ಮಂಗಳೂರು : ಮೂವರು ಮೀನುಗಾರರು ನಾಪತ್ತೆ
ಮಂಗಳೂರು, ಜು. 26 : ಮೂರು ದಿನಗಳ ಹಿಂದೆ ಮೀನುಗಾರಿಕೆಗೆಂದು ಸಮುದ್ರಕ್ಕೆ ತೆರಳಿದ್ದ ಮೂವರು ಮೀನುಗಾರರು ವಾಪಸ್ ಬಾರದೆ ಕಾಣೆಯಾದ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಂಗ್ರೆ ನಿವಾಸಿಗಳಾದ ಫ್ರಾನ್ಸಿಸ್ ಫ್ರಾಕ್ (23), ಮನೋಹರ್ ಪುತ್ರನ್ (41), ದೇರಳಕಟ್ಟೆಯ ನಿವಾಸಿ ವಿನ್ಸಿ (40)ನಾಪತ್ತೆಯಾಗಿರುವ ಮೀನುಗಾರರಾಗಿದ್ದಾರೆ.
ಇವರು ಬೆಂಗ್ರೆಯ ಲಕ್ಷ್ಮಣ್ ಎಂಬವರಿಗೆ ಸೇರಿದ ಜೈ ಪಾಂಡುರಂಗ ನಾಡ ದೋಣಿಯಲ್ಲಿ ಜು.23ರಂದು ಮಧ್ಯಾಹ್ನ ಒಂದು ಗಂಟೆಗೆ ಮೀನುಗಾರಿಕೆಗೆಂದು ಸಮುದ್ರದಲ್ಲಿ ಹೋದವರು ಸಂಜೆ ಆರು ಗಂಟೆಯ ಹೊತ್ತಿಗೆ ದೋಣಿಯ ಎಂಜಿನ್ ಕೆಟ್ಟಿದೆ ಎಂದು ಮೊಬೈಲ್ ಮೂಲಕ ಕರೆ ಮಾಡಿ ತಿಳಿಸಿದ್ದರು. ಆ ಬಳಿಕ ಅವರ ಸುಳಿವು ಇಲ್ಲ. ಮೊಬೈಲ್ ಸ್ವಿಚ್ ಆಫ್ ಆಗಿದೆ.
ಮೀನುಗಾರರು ಮಂಗಳೂರು ಸಮುದ್ರ ಕಿನಾರೆಯಿಂದ 13 ನಾಟಿಕಲ್ ದೂರ ಸಾಗಿದ್ದರು ಎಂಬ ಮಾಹಿತಿ ಇದೆ. ಸಮುದ್ರದಲ್ಲಿ ಅವರ ಸ್ಥಿತಿ ಏನಾಗಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ತಾವು ಸಂಕಷ್ಟದಲ್ಲಿರುವುದಾಗಿ ಫ್ರಾನ್ಸಿಸ್ ಫ್ರಾಂಕ್ ತನ್ನ ಸಹೋದರಿ ಲವಿನಾ ಫ್ರಾಂಕ್ರಿಗೆ ಪೋನ್ ಮಾಡಿ ತಿಳಿಸಿದ್ದರು. ಇವರು ದೋಣಿಯ ಮಾಲಕ ಹಾಗೂ ನಾಡದೋಣಿ ಮೀನುಗಾರರ ಸಂಘಟನೆಯವರಿಗೆ ಮಾಹಿತಿ ನೀಡಿದ್ದಾರೆ. ಇನ್ನೂಪತ್ತೆಯಾಗದ ಕಾರಣ ಮೂರು ದಿನಗಳ ಬಳಿಕ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
More From
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral













Click it and Unblock the Notifications