ಪೇಜಾವರ ಶ್ರೀಗಳಿಂದ ಮೈಸೂರು ದಸರಾ ಉದ್ಘಾಟನೆ

ಈ ಆಹ್ವಾನವನ್ನು ಸ್ವೀಕರಿಸಿರುವ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು, ನಾಡಿ ಅತ್ಯಂತ ದೊಡ್ಡ ಮಹೋತ್ಸವವನ್ನು ಉದ್ಘಾಟಿಸಲು ಅವಕಾಶ ನೀಡಿದ್ದು ಸಂಸತ ತಂದಿದೆ. ಅತ್ಯಂತ ಗೌರವದಿಂದ ಈ ಆಹ್ವಾನವನ್ನು ಸ್ವೀಕರಿಸಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ.
ಸೆಪ್ಟೆಂಬರ್ 28ರಿಂದ ಆರಂಭವಾಗುತ್ತಿರುವ ದಸರಾ ಉತ್ಸವಾಚರಣೆಯ ಸಿದ್ಧತೆಯ ಕುರಿತು ಸೋಮವಾರ ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈ ಸಂಗತಿಯನ್ನು ಘೋಷಿಸಿದರು.
80ನೇ ವರ್ಧಂತಿಗೆ ವಿಶ್ವೇಶ ತೀರ್ಥ ಸ್ವಾಮೀಜಿಯವರು ಕಾಲಿಟ್ಟಿರುವ ಸುಸಂದರ್ಭದಲ್ಲಿ ನಾಡಹಬ್ಬದ ಉದ್ಘಾಟನೆಯ ಗೌರವವನ್ನು ಪೇಜಾವರಶ್ರೀಗಳಿಗೆ ನೀಡಲಾಗಿದ್ದು, ಅವರು ಆಹ್ವಾನವನ್ನು ಸ್ವೀಕರಿಸಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದರು.
ಭದ್ರತೆಗೆ ಆದ್ಯತೆ : ಜುಲೈ 13ರಂದು ಮುಂಬೈನಲ್ಲಿ ನಡೆದ ಸರಣಿ ಸ್ಫೋಟದ ಹಿನ್ನೆಲೆಯಲ್ಲಿ 401ನೇ ವೈಭವದ ಮೈಸೂರು ದಸರಾ ಸಂದರ್ಭದಲ್ಲಿ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಭದ್ರತೆಗೆ ಸಂಬಂಧಿಸಿದಂತೆ ಎಲ್ಲಾ ಅನುಕೂಲಗಳನ್ನು ಮಾಡಿಕೊಡಲಾಗುವುದು ಎಂದು ಯಡಿಯೂರಪ್ಪ ನುಡಿದರು.
ಸೆಪ್ಟೆಂಬರ್ 28ರಿಂದ ಆರಂಭವಾಗಿ ಅಕ್ಟೋಬರ್ 6ರಂದು ಮುಗಿಯಲಿರುವ ನವರಾತ್ರಿ ಆಚರಣೆಯ ಸಂದರ್ಭದಲ್ಲಿ ದೇಶ ಮತ್ತು ವಿದೇಶಗಳಿಂದ ಲಕ್ಷಾಂತರ ಜನರು ಪ್ರವಾಹೋಪಾದಿಯಲ್ಲಿ ಮೈಸೂರಿಗೆ ಹರಿದುಬರಲಿದ್ದಾರೆ. ಈ ಕಾರಣದಿಂದಾಗಿ ಭದ್ರತೆಯ ನೆರಳಿನಲ್ಲಿಯೇ ದಸರಾ ನಡೆದರೂ ಆಶ್ಚರ್ಯವಿಲ್ಲ.
ಈ ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಗೋವಿಂದ ಕಾರಜೋಳ, ಮೈಸೂರು ಉಸ್ತುವಾರಿ ಸಚಿವ ಡಾ. ರಾಮದಾಸ್ ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು. ಅಂದ ಹಾಗೆ, ನಾಳೆ ಬೆಳಿಗ್ಗೆ ಮುಖ್ಯಮಂತ್ರಿಗಳು ಆರು ದಿನಗಳ ಮಾರಿಷಸ್ ಪ್ರವಾಸಕ್ಕೆ ಹೊರಡಲಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications