ಅನಂತ ಸಂಪತ್ತು : ಇಂದು ಮಧ್ಯಂತರ ತೀರ್ಪು

ಕೇರಳದ ಅನಂತಪದ್ಮನಾಭ ದೇಗುಲದಲ್ಲಿ ಸಿಕ್ಕಿರುವ ಅಪಾರ ಪ್ರಮಾಣದ ಆಸ್ತಿಯನ್ನು ಪಟ್ಟಿ ಮಾಡುವ, ಈ ಪ್ರಕ್ರಿಯೆಯನ್ನು ವಿಡಿಯೋ ಮಾಡುವ ಮತ್ತು ದೇಗುಲಕ್ಕೆ ಭಾರೀ ಭದ್ರತೆ ಒದಗಿಸುವ ಪ್ರಕರಣ ಕುರಿತ ತೀರ್ಪನ್ನು ಸುಪ್ರೀಂಕೋರ್ಟ್ ಶುಕ್ರವಾರಕ್ಕೆ ಕಾದಿರಿಸಿದೆ. ಇದೇ ವೇಳೆ ಬಿ ಕೋಣೆಯನ್ನು ತೆರೆಯುವ ಮೊದಲು ದೇವಪ್ರಶ್ನೆ ಕೇಳಬೇಕೆಂದು ರಾಜಮನೆತನದವರು ಸಲಹೆ ಮಾಡಿದ್ದಾರೆ.
ದೇವರ ಸಿಟ್ಟಿಗೆ ಗುರಿಯಾಗಬೇಕಾದೀತು: ಅನಂತ ಪದ್ಮನಾಭಸ್ವಾಮಿ ದೇವಸ್ಥಾನದ ಕೊನೆಯ ರಹಸ್ಯ ಉಗ್ರಾಣದ ಬಾಗಿಲು ತೆರೆದರೆ ದೇವರ ಸಿಟ್ಟಿಗೆ ಗುರಿಯಾಗಬೇಕಾದೀತು ಎಂದು ತಿರುವಾಂಕೂರು ರಾಜ ಮನೆತನದ ರಾಮ ವರ್ಮ ಸುಪ್ರೀಂಕೋರ್ಟಿಗೆ ತಿಳಿಸಿದ್ದಾರೆ. ಉಗ್ರಾಣವನ್ನು ತೆರೆಯುವ ಮೊದಲು ಶಾಂತಿ ನಡೆಸಿ ದೇವರನ್ನು ಸಂಪ್ರೀತಗೊಳಿಸುವುದು ಒಳಿತು ಎಂದೂ ಅವರು ಸಲಹೆ ಮಾಡಿದ್ದಾರೆ.
ಬಿ ಉಗ್ರಾಣದ ಬಾಗಿಲಿನಲ್ಲಿ ಅಪಾಯದ ಸಂಕೇತವಾಗಿರುವ ನಾಗಮುದ್ರಿಕೆಯಿದೆ. ಈ ಉಗ್ರಾಣವನ್ನು ತೆರೆಯುವುದರಿಂದ ಅಪಶಕುನಗಳು ಉಂಟಾಗಬಹುದು. ಆದ್ದರಿಂದ ಈ ನಿಟ್ಟಿನಲ್ಲಿ ಯಾವುದೇ ನಿರ್ದೇಶನಗಳನ್ನು ಕೊಡಬಾರದೆಂದು ಇಂದು ಸಲ್ಲಿಸಿರುವ ಅಫಿಡವಿಟ್ ನಲ್ಲಿ ಅವರು ಸುಪ್ರೀಂಕೋರ್ಟಿಗೆ ಸಲಹೆ ಮಾಡಿದ್ದಾರೆ.
ಅನಂತ ಪದ್ಮನಾಭ ದೇವರ ಸಿಟ್ಟಿಗೆ ಈಡಾಗದಿರಲು ದೇವ ಪ್ರಶ್ನೆಯಿಟ್ಟ ಬಳಿಕ ಈ ಕುರಿತು ತೀರ್ಮಾನ ಕೈಗೊಳ್ಳುವುದು ಒಳ್ಳೆಯದು. ಈ 'ಕಲ್ಲರ'ವನ್ನು ತೆರೆದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂಬ ನಂಬಿಕೆ ಭಕ್ತರಲ್ಲಿದೆ. ಇದು ಶತಮಾನಗಳಿಂದ ಪಾಲಿಸಿಕೊಂಡು ಬಂದಿರುವ ದೇವಸ್ಥಾನದ ಸಂಪ್ರದಾಯ ಎಂದು ರಾಮ ವರ್ಮ ಪರವಾಗಿ ವಾದಿಸುತ್ತಿರುವ ಕೆ. ಕೆ. ವೇಣುಗೋಪಾಲ್ ಹೇಳಿದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications