ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಧ್ಯಾಹ್ನ 3.30ಕ್ಕೆ ಅಕ್ರಮ ಗಣಿಗಾರಿಕೆ ವರದಿ ಸಲ್ಲಿಕೆ

By Mahesh
|
Google Oneindia Kannada News

Lokayukta Santosh Hegde
ಬೆಂಗಳೂರು ಜು 27: ಅಕ್ರಮ ಗಣಿಗಾರಿಕೆ ಕುರಿತ ವರದಿಯನ್ನು ಲೋಕಾಯುಕ್ತ ಎನ್ ಸಂತೋಷ್ ಹೆಗ್ಡೆ ಅವರು ಇಂದು(ಜು.27) ಮಧ್ಯಾಹ್ನ 3.30ರ ಸುಮಾರಿಗೆ ಕರ್ನಾಟಕ ಸರ್ಕಾರಕ್ಕೆ ಸಲ್ಲಿಸಲಿದ್ದಾರೆ. ಗಣಿ ವರದಿ ಆಧಾರದ ಮೇಲೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತದೆ ಎಂಬ ಭರವಸೆ ಇಲ್ಲ ಎಂದು ಸಂತೋಷ್ ಹೆಗ್ಡೆ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ನಾನು ನನ್ನ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಿದ್ದೇನೆ. ಭ್ರಷ್ಟರನ್ನು ಬಯಲಿಗೆಳೆಯುವಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ ಎಂದು ಲೋಕಾಯುಕ್ತರು ಹೇಳಿದ್ದಾರೆ.

ಬಿಎಸ್ ವೈ ಪ್ರತಿಕ್ರಿಯೆ: ವರದಿ ಬಗ್ಗೆ ಚರ್ಚಿಸಲು ಸಚಿವ ಸಂಪುಟ ಸಭೆ ಕರೆಯಲಾಗುವುದು. ನಾನು ದೆಹಲಿ ನಮ್ಮ ವರಿಷ್ಠರೊಡನೆ ಈ ಬಗ್ಗೆ ಚರ್ಚಿಸುತ್ತಿದ್ದೇನೆ. ದೆಹಲಿಗೆ ಕರೆದರೆ ಹೋಗಿ ಬರುತ್ತೇನೆ. ನಮ್ಮದು ದೇವೇಗೌಡರ ಪಕ್ಷವಲ್ಲ,ಬಿಜೆಪಿ ಒಂದು ರಾಷ್ಟ್ರೀಯ ಪಕ್ಷ. ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾನು ಬದ್ಧ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಬಿಜೆಪಿ ಶಾಸಕರು, ಸಚಿವರು ಬೀಡು ಬಿಟ್ಟಿದ್ದು, ಯಡಿಯೂರಪ್ಪ ಅವರ ಜೊತೆ ಸಮಾಲೋಚನೆ ನಡೆಸುತ್ತಿದ್ದಾರೆ.

ಈ ಮಧ್ಯೆ ಮಾಜಿ ರಾಜ್ಯಾಧ್ಯಕ್ಷ ಸದಾನಂದ ಗೌಡರರನ್ನು ಹೈ ಕಮಾಂಡ್ ದೆಹಲಿಗೆ ಕರೆಸಿಕೊಂಡಿದ್ದು, ಸದಾನಂದ ಗೌಡರು ದೀಢೀರ್ ಎಂದು ದೆಹಲಿಗೆ ತೆರಳಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.

English summary
Lokayukta N Santosh Hegde to submit much awaited report on illegal mining to Karnataka Government by today(Jul.27) noon. CM Yeddyurappa said he will discuss with his cabinet ministers and BJP leaders about the report. Lokayukta has no hope that Yeddyurappa govt will take any action based on the report
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X