ ಸ್ಫೋಟಕ್ಕೆ ಇದೇ LeT ಕಾರಣವೆಂಬುದು ಜಗಜ್ಜಾಹೀರು ಆದ ಸಂಗತಿ.
ಜಾಗತಿಕ ಬೇಹುಗಾರಿಕೆ ಸಂಸ್ಥೆಯಾದ ಸ್ಟ್ರಾಟಫಾರ್ ಪ್ರಕಾರ ಇಂಡಿಯನ್ ಮುಜಾಹಿದ್ದೀನ್ ಅಲ್ಪ ಮತ್ತು ಸಾಧಾರಣ ಪ್ರಮಾಣದ ಸ್ಫೋಟಕ ಕೃತ್ಯಗಳನ್ನು ಕೈಗೊಳ್ಳಬಲ್ಲ ಸಾಮರ್ಥ್ಯ ಹೊಂದಿದೆ ಅಷ್ಟೆ. ಇದರ ಸದಸ್ಯರು ಸ್ಥಳೀಯ ಮುಸ್ಲಿಮರು. ನೆರೆಯ ಪಾಕಿಸ್ತಾನ ಮತ್ತು ಬಾಂಗ್ಲಾದ ಭಯೋತ್ಪಾದಕ ಸಂಘಟನೆಗಳಿಂದ ಇವರಿಗೆ ತರಬೇತಿ ಮತ್ತು ಬೆಂಬಲ ಸಿಗುತ್ತಿದೆ. ಬಾಂಗ್ಲಾದ ಹರ್ಕತ್ ಉಲ್ ಮುಜಾಹಿದ್ದೀನ್ ಅಲ್ ಇಸ್ಲಾಮಿ ಸಂಘಟನೆಯ ಸದಸ್ಯರೂ ಇದರಲ್ಲಿ ಸಕ್ರಿಯರಾಗಿದ್ದಾರೆ.
2007ರಲ್ಲಿ ಬಾಂಬ್ ಸ್ಫೋಟಗಳ ಹಾವಳಿ ದಾಂಗುಡಿಯಿಟ್ಟಾಗ ಮೊದಲ ಬಾರಿಗೆ ಈ ಸಂಘಟನೆಯ ಹೆಸರು ಕೇಳಿಬಂತು. ಆನಂತರ ಜೈಪುರ, ಬೆಂಗಳೂರು, ಅಹಮದಾಬಾದ್ ಮತ್ತು ನವದೆಹಲಿಯಲ್ಲಿ ಸಂಭವಿಸಿದ ಸ್ಫೋಟಗಳಿಗೆ ಈ ಸಂಘಟನೆಯೇ ಹೊಣೆಹೊತ್ತಿತ್ತು. ತಾಜಾ ಆಗಿ ಇದು 2010 ರಲ್ಲಿ ಪುಣೆಯಲ್ಲಿ ಭಯೋತ್ಪಾದಕ ಕೃತ್ಯವೆಸಗಿತ್ತು.
ಇನ್ನು, ಲಷ್ಕರೆ ತಯ್ಬಾ ದಕ್ಷಿಣ ಏಷ್ಯಾದಲ್ಲಿಯೇ ಅತಿ ದೊಡ್ಡ ಭಯೋತ್ಪಾದಕ ಸಂಘಟನೆಯಾಗಿದೆ. ಕಾಶ್ಮೀರದಲ್ಲಿ ಭಾರತದ ವಿರುದ್ಧ ಜಗಳಕ್ಕಿಳಿಯಲು ಪಾಕ್ ಸೇನೆಯೇ ಈ ಸಂಘಟನೆಗೆ ಕುಮ್ಮಕ್ಕು ನೀಡುತ್ತದೆ. 2001ರಲ್ಲಿ ಸಂಸತ್ ಭವನದ ಮೇಲೆ ದಾಳಿ ನಡೆಸಿದ್ದು ಇದೇ ಪಾಕ್ ಪ್ರೇರಿತ ಉಗ್ರರು ಎಂಬುದು ಭಾರತಕ್ಕೆ ಮನವರಿಕೆಯಾಗುತ್ತಿದ್ದಂತೆ ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ಈ ಭೀತಿಯ ಹಿನ್ನೆಲೆಯಲ್ಲಿ ಮುಂಬೈ ಸ್ಫೋಟದ ನಂತರ ಇದು ತಣ್ಣಗಾಗಿದೆ. ಆದರೂ ವಿಭಿನ್ನ ಹೆಸರುಗಳಲ್ಲಿ ಇದು ಸಕ್ರಿಯವಾಗಿದೆ ಎಂದು ಅಮೆರಿಕವೇ ಹೇಳಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications