ಚರ್ಚ್ ದಾಳಿ ಕೇಸು ಹಿಂದಕ್ಕೆ ಪಡೆಯಲು ಮನವಿ

ರಾಜ್ಯ ಸರ್ಕಾರ ಈಗಾಗಲೇ ಚರ್ಚ್ ಮೇಲಿನ ದಾಳಿ ಘಟನೆಗಳ ಕೇಸುಗಳನ್ನು ಹಿಂದಕ್ಕೆ ಪಡೆಯುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಘೋಷಣೆ ಮಾಡಿದ ಮೇಲೂ ಈ ಕೇಸುಗಳಿಗೆ ಸಂಬಂಧಪಟ್ಟು ಸಮನ್ಸಗಳು ಜಾರಿಯಾಗುತ್ತಿರುವ ಬಗ್ಗೆ ನಿಯೋಗ ಕಮಿಷನರ್ ಗಮನ ಸೆಳೆಯಿತು.
ನಂತರ ಮಾತನಾಡಿದ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಮುಖ್ಯಮಂತ್ರಿಗಳು ನಾಲ್ಕು ತಿಂಗಳುಗಳ ಹಿಂದೆಯೇ ಕೇಸುಗಳನ್ನು ಹಿಂದಕ್ಕೆ ಪಡೆಯುವುದಾಗಿ ಹೇಳಿದ್ದರೂ ಅದು ಅನುಷ್ಠಾನವಾಗಿಲ್ಲವೆಂದು ವಿಷಾದಿಸಿದರು. ಈ ನಿಯೋಗದಲ್ಲಿ ಫಾ.ಥೋಮಸ್ ಡಿಸಿಲ್ವಾ, ಫಾ.ಜೆ.ಬಿ.ಕ್ರಾಸ್ತಾ,, ಐವನ್ ಡಿಸೋಜಾ ಸಹಿತ ಪ್ರಮುಖರಿದ್ದರು.












Click it and Unblock the Notifications