ಯುವತಿ ಮೇಲೆ ಅತ್ಯಾಚಾರ, ದರೋಡೆ, ಪೊಲೀಸರಿಗೆ ಸಂಶಯ

ಪೂಜಾ, ಎಚ್ಎಎಲ್ ಬಡಾವಣೆ ಮನೆಯಲ್ಲಿ ಒಬ್ಬರೇ ವಾಸವಾಗಿದ್ದಾರೆ. ರಾತ್ರಿ 2.30ರ ಸುಮಾರಿಗೆ ಅವರ ಮನೆಯೊಳಗೆ ನುಗ್ಗಿದ ಮೂವರು ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಬೆದರಿಸಿದ್ದಾರೆ. ಪೂಜಾ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳು ನಂತರ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದಾರೆ. ಅವರ ಚಿನ್ನದ ಉಂಗುರ ಮತ್ತು ಅಲ್ಮೇರಾದಲ್ಲಿದ್ದ ನಾಲ್ಕು ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತೀವ್ರವಾಗಿ ಗಾಯಗೊಂಡಿರುವ ಪೂಜಾರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಗೆ ನುಗ್ಗಿದವರು ಅಪರಿಚಿತ ಯುವಕರು ಎಂದು ಪೂಜಾ ತಿಳಿಸಿದ್ದಾರೆ. ತೀವ್ರ ಅಘಾತಕ್ಕೊಳಗಾಗಿರುವ ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿಲ್ಲ. ಅವರು ಚೇತರಿಸಿಕೊಂಡ ಬಳಿಕ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ.
ಆದರೆ ಪ್ರಕರಣ ಗೋಜಲುಗೋಜಲಾಗಿದ್ದು, ಹಲವು ಅನುಮಾನಗಳನ್ನು ಹುಟ್ಟುಹಾಕಿವೆ. ಪೂಜಾ ಹೇಳುವ ಪ್ರಕಾರ ಶುಕ್ರವಾರ ಬೆಳಗಿನ ಜಾವ 2.30ರಲ್ಲಿ ತನ್ನ ಲ್ಯಾಪ್ಟಾಪ್ನಲ್ಲಿ ಕೆಲಸ ಮಾಡುತ್ತಿದ್ದಾಗ ಯಾರೋ ಬಂದು ಬಾಗಿಲು ಬಡಿದರು. ಸ್ನೇಹಿತರು ತರಬಹುದೆಂದು ಸಡನ್ ಆಗಿ ಬಾಗಿಲು ತೆರೆದೆ ಎಂದಿದ್ದಾರೆ. ಜತೆಗೆ ಪೂಜಾ ಮೊದಲ ಮಹಡಿಯಲ್ಲಿ ವಾಸವಾಗಿದ್ದು, ಪೊಲೀಸರು ತನಿಖೆಗೆಂದು ಸ್ಥಳಕ್ಕೆ ಬಂದಾಗಲಷ್ಟೇ ನೆರೆಮನೆಯವರಿಗೆ ಘಟನೆ ಬಗ್ಗೆ ತಿಳಿದುಬಂದಿದೆ. ಪೊಲೀಸರು ಪೂಜಾಳ ಮೊಬೈಲಿನ ಕಾಲ್ ಡೀಟೆಲ್ಸ್ ಪರಿಶೀಲಿಸುತ್ತಿದ್ದಾರೆ.
ಬಾಧಿತ ಯುವತಿ ಉತ್ತರ ಭಾರತದವರು. ಖಾಸಗಿ ಕಂಪನಿಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಅವರ ಪೂರ್ವಾಪರಗಳ ಬಗ್ಗೆ ತಿಳಿದುಕೊಂಡಿದ್ದ ವ್ಯಕ್ತಿಗಳೇ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ. ಅವರು ಮನೆಯಲ್ಲಿ ಒಬ್ಬರೇ ಇರುತ್ತಾರೆ ಎಂದು ಖಚಿತಪಡಿಸಿಕೊಂಡೇ ರಾತ್ರಿ ಮನೆಗೆ ನುಗ್ಗಿದ್ದಾರೆ. ಈ ಬಗ್ಗೆ ವಿಸ್ತೃತ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಗಳ ವಿರುದ್ಧ ಜೀವನ್ಬಿಮಾನಗರ ಠಾಣೆಯಲ್ಲಿ ಅತ್ಯಾಚಾರ, ಕೊಲೆ ಯತ್ನ ಮತ್ತು ದರೋಡೆ ಪ್ರಕರಣಗಳು ದಾಖಲಾಗಿವೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications