ತಿರುಪತಿ ತಿಮ್ಮಪ್ಪನ ದರ್ಶನಭ್ಯಾಗ ಪಡೆದ ಇಸ್ರೋ ಅಧ್ಯಕ್ಷ

ಪಿಎಸ್ಎಲ್ವಿ ಸಿ-17 ಯಶಸ್ವಿಯಾದ ಹಿನ್ನೆಲೆಯಲ್ಲಿ ರಾಧಾಕೃಷ್ಣನ್ ತಿರುಪತಿಗೆ ಭೇಟಿ ನೀಡಿದ್ದಾರೆ. ಅವರು ಕುಟುಂಬ ಸಮೇತ ಇಂದು ತಿರುಪತಿಗೆ ಆಗಮಿಸಿ ಪೂಜೆ ಸಲ್ಲಿಸಿದರು. ಇಂದು ಬೆಳಗ್ಗೆ ವಿಐಪಿ ವಿರಾಮದ ಸಮಯದಲ್ಲಿ ಅವರು ತಿಮ್ಮಪ್ಪನ ದರ್ಶನ ಪಡೆದರು.
ಜಿಸ್ಯಾಟ್ 12 ಉಪಗ್ರಹವನ್ನು ಇಸ್ರೋ ಶುಕ್ರವಾರ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಈ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಯಶಸ್ವಿ ಮೈಲುಗಲ್ಲನ್ನು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ರಾಧಾಕೃಷ್ಣನ್ ಅವರು ಇಂದು ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದಿರುವುದು ವಿಶೇಷ. (ಏಜೆನ್ಸೀಸ್)












Click it and Unblock the Notifications