ಕನ್ನಡ ವಿರೋಧಿ ಬರ್ನಾಡ್ ಮೊರಾಸ್ ರಾಜ್ಯ ಬಿಟ್ಟು ತೊಲಗಲಿ

ಬರ್ನಾಡ್ ಮೊರಾಸ್ ಅವರು ಕನ್ನಡದ ಕ್ರೈಸ್ತರಿಗೆ ಮನ್ನಣೆ ನೀಡದೆ ಅನ್ಯಭಾಷಿಕರಿಗೆ ಮನ್ನಣೆ ನೀಡುತ್ತಿದ್ದಾರೆ. ನಗರದ ಮಹಾಧರ್ಮಾಧ್ಯಕ್ಷರಾಗಿ 7ನೆ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳಲ್ಲಿ ಕನ್ನಡಿಗರಿಗೆ ಯಾವುದೇ ಆದ್ಯತೆ ಸಿಕ್ಕಿಲ್ಲ ಎಂದು ಕ್ರೈಸ್ತ ಸಂಘದ ಪ್ರಧಾನ ಕಾರ್ಯದರ್ಶಿ ದೂರಿದ್ದಾರೆ.
ಮೈಸೂರು ಮಹಾರಾಜರು ನೀಡಿದ ಮಲ್ಲೇಶ್ವರಂ ಸೇಂಟ್ ಪೀಟರ್ ಸೆಮಿನರಿ ಜಾಗದಲ್ಲಿ ಹೊರ ರಾಜ್ಯದ ಕ್ರೈಸ್ತರನ್ನು ತಂದು ಕೂರಿಸಲಾಗಿದೆ.ಅಲ್ಲಿ ಪ್ರಾದೇಶಿಕ ಗುರುಮಠವನ್ನು ಸ್ಥಾಪಿಸಬೇಕೆಂದು ಅವರು ಒತ್ತಾಯಿಸಿದರು.
ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದ್ ಮಾತನಾಡಿ, ಕಳೆದ 25 ವರ್ಷಗಳಿಂದ ಕನ್ನಡ ಕ್ರೈಸ್ತರ ಬಗ್ಗೆ ಹೋರಾಟ ಮಾಡುತ್ತಿದ್ದರೂ ಸರಿಯಾದ ನ್ಯಾಯ ಸಿಕ್ಕಿಲ್ಲ. ಗುರುಪೀಠದಲ್ಲಿ ಕುಳಿತವರು ತಾರಾತಮ್ಯ ಮಾಡುವುದು ಸರಿಯಲ್ಲ. ರಾಜ್ಯದಿಂದ ಬಂದಂಥ ಅನೇಕ ಕ್ರೈಸ್ತ ಗುರುಗಳು ಕನ್ನಡಿಗರಿಗೆ ಅನ್ಯಾಯ ಮಾಡುತ್ತಿದ್ದಾರೆ. ಈ ಪಟ್ಟಿಯಲ್ಲಿ ಡಾ.ಬರ್ನಾಡ್ ಮೊರಾಸ್ ಅವರ ಹೆಸರು ಸೇರಿದೆ ಎಂದರು.
ಕನ್ನಡಕ್ಕೆ ಆದ್ಯತೆ ನೀಡಿ: ನಗರದ ಎಲ್ಲ ಚರ್ಚ್ಗಳಲ್ಲಿ ಕನ್ನಡ ಬಳಸುವಂತಾಗಬೇಕು. ಕನ್ನಡ ಮಾತನಾಡುವ ಗುರುಗಳನ್ನು ನೇಮಕ ಮಾಡಬೇಕು . ಕ್ರೈಸ್ತ ಕನ್ನಡಿಗರಿಗೆ ಬೋರ್ಡಿಂಗ್ ವ್ಯವಸ್ಥೆಯಾಗಬೇಕು. ಬಡ ಮತ್ತು ಗ್ರಾಮೀಣ ಭಾಗದ ಮಕ್ಕಳಿಗೆ ಪರಿಣಾಮಕಾರಿ ಶಿಕ್ಷಣ ನೀಡಲು ಚರ್ಚ್ಗಳು ಸಹಕರಿಸಬೇಕು. ಸೌಲಭ್ಯಗಳನ್ನು ನೀಡಲು ವಿಫಲರಾದರೆ ಬರ್ನಾಡ್ ಮೊರಾಸ್ ಅವರು ರಾಜ್ಯಬಿಟ್ಟು ತೊಲಗಬೇಕು ಎಂದು ಕೈಸ್ತ ಸಂಘಟನೆಗಳು ಒತ್ತಾಯ ಮಾಡಿದೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications