ಮಂಗಳೂರು ವಿಮಾನ ಅಪಘಾತ: 75 ಲಕ್ಷ ಪರಿಹಾರಕ್ಕೆ ಕೋರ್ಟ್ ಆದೇಶ

Mangalore Air Crash
ಎರ್ನಾಕುಲಂ, ಜೂನ್ 20: ಮಂಗಳೂರು ವಿಮಾನ ಅಪಘಾತದಲ್ಲಿ ಒಂದು ವರ್ಷದ ಹಿಂದೆ ಮೃತಪಟ್ಟ ಪ್ರಯಾಣಿಕರ ಕುಟುಂಬದವರಿಗೆ ತಲಾ 75 ಲಕ್ಷ ರುಪಾಯಿ ಪರಿಹಾರ ನೀಡುವಂತೆ ಕೇರಳ ಹೈಕೋರ್ಟ್ ಬುಧವಾರ ಆದೇಶಿಸಿದೆ.

ಈ ಹಿಂದೆ ಏರ್ ಇಂಡಿಯಾ ಅತ್ಯಲ್ಪ ಪರಿಹಾರ ನೀಡಿ ಕೈತೊಳೆದುಕೊಂಡಿತ್ತು. ಆದರೆ ಮಾಂಟ್ರಿಯಾಲ್ ಅಂತಾರಾಷ್ಟ್ರೀಯ ಒಪ್ಪಂದದಂತೆ ಕೇರಳ ಹೈಕೋರ್ಟಿನ ನ್ಯಾ. ಪಿ.ಆರ್. ರಾಮಚಂದ್ರ ಮೆನನ್ ಈ ತೀರ್ಪು ನೀಡಿದ್ದಾರೆ.

ದುಬೈನಿಂದ ಮಂಗಳೂರಿಗೆ ಮರಳುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ 2010ರ ಮೇ 22ರ ಶನಿವಾರ ಮುಂಜಾನೆ 6.30ರಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ರನ್ ಅಪಘಾತಕ್ಕೀಡಾಗಿ 160 ಮಂದಿ ಸಾವಪ್ಪಿದ್ದರು.

ಬೋಯಿಂಗ್ 737ವಿಮಾನದಲ್ಲಿ 4 ಹಸುಗೂಸುಗಳು ಸೇರಿದಂತೆ ಒಟ್ಟು 165 ಮಂದಿ ಪ್ರಯಾಣಿಕರಿದ್ದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗುವ ಸಮಯದಲ್ಲಿ ರನ್ ವೇನಲ್ಲಿ ವಿಮಾನ ಅಪಘಾತಕ್ಕೀಡಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+