ಉಪ್ಪು ತಿಂದವರು ನೀರು ಕುಡಿಯಲೇಬೇಕು: ಭಿನ್ನರ ರಾಗ

ಏನ್ ಸಾರು ಯಡಿಯೂರಪ್ಪ ಅವರಿಗೆ ಹೀಗೆ ಆಗಿದೆ ಏನ್ ಹೇಳ್ತೀರಾ? ಅಂದ್ರೆ..'ಉಪ್ಪು ತಿಂದವರು ನೀರು ಕುಡಿಯಲೇಬೇಕು', ಅಕ್ರಮ ಗಣಿಗಾರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರ ವರದಿ ಬಂದ ನಂತರ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕಾಗುತ್ತದೆ. ಕಷ್ಟದಲ್ಲಿ ಕುಸಿಯುತ್ತಿದ್ದಾಗ ಕೈ ಹಿಡಿದು ಮೇಲಕ್ಕೆತ್ತಿದವರನ್ನೇ ಕೆಳಕ್ಕೆ ದೂಡುವ ಜಯಮಾನ ಯಡಿಯೂರಪ್ಪನವರದು ಎಂದು ಮಾಜಿ ಸಚಿವ ಹಾಗೂ ಪಾವಗಡ ಶಾಸಕ ವೆಂಕಟರಮಣಪ್ಪ ಅಭಿಪ್ರಾಯಪಟ್ಟಿದ್ದಾರೆ.
ಆದರೆ ಕಳೆದ ಎರಡೂವರೆ ವರ್ಷಗಳಿಂದ ಯಡಿಯೂರಪ್ಪ ಅವರು ಹತ್ತಿರದಿಂದ ಗಮನಿಸಿದ್ದೇನೆ. ಯಡಿಯೂರಪ್ಪ ರಾಜೀನಾಮೆ ನೀಡುವುದು ಅನುಮಾನ. ಬಿಜೆಪಿಯಲ್ಲಿ ಹೈಕಮಾಂಡ್, ಲೋ ಕಮಾಂಡ್ ಎಲ್ಲವೂ ಯಡಿಯೂರಪ್ಪನವರೇ ಆಗಿದ್ದಾರೆ. ದೆಹಲಿ ಹೈ ಕಮಾಂಡ್ ಎನ್ನುವುದು ನಾಮಕಾವಸ್ಥೆಗೆ ಅಷ್ಟೇ ಎಂದು ವೆಂಕಟರಮಣಪ್ಪ ಹೇಳಿದರು.
ಶಿವಮೊಗ್ಗ, ಸಾಗರ ಕಡೆ ತನ್ನ ಪ್ರಭಾವ ಹೆಚ್ಚಿಸಿಕೊಳ್ಳಲು ಬಯಸಿ ಭಿನ್ನರ ಗುಂಪು ಸೇರಿದ್ದ ಬೇಳೂರು ಗೋಪಾಲಕೃಷ್ಣ ಈಗ ಬೆಕ್ಕಿನ ಮರಿಯಂತೆ ಯಡಿಯೂರಪ್ಪ ಅವರ ಹಿಂದೆ ಬಂದು ಕೈ ಕಟ್ಟಿ ನಿಂತಿದ್ದಾರೆ. ಇನ್ನು ಪಕ್ಷೇತರರಲ್ಲಿ ಸಕತ್ ಟ್ಯಾಲೆಂಟೆಡ್ ವರ್ತೂರು ಪ್ರಕಾಶ್ ಭಿನ್ನತನದ ನಾಟಕ ಆರಂಭಕ್ಕೆ ಮುನ್ನವೇ ಪಕ್ಷ ಬದಲಾಯಿಸಿದ್ದಾರೆ. ಚಿತ್ರದುರ್ಗ, ಹಿರಿಯೂರು ಕಡೆಯ ಗೂಳಿಹಟ್ಟಿ ಶೇಖರ್, ಡಿ ಸುಧಾಕರ್ ಎಲ್ಲೂ ಬಟ್ಟೆ ಹರಿದುಕೊಂಡಿದ್ದು, ಗೊಟರು ಹಾಕಿದ್ದು ನಮ್ಮ ಪ್ರತಿನಿಧಿ ಕಿವಿಗೆ ಬಿದ್ದಿಲ್ಲ.
ಬಯಲಾಟದ ಎಕ್ಸ್ ಪರ್ಟ್ ಶಂಕರಲಿಂಗೇಗೌಡರು ಕುಟುಂಬ ಕಲಹಕ್ಕೆ ಭಿನ್ನಮತ ಲೇಪ ಬಳಿದು ಹಾದಿ ಬೀದಿಯಲ್ಲಿ ಕುಣಿದಿದ್ದಷ್ಟೇ ಬಂತು. ಮತ್ತೆ ಯಡಿಯೂರಪ್ಪ ಪಾಳೆಯದಲ್ಲಿ ಅವರ ನೆರಳು ಸಹ ಸೋಕಲು ಸಾಧ್ಯವಿಲ್ಲ. ರೇಣುಕಾಚಾರ್ಯ ಆರು ಕೊಟ್ಟ ಸಿಎಂ ಪರ ನಿಂತು ಮೂರು ಕೊಟ್ಟ ವಿರೋಧಿಗಳ ಗುಂಪಿಗೆ ಸಡ್ಡು ಹೊಡೆದಿದ್ದಾರೆ. ಕೋತಿ ತಾನು ತಿಂದು ಮೇಕೆ ಮೂತಿಗೆ ಬಳಿದಂತೆ ಬಂಡಾಯ ನಾಟಕವನ್ನು ಯಶಸ್ವಿಯಾಗಿ ಆಡಿ, ಅನ್ಯಥಾ ಶರಣಂ ನಾಸ್ತಿ ಎಂದು ಯಡಿಯೂರಪ್ಪ ಅವರ ಕಾಲು ಹಿಡಿದಿದ್ದಾರೆ.
ಅಂತಿಮವಾಗಿ ಯಡಿಯೂರಪ್ಪ ಅವರಿಗೆ ಆಂತರಿಕವಾಗಿ ಬೆಂಬಲವಿಲ್ಲ ಎಂಬ ಮಾತು ಒಂದರ್ಥದಲ್ಲಿ ನಿಜವಾದರೂ ಯಾರು ಯಡಿಯೂರಪ್ಪ ಅವರನ್ನು ಎದುರಿಸಿ ನಿಲ್ಲುವ ಧೈರ್ಯ ಮಾಡುವುದಿಲ್ಲ. ಯಡಿಯೂರಪ್ಪ ಮತ್ತೊಮ್ಮೆ ತಮ್ಮ ತಂತ್ರಗಾರಿಕೆಯಿಂದ ಎಲ್ಲರಿಗೂ ಚಳ್ಳೆಹಣ್ಣು ತಿನ್ನಿಸುವುದನ್ನು ನಾಡಿನ ಜನತೆ ಕುತೂಹಲದಿಂದ ನೋಡುವ ಕ್ಷಣ ಇನ್ನೇನೂ ಹತ್ತಿರದಲ್ಲಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications