ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜೀನಾಮೆ ಕೊಡಲಾರೆ : ಗಡ್ಕರಿಗೆ ಸಿಎಂ ಪತ್ರ; ಅನಂತ್ ದಿಲ್ಲಿಗೆ

By Mahesh
|
Google Oneindia Kannada News

Yeddyurappa letter to Nitin Gadkari
ಬೆಂಗಳೂರು ಜು 25: ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಬಿಜೆಪಿಯ ಎಲ್ಲಾ ನಾಯಕರು ಒಗ್ಗಟ್ಟಾಗಿದ್ದೇವೆ ಎಂದು ಪಕ್ಷದ ರಾಷ್ಟ್ರಾಧ್ಯಕ್ಷ ನಿತಿನ್ ಗಡ್ಕರಿ ಅವರಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪತ್ರ ಬರೆದಿದ್ದಾರೆ.

ಲೋಕಾಯುಕ್ತ ಸಂತೋಷ್ ಹೆಗ್ಡೆ ಅವರ ಫೋನ್ ಕದ್ದಾಲಿಕೆ ಆರೋಪದಲ್ಲಿ ಹುರುಳಿಲ್ಲ. ದೂರವಾಣಿ ಕದ್ದಾಲಿಕೆ ಪ್ರಕರಣದ ತನಿಖೆಗೆ ಸಮಿತಿ ರಚಿಸುವಂತೆ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಗೃಹ ಸಚಿವ ಪಿ.ಚಿದಂಬರಂರಿಗೆ ಮನವಿ ಮಾಡುತ್ತೇನೆ. ಬಿಜೆಪಿ ಹೈ ಕಮಾಂಡ್ ಕೂಡಾ ಸಮಿತಿಯ ನಿಗಾ ವಹಿಸಲಿ ಎಂದು ಯಡಿಯೂರಪ್ಪ ತಮ್ಮ ಪತ್ರದಲ್ಲಿ ಬರೆದಿದ್ದಾರೆ.[ವಿಡಿಯೋ ನೋಡಿ]

ಅಕ್ರಮ ಗಣಿಗಾರಿಕೆ ಕುರಿತ ಲೋಕಾಯುಕ್ತ ವರದಿ ಸೋರಿಕೆಯಾಗಿರುವುದರಲ್ಲಿ ನನ್ನ ಕೈವಾಡವಿಲ್ಲ. ಫೋನ್ ಕದ್ದಾಲಿಕೆ, ಭೂ ಹಗರಣ ಬಗ್ಗೆ ಸಮಿತಿ ನೀಡುವ ವರದಿ ನಂತರ ಯಾವುದೇ ಕ್ರಮ ಬೇಕಾದರೂ ಕೈಗೊಳ್ಳಬಹುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಲೋಕಾಯುಕ್ತ ಸಂತೋಷ್ ಹೆಗ್ಡೆ, ಕೇಂದ್ರ ಸಚಿವ ಎಸ್ ಎಂ ಕೃಷ್ಣ , ಮಾಜಿ ಪ್ರಧಾನಿ ದೇವೇಗೌಡ, ಎಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಅವರು ತನಿಖಾ ಸಮಿತಿಯಲ್ಲಿರಲಿ ಎಂದು ಯಡಿಯೂರಪ್ಪ ಸೂಚಿಸಿದ್ದಾರೆ.

ಈ ಮಧ್ಯೆ ಯಡಿಯೂರಪ್ಪ ಅವರ ಪತ್ರ ಸಿಕ್ಕ ಬೆನ್ನಲ್ಲೇ, ಅನಂತ ಕುಮಾರ್ ಅವರನ್ನು ದೆಹಲಿಗೆ ಹೈಕಮಾಂಡ್ ಕರೆಸಿಕೊಂಡಿದೆ. ಗಣಿ ವರದಿ, ಪರ್ಯಾಯ ನಾಯಕತ್ವ ಮುಂತಾದ ವಿಷಯ ಕುರಿತು ಚರ್ಚಿಸುವ ಸಾಧ್ಯತೆಯಿದೆ.

ಭೂ ಹಗರಣ ವಿಚಾರಣೆ ಮುಂದಕ್ಕೆ: ಸಿಎಂ ಸಲ್ಲಿಸಿರುವ ರಿಟ್ ಅರ್ಜಿ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ನ್ಯಾಯಾಧೀಶ ಅಜೀತ್ ಜೆ ಗುಜ್ಜಲ್ ಹಾಗೂ ನಾಗರತ್ನಅವರನ್ನೊಳಗೊಂಡ ವಿಭಾಗೀಯ ಪೀಠ, ವಿಚಾರಣೆಯನ್ನು ಆ.18ಕ್ಕೆ ಮುಂದೂಡಿದೆ.

English summary
Karnataka Chief Minister has sent a letter to Nitin Gadkari stating that he won't resign and PM should intervene in alleged phone tapping case. Mean while Ananth Kumar is off to Delhi to meet BJP high command to talk about forming committee to probe on land scam, phone tapping and other scams
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X