ಕಾ.ಪು. ಸಿದ್ದಲಿಂಗಸ್ವಾಮಿ ಪೇಪರ್ ಮಾಡ್ತಾರಂತೆ?

ಇದು ನಿಜವಾದರೆ ಒಂದಷ್ಟು ಮಂದಿಗೆ ಉದ್ಯೋಗಾವಕಾಶವಾಗುತ್ತೆ ಎಂಬ ಸಮಾಧಾನವಿದೆ. ಜೊತೆಗೆ ಇವತ್ತಿನ ಮಟ್ಟಿಗೆ ಕಾ.ಪು.ಸಿದ್ದಲಿಂಗಸ್ವಾಮಿಯವರಿಗೇ ಪ್ರಚಾರದ ಅವಶ್ಯಕತೆಯಿರುವುದರಿಂದ ತಮ್ಮದೇ ಆದ ಪತ್ರಿಕೆಯ ಅವಶ್ಯಕತೆ ಕಂಡು ಬಂದಿದ್ದರೆ ಅದರಲ್ಲಿ ಅಚ್ಚರಿಪಡುವಂತಹದ್ದೇನಿಲ್ಲ.
ಕಳೆದೊಂದು ವರ್ಷದಿಂದ ಮೈಸೂರು ವ್ಯಾಪ್ತಿಯಲ್ಲಿ ಕಾ.ಪು.ಸಿದ್ದಲಿಂಗಸ್ವಾಮಿಯವರ ಪ್ರಭಾವ ಕಂಡು ಬರುತ್ತಿದೆ. ಜೊತೆಯಲ್ಲಿಯೇ ಭವಿಷ್ಯದ ದಿನಗಳಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪ್ರತಿಸ್ಪರ್ಧಿ ಎಂಬಂತೆಯೂ ಬಿಂಬಿಸಲಾಗುತ್ತಿದೆ.
ಹಣವನ್ನು ನೀರಿನಂತೆ ಹರಿಸುತ್ತಿರುವ ಅವರು ಪ್ರಚಾರದ ಬೆನ್ನತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಇಲ್ಲಿನ ಸ್ಥಳೀಯ ಪತ್ರಿಕೆಗಳಿಗೆ ಲಕ್ಷಾಂತರ ರೂಪಾಯಿಯ ಜಾಹೀರಾತು ನೀಡುವುದರ ಜೊತೆಗೆ ಕೆಲವು ಪತ್ರಕರ್ತರಿಗೆ 'ಪ್ರಸಾದ'ವನ್ನು ನೀಡುತ್ತಿರುವುದರಿಂದ ಅವರು ಕೂತರೂ, ನಿಂತರೂ ಅದು ಸುದ್ದಿಯಾಗಿ ಚಿತ್ರಸಹಿತ ಪ್ರಕಟವಾಗುತ್ತಿದೆ.
ಬಹುಶಃ ಪತ್ರಿಕೆಗಳಿಗೆ ಜಾಹೀರಾತು ಹಾಗೂ ಸುದ್ದಿ ಪ್ರಕಟಿಸುವುದಕ್ಕೆ 'ಪ್ರಸಾದ' ನೀಡಿ ಸುಸ್ತಾದ ಕಾ.ಪು.ಸಿದ್ದಲಿಂಗಸ್ವಾಮಿಯವರು ತಾವೇ ಒಂದು ಪತ್ರಿಕೆ ಮಾಡುವ ನಿರ್ಧಾರಕ್ಕೆ ಬಂದಿದ್ದರೆ ಅದನ್ನು ವದಂತಿ ಎಂದು ತಳ್ಳಿ ಹಾಕಲು ಸಾಧ್ಯವಿಲ್ಲ.
ಒಂದು ಮೂಲದ ಪ್ರಕಾರ ಹಿಂದೆ ಮೈಸೂರಿನಿಂದ ಪ್ರಕಟವಾಗಿ ಇದೀಗ ಪ್ರಕಟಣೆ ನಿಲ್ಲಿಸಿರುವ "ಮಹಾನಂದಿ" ಪತ್ರಿಕೆಯ ಟೈಟಲ್ನ್ನು ಖರೀದಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಆದರೆ ಆ ಟೈಟಲ್ ವ್ಯಕ್ತಿಯೊಬ್ಬರ ಬಳಿಯಿದ್ದು ಆತ ಕೋಟಿ ರೂಪಾಯಿಯ ಡಿಮ್ಯಾಂಡ್ ಮಾಡುತ್ತಿದ್ದಾನೆ ಎಂಬ ಸುದ್ದಿಯೂ ಇದೆ.
ಒಂದು ಕಾಲದಲ್ಲಿ ಜನಪ್ರಿಯ ಪತ್ರಿಕೆಯಾಗಿದ್ದ "ಮಹಾನಂದಿ" ಟೈಟಲ್ ಖರೀದಿಸಿ ಪತ್ರಿಕೆಯನ್ನು ಹೊರತಂದರೆ ಪ್ರಸಾರಸಂಖ್ಯೆ ಹೆಚ್ಚಿಸಲು ಅನುಕೂಲವಾಗುತ್ತೆ ಎನ್ನುವುದು ಅವರ ಅಭಿಪ್ರಾಯವಾಗಿರಬಹುದು. ಎಲ್ಲದಕ್ಕೂ ಕಾದುನೋಡಬೇಕಾಗಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications