ಬೊಗಳೋ ನಾಯಿಗಳ ನಿಯಂತ್ರಣ ಬಿಬಿಎಂಪಿಗೆ ಸೇರಿದ್ದು

ಈ ರೀತಿ ಬೊಗಳೋ ನಾಯಿಗಳಿಗೆ ನಾನು ಉತ್ತರಿಸಬೇಕಿಲ್ಲ. ಅವುಗಳನ್ನು ನಿಯಂತ್ರಿಸುವುದು ಬಿಬಿಎಂಪಿ ಕೆಲಸ ಎಂದು ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಆತ ಏನು ಬಹಿರಂಗ ಮಾಡುತ್ತಾನಂತೆ? ನಾನು ಸುಪ್ರೀಂಕೋರ್ಟ್ ಜಡ್ಜ್ ಆಗಿದ್ದು ಹೇಗೆ ಎಂಬುದೇ? ಅದು ಎಲ್ಲರಿಗೂ ಗೊತ್ತಿರುವ ವಿಷಯ.
ಟೀಕಾಕಾರದಲ್ಲಿ ಹರಿಪ್ರಸಾದ್ ಮೊದಲಿಗರಲ್ಲ, ವೀರಪ್ಪ ಮೊಯ್ಲಿ, ಜನಾರ್ಧನ ಪೂಜಾರಿ, ದಿಗ್ವಿಜಯ್ ಸಿಂಗ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಈ ಪಟ್ಟಿಯಲ್ಲಿ ಸೇರಿದ್ದಾರೆ. ಜನ ಲೋಕಪಾಲ್ ವಿಧೇಯಕ ಆಯೋಗದಲ್ಲಿ ನಾನು ಸೇರಿದ ಮೇಲೆ ಅನಗತ್ಯವಾಗಿ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಸಂತೋಷ್ ಹೆಗ್ಡೆ ಹೇಳಿದರು.
ಧನಂಜಯ್ ಕುಮಾರ್ ಹಾಗೂ ವಿಎಸ್ ಆಚಾರ್ಯ ಭೇಟಿ ಮಾಡಿದ್ದು ನಿಜ. ಅಕ್ರಮ ಗಣಿಗಾರಿಕೆ ನಿಯಂತ್ರಣಕ್ಕೆ ಇದ್ದ ಅವಕಾಶವನ್ನು ಬಿಜೆಪಿ ಸರ್ಕಾರ ಹಾಳುಗೆಡವಿಕೊಂಡ ಪರಿಣಾಮ ಈಗ ಎದುರಿಸುತ್ತಿದೆ ಎಂದು ಹೆಗ್ಡೆ ಹೇಳಿದರು.
ಇದಕ್ಕೂ ಮುನ್ನ ಸಂತೋಷ್ ಹೆಗ್ಡೆ ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ. ಅವರ ಕೈವಾಡ ಇಲ್ಲದೆ ವರದಿ ಸೋರಿಕೆ ಹೇಗೆ ಸಾಧ್ಯ? ಬಿಜೆಪಿ ನಾಯಕರ ಭೇಟಿ ವಿಷಯ ಇಷ್ಟು ದಿನ ಮುಚ್ಚಿಟ್ಟಿದ್ದು ಯಾಕೆ? ರಾಜಕೀಯ ನಾಯಕರಂತೆ ವರ್ತಿಸುವ ಪ್ರಚಾರ ಪ್ರಿಯ ಲೋಕಾಯುಕ್ತ ಹೆಗ್ಡೆ ಅವರ ಪೂರ್ವಾಶ್ರಮದ ಎಲ್ಲಾ ರಹಸ್ಯ ಬಹಿರಂಗಗೊಳಿಸುತ್ತೇನೆ. ಅವರು ಅಧಿಕಾರದಿಂದ ಕೆಳಗಿಳುವುದನ್ನು ಕಾಯುತ್ತಿದ್ದೇನೆ ಎಂದು ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್ ಹೇಳಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications