ಶೋಭಾಗೆ ಗಿಟ್ಟದಿದ್ದರೆ ಪಟ್ಟ ಯಾರು ಏರಲಿದ್ದಾರೆ?

"ನಾನು ಮುಖ್ಯಮಂತ್ರಿ ಸ್ಥಾನದಲ್ಲಿದ್ದರೆ ಆರೋಪ ಬಂದ ತಕ್ಷಣ ರಾಜೀನಾಮೆ ನೀಡುತ್ತಿದ್ದೆ" ಎಂದು ಸಂತೋಷ ಹೆಗಡೆ ಹೇಳಿದ್ದಾರೆ. "ನೈತಿಕತೆ ಇದ್ದರೆ ಕೂಡಲೆ ಯಡಿಯೂರಪ್ಪ ರಾಜೀನಾಮೆ ನೀಡಬೇಕು" ಎಂದು ಹಳೆ ವೈರಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ನುಡಿದಿದ್ದಾರೆ. ಕಾಂಗ್ರೆಸ್ ಅಧಿಕಾರ ಸಿಗದಿದ್ದರೂ ತೊಂದರೆಯಿಲ್ಲ ಯಡಿಯೂರಪ್ಪ ಕೆಳಗಿಳಿಯಲೇಬೇಕು ಎಂದು ಪಟ್ಟುಹಿಡಿದಿದೆ.
ಈ ಎಲ್ಲ ಕೂಗುಗಳಿಗೆ ಉತ್ತರವಾಗಿ, ಮಾರಿಷಸ್ ನಲ್ಲಿ ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳೊಂದಿಗೆ ಜಲಕ್ರೀಡೆಯಾಡುತ್ತಿರುವ ಯಡಿಯೂರಪ್ಪ 'ನಾನ್ಯಾಕೆ ರಾಜೀನಾಮೆ ನೀಡಬೇಕು. ಯಾವುದೇ ಗಣಿಗಾರಿಕೆಗೆ ನಾನು ಪರವಾನಗಿ ನೀಡಿಲ್ಲ' ಎಂದು ಬೆಂಗಳೂರಿಗೂ ಕೇಳುವ ಹಾಗೆ ಕೂಗಿದ್ದಾರೆ. ಅಲ್ಲಿಗೆ ಅವರ ನಿಲುವು, ಜಿಗುಟುತನ ಏನೆಂಬುದು ಮತ್ತೊಮ್ಮೆ ಸಾಬೀತಾದಂತಾಗಿದೆ.
ದೆಹಲಿಯಿಂದ ಬುಲಾವ್ ಬಂದಿದೆ ಎಂಬ ಮಾತು ಕೇಳಿಬಂದಿದೆ. ಕುರ್ಚಿಯಲ್ಲಿ ಅಂಟಿಕೊಳ್ಳುವುದು ಸಾಧ್ಯವಿಲ್ಲ ಎಂಬ ಮಾತುಗಳೂ ಕೇಳಿಬಂದಿವೆ. ಒಂದು ವೇಳೆ, ಕುರ್ಚಿ ತಪ್ಪಿದರೆ ಉತ್ತರಾಧಿಕಾರಿ ಯಾರಾಗಬೇಕು ಎಂಬ ಬಗ್ಗೆಯೂ ಯಡಿಯೂರಪ್ಪ ಲೆಕ್ಕಾಚಾರ ಹಾಕಿದಂತಿದೆ. ಬಲ್ಲ ಮೂಲಗಳ ಪ್ರಕಾರ, ಅವರು ಶೋಭಾ ಕರಂದ್ಲಾಜೆ.
ಶೋಭಾ ಕೈಕೆಳಗೆ ಕೆಲಸ ಮಾಡೋದಾ? ಛೆ... ಎಂಬ ಉದ್ಗಾರಗಳನ್ನು ಅನೇಕರು ತೆಗೆದಿದ್ದಾರೆ. ಇತಿಹಾಸದ ಪುಟಗಳನ್ನು ತೆರೆದು ನೋಡಿದರೆ ಶೋಭಾಗೆ ವಿರೋಧದ ಸುನಾಮಿಯೇ ಏಳಲಿದೆ. ಇದೂ ಸಾಧ್ಯವಾಗದಿದ್ದರೆ ಮತ್ತೊಂದು ಆಪ್ಶನ್ ಯಡಿಯೂರಪ್ಪ ಓಪನ್ ಇಟ್ಟಿದ್ದಾರೆ. ಅದೇ, ಅವರ ಮಗ ಸಂಸದ ರಾಘವೇಂದ್ರ ಬಿವೈ.
ಕುಟುಂಬ ರಾಜಕೀಯಕ್ಕೆ ವಿರೋಧವಾಗಿರುವವರು ಇದನ್ನು ಒಪ್ಪುತ್ತಾರಾ? ವೈ ರಾಘವೇಂದ್ರ ಬಿವೈ? ಅಂತ ಕೇಳುವವರ ಸಂಖ್ಯೆಯೂ ದೊಡ್ಡದಿದೆ. ಆರ್ ಅಶೋಕ್, ಹಳೆ ಆಕಾಂಕ್ಷಿ ಜಗದೀಶ್ ಶೆಟ್ಟರ್, ಮಿಸ್ಟರ್ ಕ್ಲೀನ್ ಸುರೇಶ್ ಕುಮಾರ್ ಹೆಸರೇನಾದರೂ ಬಂದರೆ, ನಡೀರಿ ಚುನಾವಣೆಗೆ ಅನ್ನುವವರೆ ಯಡಿಯೂರಪ್ಪ. ಈ ಸಂಕೋಲೆಯನ್ನು ವರಿಷ್ಠರೇ ಬಿಡಿಸಬೇಕು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications